Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ಸ್ಕಾರ್ಫ್ ವಿವಾದ -...

ಸುಳ್ಯ: ಸ್ಕಾರ್ಫ್ ವಿವಾದ - ವಿದ್ಯಾರ್ಥಿಗಳಿಂದ ಪ್ರತಿಭಟನೆ, ಮಾತುಕತೆಯಲ್ಲಿ ಇತ್ಯರ್ಥ

ವಾರ್ತಾಭಾರತಿವಾರ್ತಾಭಾರತಿ31 March 2016 10:04 PM IST
share
ಸುಳ್ಯ: ಸ್ಕಾರ್ಫ್ ವಿವಾದ - ವಿದ್ಯಾರ್ಥಿಗಳಿಂದ ಪ್ರತಿಭಟನೆ, ಮಾತುಕತೆಯಲ್ಲಿ ಇತ್ಯರ್ಥ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಫೋಟೋ ಸೆಶನ್ ವೇಳೆ ಸ್ಕಾರ್ಫ್ ಧರಿಸದಂತೆ ಹೇಳಿದ ವಿಚಾರ ವಿವಾದಕ್ಕೆ ಕಾರಣವಾಗಿ ಕ್ಯಾಂಪಸ್ ಫ್ರಂಟ್ ಘಟಕದ ವಿದ್ಯಾರ್ಥಿಗಳು ಪ್ರತಿಭಟಿಸಿದ ಘಟನೆ ನಡೆದಿದೆ.

ಶೈಕ್ಷಣಿಕ ವರ್ಷದ ಕೊನೆಯಲ್ಲಿ ವಿದ್ಯಾರ್ಥಿಗಳ ಗ್ರೂಫ್ ಫೋಟೋ ತೆಗೆಯುವ ಕಾರ್ಯಕ್ರಮ ಗುರುವಾರ ಹಮ್ಮಿಕೊಳ್ಳಲಾಗಿತ್ತು. ತರಗತಿವಾರು ಫೋಟೋ, ಎನ್‌ಎಸ್‌ಎಸ್, ಎನ್‌ಸಿಸಿ ಘಟಕಗಳ ಫೋಟೋ ತೆಗೆಯಲಾಯಿತು. ರೆಡ್‌ಕ್ರಾಸ್ ಯುವ ಘಟಕದ ಫೋಟೋ ತೆಗೆಯುವ ಸಂದರ್ಭ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸದಂತೆ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಸೂಚಿಸಿದ್ದರೆಂದೂ, ಸ್ಕಾರ್ಫ್ ತೆಗೆಯದಿದ್ದರೆ ಪ್ರಾಂಶುಪಾಲರಿಗೆ ದೂರು ನೀಡುವುದಾಗಿಯೂ ತಿಳಿಸಿದ್ದರೆನ್ನಲಾಗಿದೆ. ಆದರೆ ವಿದ್ಯಾರ್ಥಿನಿಯರು ಮತ್ತು ಅವರ ಜೊತೆಗಿದ್ದ ಅವರ ಸಮುದಾಯದ ವಿದ್ಯಾರ್ಥಿಗಳು ಸ್ಕಾರ್ಫ್ ತೆಗೆಯುವುದಕ್ಕೆ ನಿರಾಕರಿಸಿದರು ಎನ್ನಲಾಗಿದೆ. ಇದಕ್ಕೂ ಮುನ್ನ ತೆಗೆದ ಎಲ್ಲಾ ಫೋಟೋಗಳಲ್ಲೂ ಹಲವು ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿಯೇ ಫೋಟೋ ತೆಗೆದಿದ್ದು, ಈಗ ಸ್ಕಾರ್ಫ್ ತೆಗೆಸುವುದು ಸರಿಯಲ್ಲ ಎನ್ನುವುದು ಅವರ ವಾದವಾಗಿತ್ತು. ಬಳಿಕ ಗ್ರೂಫ್ ಫೋಟೋ ತೆಗೆಯುವುದನ್ನು ಸ್ಥಗಿತಗೊಳಿಸಲಾಯಿತು. ಈ ವಿಚಾರ ವಿವಾದಕ್ಕೆ ಕಾರಣವಾಗಿ ಗುರುವಾರ ಕ್ಯಾಂಪಸ್ ಫ್ರಂಟ್‌ನ ಸುಳ್ಯ ಘಟಕದ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.

 ಎಸ್‌ಐ ಚಂದ್ರಶೇಖರ್, ಕ್ಯಾಂಪಸ್‌ನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಜವರೇ ಗೌಡ, ಪ್ರಾಂಶುಪಾಲ ಮೇಜರ್ ಗಿರಿಧರ ಗೌಡ, ಹಾಗೂ ಪ್ರತಿಭಟನೆ ನಿರತ ವಿದ್ಯಾರ್ಥಿಗಳ ಮುಖಂಡರು ಮತ್ತು ಯುವ ರೆಡ್ ಕ್ರಾಸ್ ಘಟಕದ 5 ವಿದ್ಯಾರ್ಥಿನಿಯದ್ದು, ಪ್ರಾಂಶುಪಾಲರ ಚೇಂಬರ್‌ನಲ್ಲಿ ಮಾತುಕತೆ ನಡೆಯಿತು. ಬಳಿಕ ಪ್ರತಿಭಟನಾ ನಿರತರಲ್ಲಿಗೆ ಆಗಮಿಸಿದ ಎಸ್‌ಐ ಹಾಗೂ ಪ್ರಾಂಶುಪಾಲರು ಪ್ರಕರಣ ಸೌಹಾರ್ದಯುವಾಗಿ ಮುಕ್ತಾಯವಾಗಿದೆ ಎಂದರು. ಈ ಸಂದರ್ಭ ಉಪನ್ಯಾಸಕಿ ತಮ್ಮ ಮುಂದೆ ಕ್ಷಮೆ ಕೇಳಬೇಕೆಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು. ಫೋಟೋ ತೆಗೆಯುವ ವೇಳೆ ಸ್ಕಾರ್ಫ್ ತೆಗೆಯಬೇಕೆಂದು ಯಾರೂ ಒತ್ತಾಯ ಮಾಡುವುದಿಲ್ಲ . ಮುಂದೆ ಕಾಲೇಜಿನ ಆಡಳಿತ ಮಂಡಳಿ ಈ ಕುರಿತಂತೆ ತೀರ್ಮಾನ ಕೈಗೊಳ್ಳುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಬಳಿಕ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X