Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶತಮಾನೋತ್ಸವ ಸಂಭ್ರಮದಲ್ಲಿ ಮೂಡುಬಿದಿರೆ...

ಶತಮಾನೋತ್ಸವ ಸಂಭ್ರಮದಲ್ಲಿ ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಬ್ಯಾಂಕ್

8 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು

ವಾರ್ತಾಭಾರತಿವಾರ್ತಾಭಾರತಿ31 March 2016 6:48 PM IST
share
ಶತಮಾನೋತ್ಸವ ಸಂಭ್ರಮದಲ್ಲಿ ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಬ್ಯಾಂಕ್

 ಮೂಡುಬಿದಿರೆ: ಶತಮಾನೋತ್ಸವ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿರುವ ಮೂಡುಬಿದಿರೆಯ ಕೋ- ಆಪರೇಟಿವ್ ಸರ್ವಿಸ್ ಬ್ಯಾಂಕ್ ಎಪ್ರಿಲ್ 2ರಿಂದ 9ರವರೆಗೆ 8 ದಿನಗಳ ಕಾಲ ಪ್ರತೀ ದಿನ ಸಂಜೆ 6ರಿಂದ ಸಹಕಾರ ಚಿಂತನ ಸರಣಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ನಡೆಸಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ಕೆ ಅಮರನಾಥ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶತಮಾನೋತ್ಸವದ ಪ್ರಯುಕ್ತ 2011 ಕ್ಕೆ ಭವ್ಯಸೌಧವನ್ನು ನಿರ್ಮಿಸಿದೆ. ಶತಮಾನೋತ್ಸವ ಅಂಗವಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪ್ರತೀ ತಿಂಗಳು ವಿಶೇಷ ಕಾರ್ಯಕ್ರಮಗಳನ್ನು ನಡೆಸಿದೆ. ನವಂಬರ್ 9ರಂದು ಶತಮಾನೋತ್ಸವ ಸಮಾರಂಭ ನಡೆಯಲಿದ್ದು ಭವ್ಯ ಮೆರವಣಿಗೆ ನಡೆಯಲಿದೆ. ಬ್ಯಾಂಕಿನ ಅಧ್ಯಕ್ಷರುಗಳಾಗಿ ಸೇವೆ ಸಲ್ಲಿಸಿದ 9 ಮಂದಿ ಮಾಜಿ ಅಧ್ಯಕ್ಷರುಗಳ ಭಾವಚಿತ್ರಗಳನ್ನು ಅನಾವರಣಗೊಳಿಸಲಾಗುವುದು. ಹಾಗೂ ಬ್ಯಾಂಕಿನ ನೂತನ ಹವಾನಿಯಂತ್ರಿತ ಕೊಠಡಿಯ ಉದ್ಘಾಟನೆ ನಡೆಯಲಿದೆ ಎಂದು ಅವರು ತಿಳಿಸಿದರು. ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬ್ಯಾಂಕಿನಲ್ಲಿ ಕೈಗೊಂಡ ವಿವಿಧ ಯೋಜನೆಗಳ ಮಾಹಿತಿ ನೀಡಿದರು.

  ಸಹಕಾರ ಚಿಂತನ ಕಾರ್ಯಕ್ರಮದಲ್ಲಿ ಎ.2ರಂದು ಕಾನೂನು ಮತ್ತು ಸಹಕಾರ ವಿಷಯದ ಕುರಿತು ವಕೀಲ ಎಂ. ಕೆ ವಿಜಯ ಕುಮಾರ್ ಮಾತನಾಡಲಿದ್ದಾರೆ. ಬ್ಯಾಂಕಿನ ಅಧ್ಯಕ್ಷ ಕೆ. ಅಮರನಾಥ ಶೆಟ್ಟಿ ಉದ್ಘಾಟಿಸಲಿದ್ದಾರೆ. ಚೌಟರ ಅರಮನೆಯ ಕುಲದೀಪ ಎಂ. ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಕಾಶ್ ಮಹಾದೇವನ್ ಮಂಗಳೂರು ಇವರಿಂದ "ಕರೋಕೆ ಗಾನ ಮಾಧುರ್ಯ ನಡೆಯಲಿದೆ. ಎ.3ರಂದು ಆಧ್ಯಾತ್ಮದಲ್ಲಿ ಸಹಕಾರ ಎಂಬ ವಿಷಯದ ಕುರಿತು ಚಿಂತನೆ ನಡೆಯಲಿದ್ದು ಜೈನ್ ಹೈಸ್ಕೂಲ್ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಳ ಮಾತನಾಡಲಿದ್ದಾರೆ. ವೆಂಕಟರಮಣ ಹನುಮಂತ ದೇವಸ್ಥಾನದ ಆಡಳಿತ ಮೊಕ್ತೇಸರ ಉಮೇಶ್ ಪೈ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಪ್ರಶಸ್ತಿ ಪುರಸ್ಕೃತ ಭಾಸ್ಕರ ಕೊಗ್ಗ ಕಾಮತ್ ಇವರಿಂದ ‘ಚೂಡಾಮಣಿ ಲಂಕಾದಹನ’ ಗೊಂಬೆಯಾಟ ನಡೆಯಲಿದೆ. ಎ.4ರಂದು ಮಾಧ್ಯಮದಲ್ಲಿ ಸಹಕಾರ ಎಂಬ ವಿಷಯದ ಕುರಿತು ಆಳ್ವಾಸ್ ಕಾಲೇಜಿನ ಪತ್ರಿಕೋಧ್ಯಮ ವಿಬಾಗದ ಮುಖ್ಯಸ್ಥೆ ಡಾ. ಮೌಲ್ಯ ಜೀವನ್ ಮಾತನಾಡಲಿದ್ದಾರೆ. ಉದ್ಯಮಿ ಅರುಣ್ ಮೆಂಡಿಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಪಿಂಗಾರ ಕಲಾ ತಂಡ ಮೂಡುಬಿದಿರೆ ಇವರಿಂದ ಹಾಸ್ಯ ರಸ ಸಂಜೆ ಹಾಗೂ ವೈವಿಧ್ಯ ನೃತ್ಯ ಕಾರ್ಯಕ್ರಮ ನಡೆಯಲಿದೆ. ಎ. 5ರಂದು ಇತಿಹಾಸದಲ್ಲಿ ಸಹಕಾರ ವಿಷಯದ ಕುರಿತು ಇತಿಹಾಸ ತಜ್ಞ ಡಾ. ಪುಂಡಿಕಾ ಗಣಪಯ್ಯ ಭಟ್ ಮಾತನಾಡಲಿದ್ದಾರೆ. ಉದ್ಯಮಿ ಅಬುಲ್ ಆಲ ಪುತ್ತಿಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಕಲಾವಿದರ ಕೂಡುವಿಕೆಯಿಂದ ‘ಶ್ರೀ ರಾಮ ದರ್ಶನ’ ತಾಳಮದ್ದಲೆ ನಡೆಯಲಿದೆ. ಎ. 6ರಂದು ಯುವಜನತೆ ಮತ್ತು ಸಹಕಾರ ಎಂಬ ವಿಷಯದಲ್ಲಿ ನಿವೃತ್ತ ಅಧ್ಯಾಪಕ ಗೋಪಾಲ್ ಮಾತನಾಡಲಿದ್ದಾರೆ. ಮೂಡುಬಿದರೆ ವಲಯದ ಮುಖ್ಯ ಧರ್ಮ ಗುರು ರೆ.ಫಾ ಆಸ್ಟಿನ್ ಪೆರಿಸ್ ಅಧ್ಯಕ್ಷತೆ ವಹಿಸಲಿದ್ದಾರೆ. ದೀಪ್ತಿ ಬಾಲಕೃಷ್ಣ ಇವರಿಂದ ‘ಭಕ್ತಿ ಭಾವ ಸಂಗಮ’ ನಡೆಯಲಿದೆ. ಎ. 7ರಂದು ಸಮಾಜ ಮತ್ತು ಸಹಕಾರ ಎಂಬ ವಿಷಯದ ಕುರಿತು ಸಹಕಾರ ತರಬೇತಿ ಕೇಂದ್ರದ ಪ್ರಾಂಶುಪಾಲ ಎಂ.ಎಂ ಶ್ಯಾಮಲಾ ಮಾತನಾಡಲಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಈಶ್ವರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿದುಶಿ ವಿದ್ಯಾ ಮನೋಜ್ ಇವರಿಂದ ‘ನೃತ್ಯ’ ಸಂಧ್ಯಾ ಕಾರ್ಯಕ್ರಮ ನಡೆಯಲಿದೆ. ಎ. 9ರಂದು ಸಮಾರೋಪ ನಡೆಯಲಿದ್ದು ಕೃಷ್ಣೇ ಗೌಡ ಮತ್ತು ಬಳಗ ಮೈಸೂರು ಇವರಿಂದ ಮಾತಿನ ಹಾಸ್ಯ ಸಿಂಚನ ಹಾಗೂ ವಿಜಯ ಕುಮಾರ್ ಕೋಡಿಯಾಲ್ ಬೈಲ್ ಇವರಿಂದ ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದರು.  ಬ್ಯಾಂಕಿನ ನಿರ್ದೇಶಕರಾದ ಗಣೇಶ್ ನಾಯಕ್, ಎಂ. ಪದ್ಮನಾಭ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X