Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಂದ್ರಗುತ್ತಿ ಹೋಬಳಿಯ ಬಾವಿಗಳಲ್ಲಿ...

ಚಂದ್ರಗುತ್ತಿ ಹೋಬಳಿಯ ಬಾವಿಗಳಲ್ಲಿ ಅಚ್ಚರಿ

ಬರಗಾಲದಲ್ಲೂ ನೀರು ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ31 March 2016 10:13 PM IST
share
ಚಂದ್ರಗುತ್ತಿ ಹೋಬಳಿಯ ಬಾವಿಗಳಲ್ಲಿ ಅಚ್ಚರಿ

           nಮುಹಮ್ಮದ್ ಆರೀಫ್   

ಸೊರಬ,ಮಾ.31: ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿಕೊಂಡಿದ್ದು, ಜನ ಜಾನುವಾರುಗಳು ನೀರಿಗಾಗಿ ಪರದಾಡುತ್ತಿವೆ. ಆದರೆ ಇವೆಲ್ಲದರ ನಡುವೆ, ತಾಲೂಕಿನ ಚಂದ್ರಗುತ್ತಿ ಹೋಬಳಿಯ ಬಂದಿಗೆ ಗ್ರಾಮದಲ್ಲಿನ ಕೆಲವು ತೆರದ ಬಾವಿಗಳಲ್ಲಿ ನೀರು ತುಂಬಿರುವುದು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ. ತಾಲೂಕನ್ನು ರಾಜ್ಯ ಸರಕಾರ ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ಮತ್ತೊಂದಡೆ ಕುಡಿಯುವ ನೀರಿಗಾಗಿ ಬಹುತೇಕ ಗ್ರಾಮಗಳಲ್ಲಿ ಹಾಹಾಕಾರ ಉಂಟಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನಕ್ಕೆ ಬಹುತೇಕ ಕೆರೆಕಟ್ಟೆ, ಬಾವಿಗಳು ಒಣಗುತ್ತಿರುವ ಬೆನ್ನಲ್ಲೆ ಬಂದಿಗೆ ಗ್ರಾಮದ ಸರಕಾರಿ ಬಾವಿಯೂ ಸೇರಿದಂತೆ ಮೂರು ಖಾಸಗಿ ಬಾವಿಗಳು ಕೆಲ ದಿನಗಳ ಹಿಂದೆ ಸಂಪೂರ್ಣ ಬತ್ತಿದ್ದು, ದುರಸ್ತಿಗೆ ಯೋಜಿಸಲಾಗಿತ್ತು. ಆದರೆ, ಬಾವಿ ಒಣಗಿದ 10-15 ದಿನಗಳ ಬಳಿಕ ಬಾವಿಗೆ ಪೂರ್ವ ದಿಕ್ಕಿನಿಂದ ಸಣ್ಣಗೆ ನೀರು ಜಿನುಗಲಾರಂಭಿಸಿತು. ಜಿನುಗುವಿಕೆಯ ಕೆಲವೇ ಗಂಟೆಗಳಲ್ಲಿ ಬಾವಿಗೆ ಸುಮಾರು 25 ಅಡಿ ನೀರು ಸಂಗ್ರಹವಾಗಿದೆ. ಬರೋಬ್ಬರಿ 45 ಅಡಿ ಆಳದಲ್ಲಿರುವ ಈ ಬಾವಿಗಳಲ್ಲಿ ಈಗ 25 ಅಡಿ ನೀರು ಸಂಗ್ರಹಣೆಯಾಗಿದ್ದು, ದಿನಕ್ಕೆ ಮೂರು ಸಾವಿರ ಲೀಟರ್ ಗೂ ಹೆಚ್ಚು ನೀರು ತೆಗೆೆದರೂ ನೀರಿನ ಮಟ್ಟ ಕಡಿಮೆಯಾಗುತ್ತಿಲ್ಲ ಎನ್ನುತ್ತಾರೆ ಗ್ರಾಮಸ್ಥರು. ಮಳೆಗಾಲವಲ್ಲದ ದಿನಗಳಾಗಿದ್ದು, ಸಮೀಪದ ನೀರಿನ ಮೂಲಗಳು ಸಹ ಬತ್ತಿವೆ. ಗ್ರಾಮದ ಅಕ್ಕಪಕ್ಕದಲ್ಲಿರುವ ನೀರಿನ ಮೂಲಗಳಿಗೆ ಯಾವುದೇ ಬ್ಯಾರೇಜ್, ಅಣೆಕಟ್ಟುಗಳಿಲ್ಲ, ಪ್ರಕೃತಿ ವಿಸ್ಮಯವನ್ನು ಗ್ರಾಮಸ್ಥರು ಒಳಿತಿಗೋ, ಕೆಡುಕಿಗೋ ಅರ್ಥವಾಗದೇ ತುಸು ಸಂತಸದೊಂದಿಗೆ ತುಸು ಆತಂಕವನ್ನೂ ವ್ಯಕ್ತಪಡಿಸುತ್ತಿದ್ದಾರೆ. ಪ್ರಾದೇಶಿಕವಾಗಿ ಮಲೆನಾಡು ಪ್ರದೇಶವಾಗಿರುವ ಇಲ್ಲಿ ಜಂಬಿಟ್ಟಿಗೆ ಮಣ್ಣು ಇದೆ. ಕುರುಚಲು ಅರಣ್ಯ ಪ್ರದೇಶವಿದ್ದು, ಪೂರ್ವದಿಕ್ಕಿಗೆ ಕಿರು ಎರಡು ಗುಡ್ಡಗಳಿವೆ, ಕಳೆದ ವರ್ಷದಲ್ಲಿ ಈ ಗುಡ್ಡವೂ ಸೇರಿದಂತೆ ಇರುವ ಅಬಸಿ ಅರಣ್ಯ ಪ್ರದೇಶಕ್ಕೆ ಅರಣ್ಯ ಇಲಾಖೆಯವರು ಸಿಪಿಟಿ ತೆಗೆಸಿದ್ದಾರೆ. ಹಾಗಾಗಿ, ಗುಡ್ಡದ ನೀರು ವ್ಯರ್ಥ ಹರಿದು ಹೋಗದೆ ನೀರು ನಿಂತದ್ದೇನೋ ಹೌದು. ತುಸು ಅರಣ್ಯ ರಕ್ಷಣೆಯೂ ಆಗಿದೆ, ಗ್ರಾಮಸ್ಥರು ಅರಣ್ಯ ಲೂಟಿ ಮಾಡದೆ, ಒಂದಿಷ್ಟು ಗಿಡ ಮರಗಳನ್ನು ಸಹಾ ಉಳಿಸಿಕೊಂಡಿದ್ದಾರೆ. ಬಹುತೇಕ ಈ ಸಿಪಿಟಿಯಿಂದಾಗಿ ಹೀಗೆ ನೀರಿನ ಸೆಲೆ ಸೃಜಿಸಿರಬಹುದು ಎಂಬ ಅಭಿಪ್ರಾಯವೂ ಗ್ರಾಮದ ಕೆಲವರಿಂದ ಕೇಳಿಬಂದಿದೆ. ಇನ್ನು ಕೆಲವರು ಹತ್ತಿರದ ಜಮೀನೊಂದರಲ್ಲಿ ಬೋರ್‌ವೆಲ್‌ಲ್ ನಿಂದ ಜಮೀನಿಗೆ ನೀರು ಹಾಯಿಸುತ್ತಿರುವುದರಿಂದ ನೀರು ಬಂದಿದೆ ಎಂಬ ಅಭಿಪ್ರಾಯವಿದೆಯಾದರೂ ಒಮ್ಮತದ ಅಭಿಪ್ರಾಯವಿಲ್ಲ. ಒಂದಡೆ ಅರಣ್ಯ ನಾಶ, ಮತ್ತೊಂದಡೆ ಬೆಳೆಯುತ್ತಿರುವ ವಿಜ್ಞಾನ, ಹಾಗೂ ತಂತ್ರಜ್ಞಾನಗಳು ಎಷ್ಟೇ ಮುಂದು ವರೆದಿದ್ದರೂ ಸಹ ಪ್ರಸ್ತುತ ಕಾಲಘಟ್ಟದಲ್ಲಿ ಪ್ರಕೃತಿ ಒಂದಲ್ಲಾ ಒಂದು ರೀತಿ ವಿಸ್ಮಯವನ್ನು ಸೃಷ್ಟಿಸುತ್ತಾ ಕೆಲವೊಮ್ಮೆ ಎಚ್ಚರಿಕೆಯ ಸಂದೇಶವನ್ನು ನೀಡುತ್ತಿದೆ. ಹಾಗೂ ಕೆಲವೊಮ್ಮೆ ಮನುಷ್ಯನಿಗೆ ಉಪಯೋಗಿಯಾಗಿ ಬದಲಾಗುತ್ತಿದೆ. ಒಟ್ಟಾರೆಯಾಗಿ ನೀರನ್ನು ಅನಾವಶ್ಯಕವಾಗಿ ವ್ಯಯಿಸದೇ, ಮಿತವಾಗಿ ಬಳಸುವ ಮೂಲಕ ನೀರು-ಅರಣ್ಯ ಹಾಗೂ ಪ್ರಕೃತಿಯ ರಕ್ಷಣೆ ನಮ್ಮೆಲ್ಲರೆ ಹೊಣೆಯಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X