Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜನರ ಹೆದರಿಕೆಯನ್ನು ‘ನಗದೀಕರಿಸುವ’...

ಜನರ ಹೆದರಿಕೆಯನ್ನು ‘ನಗದೀಕರಿಸುವ’ ಟ್ರಂಪ್‌ಗೆ ಒಬಾಮ ಖಂಡನೆ

ವಾರ್ತಾಭಾರತಿವಾರ್ತಾಭಾರತಿ31 March 2016 9:05 PM IST
share
ಜನರ ಹೆದರಿಕೆಯನ್ನು ‘ನಗದೀಕರಿಸುವ’ ಟ್ರಂಪ್‌ಗೆ ಒಬಾಮ ಖಂಡನೆ

ವಾಶಿಂಗ್ಟನ್, ಮಾ. 31: ಜಗತ್ತಿನಾದ್ಯಂತ ಇತ್ತೀಚೆಗೆ ನಡೆಯುತ್ತಿರುವ ಭಯೋತ್ಪಾದನೆ ದಾಳಿಗಳ ಹಿನ್ನೆಲೆಯಲ್ಲಿ ಭೀತಿ ಹುಟ್ಟಿಸಿ ಜನರನ್ನು ‘‘ವಿಭಜಿಸುವವರ’’ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಮತ್ತು ಉಪಾಧ್ಯಕ್ಷ ಜೋ ಬೈಡನ್ ಜನರಿಗೆ ಕರೆ ನೀಡಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಮುಂಚೂಣಿ ಅಭ್ಯರ್ಥಿ ಆಕಾಂಕ್ಷಿ ಡೊನಾಲ್ಡ್ ಟ್ರಂಪ್‌ರನ್ನು ಅವರು ಗುರಿಯಾಗಿಸಿ ಈ ಹೇಳಿಕೆ ನೀಡಿರುವಂತೆ ಕಂಡುಬರುತ್ತಿದೆ.

ಭಯೋತ್ಪಾದಕರ ಉದ್ದೇಶ ‘‘ನಮ್ಮ ನಂಬಿಕೆಯನ್ನು ದುರ್ಬಲಗೊಳಿಸುವುದಾಗಿದೆ’’ ಹಾಗೂ ಸಹಾಯ ಮತ್ತು ಆಶ್ರಯದ ಅಗತ್ಯ ಅತ್ಯಂತ ಹೆಚ್ಚಾಗಿ ಬೇಕಾಗಿರುವ ಜನರಿಂದ ಇತರರನ್ನು ದೂರ ಮಾಡುವುದಾಗಿದೆ ಎಂದು ಒಬಾಮ ನುಡಿದರು.

‘‘ಈ ದಾಳಿಗಳು ಭಯ ಮತ್ತು ವಿಭಜನೆಯನ್ನು ಹುಟ್ಟು ಹಾಕಬಹುದಾಗಿದೆ. ಅಪರಿಚಿತರನ್ನು ಹೊರಹಾಕಲು, ನಮ್ಮಂತೆ ಕಾಣದಿರುವವರ ಮೇಲೆ ದಾಳಿ ನಡೆಸಲು ಅಥವಾ ನಾವೀಗ ಮಾಡುತ್ತಿರುವಂತೆ ಪ್ರಾರ್ಥಿಸಲು ನಮ್ಮನ್ನು ಪ್ರೇರೇಪಿಸಬಹುದಾಗಿದೆ. ಅದೇ ವೇಳೆ, ಸಹಾಯ ಮತ್ತು ಆಶ್ರಯ ಅತ್ಯಂತ ಹೆಚ್ಚು ಬೇಕಾಗಿರುವ ಜನರಿಗೆ ಬೆನ್ನು ತಿರುಗಿಸಲು ನಮಗೆ ಪ್ರಚೋದನೆ ನೀಡಬಹುದಾಗಿದೆ’’ ಎಂದರು.

