Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಕೇಂದ್ರದ...

ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಕೇಂದ್ರದ ಹೊಸ ಕಾನೂನು

ವಾರ್ತಾಭಾರತಿವಾರ್ತಾಭಾರತಿ29 March 2016 11:56 PM IST
share
ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಕೇಂದ್ರದ ಹೊಸ ಕಾನೂನು

ಬೃಹತ್ ಬಿಲ್ಡರ್‌ಗಳು ಹಾಗೂ ತ್ಯಾಜ್ಯ ಉತ್ಪಾದಕರು ತಮ್ಮ ಕಟ್ಟಡ ನಿರ್ಮಾಣ ಯೋಜನೆಯ ಜೊತೆಗೆ ತ್ಯಾಜ್ಯ ನಿರ್ವಹಣಾ ಯೋಜನೆಯ ವಿವರಗಳನ್ನು ಕೂಡಾ ಇನ್ನು ಮುಂದೆ ಸಲ್ಲಿಸುವುದನ್ನು ನೂತನ ನಿಯಮಗಳು ಕಡ್ಡಾಯಗೊಳಿಸಿವೆ. ಒಂದು ವೇಳೆ ಈ ತ್ಯಾಜ್ಯ ನಿರ್ವಹಣಾ ಯೋಜನೆಯನ್ನು ಸಲ್ಲಿಸದಿದ್ದರೆ ಅವರಿಗೆ ನೂತನ ಕಟ್ಟಡ ನಿರ್ಮಾಣಕ್ಕೆ ಅನುಮತಿಯನ್ನು ನೀಡಲಾಗುವುದಿಲ್ಲ.

ಹೊಸದಿಲ್ಲಿ, ಮಾ.29: ಕಟ್ಟಡಗಳ ನಿರ್ಮಾಣ ಹಾಗೂ ಧ್ವಂಸ ಕಾರ್ಯಾಚರಣೆಯಿಂದ ಉತ್ಪತ್ತಿ ಯಾಗುವ ತ್ಯಾಜ್ಯಗಳನ್ನು ರಸ್ತೆಬದಿ ಅಥವಾ ಚರಂಡಿಗಳಲ್ಲಿ ಎಸೆಯುವುದನ್ನು ನಿಷೇಧಿಸಲು, ಕೇಂದ್ರ ಸರಕಾರವು ಮಂಗಳವಾರ ನೂತನ ನಿಯಮಾವಳಿಗಳನ್ನು ಪ್ರಕಟಿಸಿದೆ. ರಾಜಧಾನಿ ದಿಲ್ಲಿ ಸೇರಿದಂತೆ ಬೃಹತ್ ನಗರಗಳಲ್ಲಿ ಶೇ.20ರಷ್ಟು ಪರಿಸರ ಮಾಲಿನ್ಯಕ್ಕೆ ಕಾರಣವಾಗುವಂತಹ ಧೂಳನ್ನು ಕಡಿಮೆಗೊಳಿಸುವುದೇ ಈ ನಿಯಮಾವಳಿಗಳ ಮುಖ್ಯ ಉದ್ದೇಶವಾಗಿದೆ.

ಕೇಂದ್ರ ಪರಿಸರ ಸಚಿವಾಲಯವು ರೂಪಿಸಿರುವ ‘ಕಟ್ಟಡ ನಿರ್ಮಾಣ ಹಾಗೂ ಧ್ವಂಸ ತ್ಯಾಜ್ಯ ನಿರ್ವಹಣೆ ನಿಯಮಗಳು 2016’ ಪ್ರಕಾರ 10 ಲಕ್ಷಕ್ಕೂ ಅಧಿಕ ಜನಸಂಖ್ಯೆಯಿರುವ ನಗರಗಳಲ್ಲಿ 18 ತಿಂಗಳುಗಳೊಳಗೆ ಹಾಗೂ 5ರಿಂದ 10 ಲಕ್ಷದೊಳಗೆ ಜನಸಂಖ್ಯೆಯಿರುವ ನಗರಗಳಲ್ಲಿ ಎರಡು ವರ್ಷಗಳೊಳಗೆ ಮತ್ತು 5 ಲಕ್ಷಕ್ಕೂ ಕಡಿಮೆ ಜನಸಂಖ್ಯೆಯಿರುವ ನಗರಗಳಲ್ಲಿ ಮೂರು ವರ್ಷಗಳೊಳಗೆ ಸ್ಥಳೀಯಾಡಳಿತಗಳು ತ್ಯಾಜ್ಯ ನಿರ್ವಹಣಾ ಸ್ಥಾವರಗಳನ್ನು ನಿರ್ಮಿಸುವುದು ಕಡ್ಡಾಯವಾಗಿದೆ.

