Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಉಗ್ರ’ ಯುದ್ಧದಲ್ಲಿ ಮೋದಿ ಮುಖ್ಯ...

‘ಉಗ್ರ’ ಯುದ್ಧದಲ್ಲಿ ಮೋದಿ ಮುಖ್ಯ ಭಾಗೀದಾರ

ಐರೋಪ್ಯ ಸಂಸತ್ ಸದಸ್ಯರ ಅಭಿಮತ

ವಾರ್ತಾಭಾರತಿವಾರ್ತಾಭಾರತಿ30 March 2016 8:39 PM IST
share
‘ಉಗ್ರ’ ಯುದ್ಧದಲ್ಲಿ ಮೋದಿ ಮುಖ್ಯ ಭಾಗೀದಾರ

ಬ್ರಸೆಲ್ಸ್, ಮಾ. 30: ಭಯೋತ್ಪಾದನೆ ವಿರುದ್ಧದ ಜಾಗತಿಕ ಯುದ್ಧದಲ್ಲಿ ಪ್ರಧಾನಿ ನರೇಂದ್ರ ಮೋದಿ ಐರೋಪ್ಯ ಒಕ್ಕೂಟದ ‘‘ಮಹತ್ವದ ಭಾಗೀದಾರ’’ನಾಗಬಹುದು ಎಂದು ಐರೋಪ್ಯ ಸಂಸತ್ತಿನ ಪ್ರಮುಖ ಸದಸ್ಯರು ಇಂದು ಹೇಳಿದ್ದಾರೆ.

ಇಂಥ ವಿಷಯಗಳನ್ನು ನಿಭಾಯಿಸುವಲ್ಲಿ ಭಾರತಕ್ಕೆ ‘‘ನೇರ ಅನುಭವ’’ವಿರುವುದರಿಂದ ಅದು ಈ ಸಮರದಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು ಎಂದು ಅವರು ಬಯಸಿದರು.

ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಬ್ರೆಲ್ಜಿಯಂ ರಾಜಧಾನಿ ಬ್ರಸೆಲ್ಸ್‌ಗೆ ಬುಧವಾರ ಬಂದಿಳಿದ ಮೋದಿಯನ್ನು ಸ್ವಾಗತಿಸಿದ ಸದಸ್ಯರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

‘‘ಭಾರತೀಯ ರಾಜಕೀಯ ನಕಾಶೆಯ ಅತ್ಯಂತ ಮಹತ್ವದ ವ್ಯಕ್ತಿ ಮೋದಿ’’ ಎಂಬುದಾಗಿ ಅವರು ಬಣ್ಣಿಸಿದರು.

‘‘ಭಯೋತ್ಪಾದನೆ ವಿರುದ್ಧದ ಜಾಗತಿಕ ಸಮರದಲ್ಲಿ ಮೋದಿ ಐರೋಪ್ಯ ಒಕ್ಕೂಟದ ಮಹತ್ವದ ಭಾಗೀದಾರನಾಗಬಹುದು ಎಂಬುದಾಗಿ ಐರೋಪ್ಯ ಸಂಸತ್ತು ಭಾವಿಸುತ್ತದೆ’’ ಎಂದು ಇಲ್ಲಿನ ಹೊಟೇಲೊಂದರಲ್ಲಿ ಮೋದಿಯನ್ನು ಭೇಟಿಯಾದ ಬಳಿಕ ಹೇಳಿಕೆಯೊಂದನ್ನು ನೀಡಿದ ಅವರು ತಿಳಿಸಿದರು.

‘‘ಭಯೋತ್ಪಾದನೆಯೊಂದಿಗೆ ವ್ಯವಹರಿಸುವಲ್ಲಿ ಭಾರತಕ್ಕೆ ನೇರ ಅನುಭವವಿದೆ. ಹಾಗಾಗಿ, ಈ ವಿಷಯದಲ್ಲಿ ಐರೋಪ್ಯ ಒಕ್ಕೂಟ ಭಾರತದಿಂದ ತುಂಬಾ ಕಲಿಯಬಹುದಾಗಿದೆ’’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

‘‘ಪ್ರಧಾನಿ ನೇತೃತ್ವದ ಭಾರತೀಯ ನೀತಿ ನಿರೂಪಕರೊಂದಿಗೆ ಐರೋಪ್ಯ ಒಕ್ಕೂಟ ನಿರಂತರವಾಗಿ ಮಾತುಕತೆ ನಡೆಸಬೇಕು. ಮಾತುಕತೆಯ ವೇಳೆ ಪರಸ್ಪರ ಆಸಕ್ತಿಯ ವಿಷಯಗಳಾದ ಸಾಗರ ತೀರ ಭದ್ರತೆ, ಭಯೋತ್ಪಾದನೆ, ಬಾಹ್ಯಾಕಾಶ ಮತ್ತು ಸೈಬರ್ ಅಪರಾಧ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಬೇಕು’’.

ತನ್ನ ಮೂರು ದೇಶಗಳ ನಾಲ್ಕು ದಿನಗಳ ಪ್ರವಾಸದ ಮೊದಲ ಚರಣದಲ್ಲಿ ಮೋದಿ ಬೆಲ್ಜಿಯಂ ರಾಜಧಾನಿ ಬ್ರಸೆಲ್ಸ್ ತಲುಪಿದರು. ಮುಂದಿನ ಚರಣಗಳಲ್ಲಿ ಅವರು ಅಮೆರಿಕ ಮತ್ತು ಸೌದಿ ಅರೇಬಿಯಗಳಿಗೆ ಭೇಟಿ ನೀಡಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X