Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲೆಯ ಪ್ರಥಮ ಬಯೋಗ್ಯಾಸ್ ಘಟಕ...

ಜಿಲ್ಲೆಯ ಪ್ರಥಮ ಬಯೋಗ್ಯಾಸ್ ಘಟಕ ಉದ್ಘಾಟನೆಗೆ ಸಿದ್ಧ

ಕಾರ್ಕಳ ಪುರಸಭೆಯ ಮತ್ತೊಂದು ವಿನೂತನ ಪ್ರಯೋಗ

ವಾರ್ತಾಭಾರತಿವಾರ್ತಾಭಾರತಿ31 March 2016 11:43 PM IST
share
ಜಿಲ್ಲೆಯ ಪ್ರಥಮ ಬಯೋಗ್ಯಾಸ್ ಘಟಕ ಉದ್ಘಾಟನೆಗೆ ಸಿದ್ಧ

ಮುಹಮ್ಮದ್ ಶರೀಫ್ ಕಾರ್ಕಳ
ಕಾರ್ಕಳ, ಮಾ.31: ಉಡುಪಿ ಜಿಲ್ಲೆಯ ಪ್ರಪ್ರಥಮ ಬಯೋಗ್ಯಾಸ್ ಘಟಕ ಕಾರ್ಕಳದಲ್ಲಿ ಪುರಸಭೆ ವ್ಯಾಪ್ತಿಯ ತೆಳ್ಳಾರು ಹತ್ತನೆ ವಾರ್ಡ್‌ನ ಶಬರಿ ಆಶ್ರಮದ ಆವರಣದಲ್ಲಿ ಸ್ಥಾಪನೆಗೊಂಡಿದ್ದು, ಇದೀಗ ಉದ್ಘಾಟನೆಗೆ ಸಿದ್ಧಗೊಂಡಿದೆ. ನಗರ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಡಂಪಿಂಗ್ ಯಾರ್ಡ್ ಬಳಕೆಯಲ್ಲಿದ್ದರೂ, ಮುಂದೊಂದು ದಿನ ನಗರ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಕಷ್ಟ ಎನ್ನುವ ಪರಿಸ್ಥಿತಿ ನಿರ್ಮಾಣವಾಗಬಹುದು ಎನ್ನುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಒಂದು

ಹಂತದಲ್ಲಿ ಇದು ಪ್ರಥಮ ಪ್ರಯೋಗವೆನಿಸಿದರೂ, ಮುಂದೆ ಅದೇ ದೂರದೃಷ್ಟಿಯನ್ನಿಟ್ಟುಕೊಂಡ ಕಾರ್ಕಳ ಪುರಸಭೆಯು ಕಸದಿಂದ ರಸ ಎನ್ನುವ ಪ್ರಯತ್ನಕ್ಕೆ ಈ ಬಯೋಗ್ಯಾಸ್ ಘಟಕ ಮಾದರಿಯಾಗಲಿದೆ. ಉಡುಪಿ ಜಿಲ್ಲೆಯಲ್ಲೇ ಪ್ರಥಮವಾಗಿ ಬಾರಿಗೆ ಈ ಯೋಜನೆಯನ್ನು ಕಾರ್ಕಳದಲ್ಲಿ ಅನುಷ್ಠಾನಗೊಳಿಸಲಾಗಿದೆ. ಇದೀಗ ಘಟಕ ಸ್ಥಾಪನೆಗೊಂಡಿದ್ದು, ಅಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಉತ್ಪಾದನೆಯಾಗುವ ಮಾನವ ತ್ಯಾಜ್ಯ ಹಾಗೂ ಪು ಸಭೆ ವ್ಯಾಪ್ತಿಯಲ್ಲಿ ಉತ್ಪಾದಿತ ಹಸಿ-ಒಣ ಕಸಗಳನ್ನು ಬಳಸಿಕೊಳ್ಳಲು ನಿರ್ಧರಿಸಿದೆ. ಉತ್ಪಾದಿತ ಗ್ಯಾಸ್ ಹಾಗೂ ವಿದ್ಯುಚ್ಛಕ್ತಿ ಹಾಸ್ಟೆಲ್‌ಗೆ ಬಳಕೆಯಾಗಲಿದೆ.