ಬೃಹತ್ ಬಿಲ್ಡರ್‌ಗಳು ಹಾಗೂ ತ್ಯಾಜ್ಯ ಉತ್ಪಾದಕರು ತಮ್ಮ ಕಟ್ಟಡ ನಿರ್ಮಾಣ ಯೋಜನೆಯ ಜೊತೆಗೆ ತ್ಯಾಜ್ಯ ನಿರ್ವಹಣಾ ಯೋಜನೆಯ ವಿವರಗಳನ್ನು ಕೂಡಾ ಇನ್ನು ಮುಂದೆ ಸಲ್ಲಿಸುವುದನ್ನು ನೂತನ ನಿಯಮಗಳು ಕಡ್ಡಾಯಗೊಳಿಸಿವೆ. ಒಂದು ವೇಳೆ ಈ ತ್ಯಾಜ್ಯ ನಿರ್ವಹಣಾ ಯೋಜನೆಯನ್ನು ಸಲ್ಲಿಸದಿದ್ದರೆ ಅವರಿಗೆ ನೂತನ ನಿರ್ಮಾಣಕ್ಕೆ ಅನುಮತಿಯನ್ನು ನೀಡಲಾಗುವುದಿಲ್ಲ.

‘‘ದೇಶದಲ್ಲೇ ಪ್ರಪ್ರಥಮ ಬಾರಿಗೆ ಕೇಂದ್ರ ಸರಕಾರವು ಕಟ್ಟಡ ನಿರ್ಮಾಣ ಹಾಗೂ ಧ್ವಂಸ ತ್ಯಾಜ್ಯ ನಿಯಮಗಳನ್ನು ರೂಪಿಸಿದೆ. ಮಾಲಿನ್ಯದ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸುವ ಉದ್ದೇಶದಿಂದ ಈ ಉಪಕ್ರಮ ಕೈಗೊಳ್ಳಲಾಗಿದೆ. ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಅಂದಾಜಿನ ಪ್ರಕಾರ ದೇಶದಲ್ಲಿ ವಾರ್ಷಿಕವಾಗಿ 530 ದಶಲಕ್ಷ ಟನ್‌ಗಳಷ್ಟು ತ್ಯಾಜ್ಯ ಉತ್ಪಾದನೆಯಾಗುತ್ತದೆ. ಯಾವುದೇ ಕಾನೂನಿನ ಕಟ್ಟುರಾಡುಗಳಿಲ್ಲದೆ, ಈ ತ್ಯಾಜ್ಯಗಳನ್ನು ತೆರೆದ ಬಯಲುಗಳು, ನದಿ, ಚರಂಡಿ, ಅರಣ್ಯ ಪ್ರದೇಶಗಳು,ಹೊಂಡಗಳಲ್ಲಿ ಹಾಗೂ ರಸ್ತೆ ಬದಿಗೆ ಎಸೆಯಲಾಗುತ್ತದೆ ಎಂದು ಜಾವಡೇಕರ್ ತಿಳಿಸಿದ್ದಾರೆ.

ತ್ಯಾಜ್ಯ ಉತ್ಪಾದಕರು ಬೃಹತ್ ಪ್ರಮಾಣದ ತ್ಯಾಜ್ಯವನ್ನು ಮುನ್ಸಿಪಲ್ ಅಡಳಿತಗಳು, ಸಂಗ್ರಹಿಸಿ ಸಂಸ್ಕರಣಾ ಘಟಕಳಿಗೆ ಅವನ್ನು ವಿಲೇವಾರಿ ಮಾಡುವುದಕ್ಕೆ ವಿಶೇಷ ಕಟ್ಟಡ ನಿರ್ಮಾಣಕಾರರಿಗೆ ಶುಲ್ಕವನ್ನು ವಿಧಿಸಲಾಗುವುದೆಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X