ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಮನೆಗೆ ಸಚಿವ ಖಾದರ್ ಭೇಟಿ
ಮಂಗಳೂರು, ಮಾ.29: ನಗರದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾರ ಮನೆಗೆ ಮಂಗಳವಾರ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ಸಂಬಂಕರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭ ಸಚಿವರೊಂದಿಗೆ ಮಾತನಾಡಿದ ಸಂಬಂಕರು ‘ಬಾಳಿಗಾರಿಗೆ ಯಾವುದೇ ಬೆದರಿಕೆ ಕರೆ ಬಂದಿರಲಿಲ್ಲ. ನಗರ ಪೊಲೀಸ್ ಆಯುಕ್ತರು ತಮ್ಮಂದಿಗೆ ನಿಕಟ ಸಂಪರ್ಕದಲ್ಲಿದ್ದು, ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ’ ಎಂದರು.
ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಹಂತಕರು ಎಷ್ಟೇ ಬಲಾಢ್ಯರಾದರೂ ಶೀಘ್ರದಲ್ಲೇ ಪತ್ತೆ ಹಚ್ಚಿ ಬಂಸಲು ಪೊಲೀಸರು ಶಕ್ತರಾಗಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತನಿಖೆ ಸಮಪರ್ಕವಾಗಿ ನಡೆಯುತ್ತಿದೆ ಎಂದರು.
ಮಾಜಿ ಮೇಯರ್ ಮಹಾಬಲ ಮಾರ್ಲ, ಪಾಲಿಕೆ ಸದಸ್ಯರಾದ ಎ.ಸಿ.ವಿನಯರಾಜ್, ಕವಿತಾ ವಾಸು, ಪ್ರಕಾಶ್ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು
Next Story