‘‘ಭಯೋತ್ಪಾದಕರ ಉದ್ದೇಶವೂ ಅದೇ. ನಮ್ಮ ನಂಬಿಕೆಯನ್ನು ದುರ್ಬಲಗೊಳಿಸುವುದು, ನಮ್ಮ ಶ್ರೇಷ್ಠ ಭಾವನೆಗಳನ್ನು ದುರ್ಬಲಗೊಳಿಸುವುದು ಹಾಗೂ ನಮ್ಮಲ್ಲಿರುವ ಒಳ್ಳೆಯತನವನ್ನು ನಾಶಪಡಿಸಲು ಪ್ರಯತ್ನಿಸುವುದು’’ ಎಂದು ಬುಧವಾರ ನಡೆದ ಈಸ್ಟರ್ ಪ್ರೇಯರ್ ಬ್ರೇಕ್‌ಫಾಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೇಳಿದರು.

 ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಪಾಧ್ಯಕ್ಷ ಜೋ ಬೈಡನ್ ಮಾತನಾಡಿ, ಬ್ರಸೆಲ್ಸ್, ಟರ್ಕಿ ಮತ್ತು ಪಾಕಿಸ್ತಾನಗಳಲ್ಲಿ ನಡೆದ ಭಯೋತ್ಪಾದಕ ದಾಳಿಗಳ ಹಿನ್ನೆಲೆಯಲ್ಲಿ ಜನರಲ್ಲಿ ಭಯ ಮೂಡಿರುವುದು ಸಹಜವೇ ಆಗಿದೆ ಎಂದರು. ಆದರೆ, ಈ ಭಯವನ್ನು ಸ್ವಾರ್ಥಕ್ಕಾಗಿ ನಗದೀಕರಿಸುವುದು ಸಾರಾಸಗಟು ಅಸ್ವೀಕಾರಾರ್ಹವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಗರ್ಭಪಾತ ಮಾಡಿಸಿಕೊಳ್ಳುವ ಮಹಿಳೆಗೆ ಶಿಕ್ಷೆಯಾಗಬೇಕು: ಟ್ರಂಪ್

 ಗರ್ಭಪಾತ ಮಾಡಿಸಿಕೊಳ್ಳುವ ಮಹಿಳೆಯರಿಗೆ ಶಿಕ್ಷೆಯಾಗಬೇಕಾಗಿದೆ ಎಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ.

ಆದಾಗ್ಯೂ, ಶಿಕ್ಷೆ ಏನು ಎಂಬುದನ್ನು ಅವರು ಸ್ಪಷ್ಟಪಡಿಸಲಿಲ್ಲ.

ವಿಸ್‌ಕೋನ್ಸಿನ್‌ನ ಟೌನ್‌ಹಾಲ್‌ನಲ್ಲಿ ನಡೆದ ಚರ್ಚಾಕೂಟವೊಂದರಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಈ ವಿಷಯದಲ್ಲಿ ಡೊನಾಲ್ಡ್ ಮಿತ್ತು ಎಂಎಸ್‌ಎನ್‌ಬಿಸಿಯ ಕ್ರಿಸ್ ಮ್ಯಾಥ್ಯೂಸ್ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.

ಗರ್ಭಪಾತವನ್ನು ನಿಷೇಧಿಸಬೇಕೆ ಎಂಬ ಮ್ಯಾಥ್ಯೂಸ್‌ರ ಪ್ರಶ್ನೆಗೆ, ‘‘ಅದಕ್ಕೆ ಶಿಕ್ಷೆ ವಿಧಿಸಬೇಕು’’ ಎಂದು ಟ್ರಂಪ್ ಪ್ರತಿಪಾದಿಸಿದರು.

ಗರ್ಭಪಾತವನ್ನು ಸುಪ್ರೀಂ ಕೋರ್ಟ್ ಕಾನೂನುಬದ್ಧಗೊಳಿಸಿದ ಬಳಿಕ ಅಮೆರಿಕದಲ್ಲಿ ಈ ವಿಷಯ ಭಾರೀ ಚರ್ಚೆಯ ವಿಷಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X