ಮಿತ್ತಬೈಲು : ಶಾದಿ ಮಹಲ್ಗೆ ಎ.3 ರಂದು ಶಿಲಾನ್ಯಾಸ
ವಿಟ್ಲ, ಮಾ. 30: ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ಮುಹಿಯುದ್ದೀನ್ ಜುಮಾ ಮಸೀದಿ ಅಧೀನದಲ್ಲಿ ನಿರ್ಮಿಸಲುದ್ದೇಶಿಸಿರುವ ಶಾದಿ ಮಹಲ್ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಎ.3 ರಂದು ಸಂಜೆ ನಡೆಯಲಿದೆ ಎಂದು ಮಸೀದಿ ಕಾರ್ಯದರ್ಶಿ ಮುಹಮ್ಮದ್ ಅದ್ದೇಡಿ ತಿಳಿಸಿದರು.
ಮಂಗಳವಾರ ಸಂಜೆ ಬಿ.ಸಿ.ರೋಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಿತ್ತಬೈಲು ಮಸೀದಿ ಪಕ್ಕದ 1 ಎಕ್ರೆ ಜಮೀನಿನಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಶಾದಿಮಹಲ್ ನಿರ್ಮಾಣಗೊಳ್ಳಲಿದ್ದು, ಸಮಸ್ತ ಕೇಂದ್ರ ಮುಶಾವರ ಸದಸ್ಯ ಶೈಖುನಾ ಕೆ.ಪಿ. ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಶಿಲಾನ್ಯಾಸಗೈಯುವರು.
ಮಸೀದಿ ಅಧ್ಯಕ್ಷ ಹಬೀಬುಲ್ಲಾ ಅಧ್ಯಕ್ಷತೆ ವಹಿಸಲಿದ್ದು, ಸಚಿವರುಗಳಾದ ಬಿ. ರಮಾನಾಥ ರೈ, ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯರುಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಐವನ್ ಡಿಸೋಜ, ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ಮಾಜಿ ಸಚಿವ ಬಿ.ಎ. ಮೊಯ್ದಿನ್, ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ, ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಸಹಿತ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಸೀದಿ ಅಧ್ಯಕ್ಷ ಹಬೀಬುಲ್ಲಾ, ಕೊಶಾಧಿಕಾರಿ ಎಸ್.ಎಂ. ಮುಹಮ್ಮದ್ ಅಲಿ, ಸದಸ್ಯರುಗಳಾದ ಅಶ್ರಫ್, ಯೂಸುಫ್ ಶಬ್ನಮ್, ಸಲಾಂ ಹಾಗೂ ಶಾಹುಲ್ ಅದ್ದೇಡಿ ಉಪಸ್ಥಿತರಿದ್ದರು.