Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಪದ್ಬಾಂಧವರಿಗೆ ಇನ್ನಿಲ್ಲ ಕಿರುಕುಳ

ಆಪದ್ಬಾಂಧವರಿಗೆ ಇನ್ನಿಲ್ಲ ಕಿರುಕುಳ

ವಾರ್ತಾಭಾರತಿವಾರ್ತಾಭಾರತಿ30 March 2016 11:56 PM IST
share
ಆಪದ್ಬಾಂಧವರಿಗೆ ಇನ್ನಿಲ್ಲ ಕಿರುಕುಳ

ನೂತನ ಕಾನೂನಿಗೆ ಸುಪ್ರೀಂ ಅಸ್ತು

ಹೊಸದಿಲ್ಲಿ, ಮಾ.30: ಅಪಘಾತದ ಸಂದರ್ಭದಲ್ಲಿ ಗಾಯಾಳುಗಳಿಗೆ ನೆರವಾಗುವ ಆಪದ್ಬಾಂಧವರಿಗೆ ಯಾವುದೇ ಕಿರುಕುಳವಾಗದಂತೆ ಅವರ ಹಿತಾಸಕ್ತಿಯನ್ನು ರಕ್ಷಿಸುವ ಉದ್ದೇಶದಿಂದ ಕೇಂದ್ರ ಸರಕಾರದ ಅಧಿಸೂಚನೆಯೊಂದಕ್ಕೆ ಜಸ್ಟಿಸ್ ವಿ.ಗೋಪಾಲ ಗೌಡ ಅವರ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ತನ್ನ ಒಪ್ಪಿಗೆ ನೀಡಿದೆ. ಇದರ ಫಲವಾಗಿ ಇನ್ನು ಮುಂದೆ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಯಾ ಪೊಲೀಸರಿಗೆ ಮಾಹಿತಿ ನೀಡಲು ಯಾರೂ ಯಾವುದೇ ರೀತಿಯಲ್ಲಿ ಹಿಂಜರಿಯುವ ಅಗತ್ಯವಿಲ್ಲ.

ಕೋರ್ಟಿನ ಒಪ್ಪಿಗೆಯ ಹಿನ್ನೆಲೆಯಲ್ಲಿ ಸರಕಾರದ ನಿಯಮಾವಳಿಗಳು ಈಗ ಕಾನೂನಿನ ರೂಪ ಪಡೆದಿದ್ದು ಎಲ್ಲಾ ರಾಜ್ಯಗಳೂ ಇವುಗಳಿಗೆ ಬದ್ಧವಾಗ ಬೇಕಿದೆ.

ಅಪಘಾತದ ಆಪದ್ಬಾಂಧವರ ಹಿತಾಸಕ್ತಿಗಳನ್ನು ರಕ್ಷಿಸಲು ನೀತಿಗಳನ್ನು ರೂಪಿಸಬೇಕೆಂಬ ಸುಪ್ರೀಂ ಕೋರ್ಟ್ ಸಲಹೆಯ ಮೇರೆಗೆ ಮೇ 12, 2015 ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಿತ್ತು.

ಎನ್‌ಜಿಒ ಸೇವ್‌ಲೈಫ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ. ತನ್ನ ಅಪೀಲಿನಲ್ಲಿ ಫೌಂಡೇಶನ್ ದೇಶದಲ್ಲಿ 2014ರಲ್ಲಿ 4 ಲಕ್ಷ ರಸ್ತೆ ಅಪಘಾತಗಳು ಸಂಭವಿಸಿವೆಯೆಂದೂ ಅಪಘಾತಗಳಲ್ಲಿ ಸಾವಿನ ಸಂಖ್ಯೆ 2013ರಲ್ಲಿ 1.37 ಲಕ್ಷದಿಂದ 2014ರಲ್ಲಿ 1.39 ಲಕ್ಷಕ್ಕೆ ಏರಿತ್ತೆಂದೂ ತಿಳಿಸಿತ್ತು.

ವಿಚಾರಣೆ ಸಂದರ್ಭ ಕೋರ್ಟಿನ ಮುಂದೆ ವೀಡಿಯೋ ಕಾನ್ಫರೆನ್ಸಿಂಗ್ ಮುಖಾಂತರ ಆತನ ಹೇಳಿಕೆಯನ್ನು ದಾಖಲಿಸಬಹುದು. ಆದರೆ ಆ ವ್ಯಕ್ತಿ ಸ್ವ ಇಚ್ಛೆಯಿಂದ ಕೋರ್ಟ್ ಮುಂದೆ ಹೇಳಿಕೆ ನೀಡಬಯಸಿದರೆ ಈ ಪ್ರಕ್ರಿಯೆಯನ್ನು ಒಂದೇ ವಿಚಾರಣಾವಧಿಯಲ್ಲಿ ಮುಗಿಸಬಹುದಾಗಿದೆ.ಆದರೆ ಒಬ್ಬ ಆಪದ್ಬಾಂಧವ ಸ್ವಇಚ್ಛೆಯಿಂದ ತನ್ನ ಹೆಸರನ್ನು ನೀಡುವುದಕ್ಕೆ ಯಾವುದೇ ಅಡ್ಡಿಯಿಲ್ಲವಾಗಿದೆ.

ಯಾವುದೇ ಆಸ್ಪತ್ರೆ ಕೂಡ ಆಪದ್ಬಾಂಧವನಿಂದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಪ್ರವೇಶಾತಿ ದರ ಅಥವಾ ರಿಜಿಸ್ಟ್ರೇಶನ್ ದರ ಪಾವತಿಸುವಂತೆ ಬೇಡಿಕೆ ಸಲ್ಲಿಸುವ ಹಾಗಿಲ್ಲ. ಕಾನೂನು ಸುವ್ಯವಸ್ಥೆ ರಾಜ್ಯಗಳ ಜವಾಬ್ದಾರಿಯಾಗಿರುವುದರಿಂದ ಕೇಂದ್ರ ಈ ಬಗ್ಗೆ ರಾಜ್ಯಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲವೆಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ಕೋರ್ಟ್ ಮುಂದೆ ವಿಚಾರಣೆ ಸಂದರ್ಭ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X