Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರಪತ್ರ ಹಂಚುತ್ತಿದ್ದ ವಿದ್ಯಾರ್ಥಿಗಳ...

ಕರಪತ್ರ ಹಂಚುತ್ತಿದ್ದ ವಿದ್ಯಾರ್ಥಿಗಳ ಮೇಲೆ ಎಬಿವಿಪಿ, ಆರೆಸ್ಸೆಸ್ ಹಲ್ಲೆ

ಕರಪತ್ರ ಹಂಚುತ್ತಿದ್ದ ವಿದ್ಯಾರ್ಥಿಗಳ ಮೇಲೆ ಎಬಿವಿಪಿ, ಆರೆಸ್ಸೆಸ್ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ30 March 2016 10:13 PM IST
share

 ತುಮಕೂರು, ಮಾ.30: ಹೈದರಾಬಾದ್ ವಿವಿಯ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಮತ್ತು ಜೆಎನ್‌ಯುನ ಕನ್ಹಯ್ಯಕುಮಾರ್ ಅವರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸತ್ಯ ಘಟನೆಗಳ ಕುರಿತ ಕರಪತ್ರಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ಹಂಚುತ್ತಿದ್ದ ಎಐಎಸ್‌ಫ್ ವಿದ್ಯಾರ್ಥಿ ಮುಖಂಡರು ಹಾಗೂ ಎಐಟಿಯುಸಿ ಮುಖಂಡರ ಮೇಲೆ ಎಬಿವಿಪಿ, ಆರೆಸ್ಸೆಸ್ ಮತ್ತು ಭಗತ್ ಯುವಸೇನೆ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ.

ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುವ ಕರಪತ್ರವನ್ನು 10 ವಿದ್ಯಾರ್ಥಿಗಳನ್ನು ಒಳಗೊಂಡ ಎಐಎಸ್‌ಎಫ್ ಕಾರ್ಯಕರ್ತರು ತಲಾ ಇಬ್ಬರ ಐದು ತಂಡಗಳನ್ನಾಗಿ ಮಾಡಿಕೊಂಡು ತುಮಕೂರು ವಿಶ್ವವಿದ್ಯಾನಿಲಯ, ಸರಕಾರಿ ಜೂನಿಯರ್ ಕಾಲೇಜು, ಜನನಿಬೀಡ ಪ್ರದೇಶಗಳಾದ ಟೌನ್‌ಹಾಲ್, ಬಸ್ ನಿಲ್ದಾಣ ಇನ್ನಿತರ ಕಡೆಗಳಲ್ಲಿ ಹಂಚುವ ಕೆಲಸ ಮಾಡುತ್ತಿದ್ದರು. ಸರಕಾರಿ ಜೂನಿಯರ್ ಕಾಲೇಜು ಬಳಿ ಕರಪತ್ರ ಹಂಚುತ್ತಿದ್ದ ನಾಗೇಂದ್ರ ಮತ್ತು ವಿನೋದ್‌ಕುಮಾರ್ ಎಂಬ ವಿದ್ಯಾರ್ಥಿಗಳ ಮೇಲೆ 50ರಿಂದ 60 ಜನರ ಎಬಿವಿಪಿ, ಆರೆಸ್ಸೆಸ್ ಮತ್ತು ಭಗತ್ ಯುವಸೇನೆ ಕಾರ್ಯಕರ್ತರು ಹಲ್ಲೆ ಮಾಡಿ ಕರಪತ್ರ ಹಂಚಿಕೆ ಮಾಡದಂತೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿಗಳು ನಗರದ ಇತರೆಡೆಗಳಲ್ಲಿ ಕರಪತ್ರ ಹಂಚುತ್ತಿದ್ದ ಸ್ನೇಹಿತರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಇದನ್ನು ವಿಚಾರಿಸಲು ಟೌನ್‌ಹಾಲ್ ನಿಂದ ಬಂದ ವಿ.ಚಿನ್ನಪ್ಪ, ಮಂಜುನಾಥ್ ಮತ್ತು ಜ್ಯೋತಿ ಎಂಬ ವಿಧ್ಯಾರ್ಥಿನಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಎಬಿವಿಪಿ, ಆರೆಸ್ಸೆಸ್ ಮತ್ತು ಭಗತ್ ಯುವಸೇನೆ ಕಾರ್ಯ ಕರ್ತರು, ರಸ್ತೆ ಎಂಬುದನ್ನು ಲೆಕ್ಕಿಸದೆ ಸಾರ್ವಜನಿಕರ ಎದುರೆ ಜೂನಿಯರ್ ಕಾಲೇಜು ಮೈದಾನದಿಂದ ಗಾಯಿತ್ರಿ ಟಾಕೀಸ್‌ವರೆಗೆ ಕರ ಪತ್ರ ಹಂಚಿದ ಹಂಚಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡುತ್ತಲೇ ಬಂದಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಠಾಣೆಯ ಪೊಲೀಸರು ಹಲ್ಲೆ ಮಾಡುತ್ತಿದ್ದವರನ್ನು ತಡೆದು ಗಾಯಾಳುಗಳನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿನ್ನಪ್ಪಅವರಿಗೆ ಮುಖ, ಬಲಭುಜ, ಹೊಟ್ಟೆಗೆ ಪೆಟ್ಟಾಗಿದ್ದರೆ, ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಲಿಯುತ್ತಿರುವ ಜ್ಯೋತಿ ಎಂಬ ವಿದ್ಯಾರ್ಥಿನಿಯ ಹೊಟ್ಟೆಗೆ ಬಲವಾದ ಪೆಟ್ಟು ಬಿದ್ದಿದೆ. ಈ ಸಂಬಂಧ ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತುಮಕೂರು ಇತಿಹಾಸದಲ್ಲಿಯೇ ಇದೆ ಮೊದಲ ಬಾರಿಗೆ ಇಂತಹ ಘಟನೆ ನಡೆದಿದ್ದು, ಮತ್ತೊಂದು ಮಂಗಳೂರು ಆಗುವ ಲಕ್ಷಣಗಳು ಕಂಡು ಬರುತ್ತಿದೆ. ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿರುವ ಡಿವೈಎಫ್‌ಐ, ಎಸ್‌ಎಫ್‌ಐ, ಸಿಐಟಿಯು, ಎಐಟಿಯುಸಿ, ಸಿಪಿಐ, ಸಿಪಿಐ(ಎಂ) ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು, ಮುಖಂಡರು, ಹಲ್ಲೆ ಮಾಡಿದವರನ್ನು ಕೂಡಲೆ ಬಂಧಿಸಬೇಕು. ಗಾಯಾಳುಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದ್ದು ತಾತ್ವಿಕ ವಿಚಾರಗಳ ವಿಷಯದಲ್ಲಿ ಹಲ್ಲೆ ಮಾಡುವಂತಹ ನೀಚ ಕೃತ್ಯಕ್ಕೆ ಇಳಿದಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X