ಎ.9 ರಂದು ಬಾಂಬಿಲದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ
ವಿಟ್ಲ, ಮಾ. 30: ವಿಬಿಎಂ ಬಾಂಬಿಲ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪ್ರೀಮಿಯರ್ ಲೀಗ್ ಪಂದ್ಯಾಟವು ಎ. 9 ರಂದು ರಾತ್ರಿ ಬಾಂಬಿಲದಲ್ಲಿ ನಡೆಯಲಿದೆ.
ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿ ಪಂ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ. ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲಿಯಾನ್, ಬಂಟ್ವಾಳ ತಾ.ಪಂ. ಸದಸ್ಯೆ ಧನಲಕ್ಷ್ಮೀ ಸಿ ಬಂಗೇರ, ಕಾವಳಪಡೂರು ಗ್ರಾ.ಪಂ. ಸದಸ್ಯರಾದ ಪಿ. ಜಿನರಾಜ ಆರಿಗ, ಯೂಸುಫ್ ಬಾಂಬಿಲ, ವೀರೇಂದ್ರ ಅಮೀನ್, ಚಂದ್ರಶೇಖರ್ ಕರ್ಣ, ಬಂಟ್ವಾಳ ವಿಜಯಾ ಬ್ಯಾಂಕ್ ಮ್ಯಾನೇಜರ್ ಬೇಬಿ ಕುಂದರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story