ಎಂಟು ಟನ್ ಘನತ್ಯಾಜ್ಯ: ಪುರಸಭೆ ವ್ಯಾಪ್ತಿಯು 23.06 ಚ.ಕಿ.ಮೀ ವಿಸ್ತೀರ್ಣ ಹೊಂದಿದ್ದು, 93 ಕಿ.ಮೀ ಉದ್ದದ ರಸ್ತೆ ಹೊಂದಿದೆ. 10,500 ಕಟ್ಟಡಗಳಿವೆ. 25,800 ಜನಸಂಖ್ಯೆ ಹೊಂದಿದೆ. ದಿನವೊಂದಕ್ಕೆ ಸರಾಸರಿ 8 ಟನ್ ಘನತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಪುರಸಭೆಯು ಆರು ವಾಹನಗಳಿಂದ ಪ್ರತಿ ದಿನ ಎಲ್ಲಾ ಕಟ್ಟಡಗಳಿಂದ ವರ್ಗೀಕೃತ ಘನತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿದೆ. ಕರಿಯಕಲ್ಲು ಪ್ರದೇಶದಲ್ಲಿನ 20.03 ಎಕ್ರೆ ಹೊಂಡಭರ್ತಿ ಜಾಗದಲ್ಲಿ ಸಂಸ್ಕರಣೆ ಮಾಡಲಾಗುತ್ತಿದೆ. ತ್ಯಾಜ್ಯದ ಪ್ರಾಥಮಿಕ ಸಂಗ್ರಹಣೆಯಲ್ಲಿ ಶೇ.95ರಷ್ಟು ತ್ಯಾಜ್ಯದ ವರ್ಗೀಕರಣದಲ್ಲಿ ಶೇ.70ರಷ್ಟು ಪ್ರಗತಿ ಸಾಧಿಸಲಾಗಿದೆ. 2014-15ನೆ ಸಾಲಿನ 13ನೆ ಹಣಕಾಸು ಮತ್ತು ರಾಜ್ಯ ಆಯ-ವ್ಯಯದ ಅನುದಾನದಲ್ಲಿ 37 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೋಳ್ಳತ್ತಿರುವ ಈ ಬಯೋಗ್ಯಾಸ್ ಘಟಕಕ್ಕೆ ಪ್ರತಿ ದಿನಕ್ಕೆ 2 ಟನ್ ತಾಜ್ಯವನ್ನು ಉಪಯೋಗಿಸಿ ಬಯೋಗ್ಯಾಸ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

 ಎರಡರಿಂದ ಮೂರು ಸಿಲಿಂಡರ್: ಪ್ರತಿ ದಿನ ಗ್ಯಾಸ್ ಉತ್ಪಾದನೆಗೊಂಡ ಎರಡರಿಂದ ಮೂರು ಸಿಲಿಂಡರ್‌ಗಳನ್ನು ಪಡೆಯಬಹುದಾಗಿದೆ. ಅಲ್ಲದೆ ಉಳಿದ ಗ್ಯಾಸನ್ನು ವಿದ್ಯುಚ್ಛಕ್ತಿಗೆ ಪರಿವರ್ತಿಸಿ ನಿರಂತರ ಐದು ಗಂಟೆಗಳ ಕಾಲ ಉರಿಸಬಹುದು. ಇದರಿಂದಗ್ಯಾಸ್ ಸಮಸ್ಯೆ ಮತ್ತು ವಿದ್ಯುಚ್ಛಕ್ತಿ ಸಮಸ್ಯೆಯನ್ನು ನೀಗಿಸಬಹುದು. ಬಯೋಗ್ಯಾಸ್ ಪ್ರಕ್ರಿಯೆ ಮುಗಿದ ಬಳಿಕ ಅದರಲ್ಲಿ ದೊರೆಯುವ ಲವಣ, ಖನಿಜಾಂಶದಿಂದ ಸೇರಿರುವ ತ್ಯಾಜ್ಯ ನೀರು ಮತ್ತು ಗೊಬ್ಬರವನ್ನು ಗಿಡಗಳಿಗೆ ಮತ್ತು ತೋಟಗಳಿಗೆ ಬಳಸುವುದರಿಂದ ಫಲವತ್ತಾದ ಬೆಳೆಗಳನ್ನು ಪಡೆಯಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X