Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೇತಾಜಿ ಸಾವಿನ ರಹಸ್ಯ ಮತ್ತಷ್ಟು ಗೋಜಲು

ನೇತಾಜಿ ಸಾವಿನ ರಹಸ್ಯ ಮತ್ತಷ್ಟು ಗೋಜಲು

ವಾರ್ತಾಭಾರತಿವಾರ್ತಾಭಾರತಿ31 March 2016 11:50 PM IST
share

ಹೈದರಾಬಾದ್, ಮಾ:31 : ನೇತಾಜಿ ಸುಭಾಸ್‌ಚಂದ್ರ ಬೋಸ್ ಅವರ ಸಾವಿನ ಸುತ್ತವಿರುವ ರಹಸ್ಯ ಮತ್ತಷ್ಟು ಗೋಜಲಾಗಿದ್ದು, ಮೋದಿ ಸರಕಾರ ಮಂಗಳವಾರ ಬಿಡುಗಡೆಗೊಳಿಸಿದ ಕೆಲವೊಂದು ಕಡತಗಳು ಅವರು ತೈವಾನಿನಲ್ಲಿ ಆಗಸ್ಟ್ 18,1945ರಲ್ಲಿ ನಡೆದ ವಿಮಾನ ಪತನವೊಂದರಲ್ಲಿ ಸಾವಿಗೀಡಾಗಿದ್ದಾರೆಂದು ಹೇಳಲಾದ ದಿನಾಂಕದ ಬಳಿಕ ಮೂರು ಬಾರಿ ಬಾನುಲಿ ಭಾಷಣ ಮಾಡಿದ್ದಾರೆಂದು ಹೇಳುತ್ತಿವೆ.

         ಕಡತ ಸಂಖ್ಯೆ 870 /111/ಪಿ/16/92 ಪ್ರಕಾರ 31 ಮೀಟರ್ ಬ್ಯಾಂಡ್‌ನಲ್ಲಿ ಮಾಡಲಾದ ಬೋಸ್ ಅವರ ಬಾನುಲಿ ಪ್ರಸಾರವನ್ನು ಮಾನಿಟರಿಂಗ್ ಸರ್ವಿಸ್ ಒಂದಕ್ಕೆ ಸಿಕ್ಕಿತ್ತೆನ್ನಲಾಗಿದ್ದು ಮೊದಲ ಪ್ರಸಾರ ಡಿಸೆಂಬರ್ 26, 1945ರಲ್ಲಿ ಮಾಡಲಾಗಿದ್ದರೆ ಅದರಲ್ಲಿ ಬೋಸ್ ‘‘ನಾನೀಗ ವಿಶ್ವದ ದೊಡ್ಡ ಶಕ್ತಿಗಳ ಆಶ್ರಯದಲ್ಲಿದ್ದೇನೆ. ನನ್ನ ಹೃದಯ ಭಾರತಕ್ಕಾಗಿ ತುಡಿಯುತ್ತಿದೆ. ಮೂರನೆ ವಿಶ್ವ ಯುದ್ಧವಾದಾಗ ನಾನು ಮತ್ತೆ ಭಾರತಕ್ಕೆ ಮರಳುತ್ತೇನೆ. ಅದು ಮುಂದಿನ ಹತ್ತು ವರ್ಷಗಳಲ್ಲಿ ಅಥವಾ ಅದಕ್ಕಿಂತಲೂ ಮೊದಲು ಆಗಬಹುದು.’’ಎಂದಿದ್ದರು. ನಂತರದ ಪ್ರಸಾರ ಜನವರಿ 1, 1946ರಲ್ಲಿ ನಡೆದಿದ್ದು ‘‘ನಮಗೆ ಎರಡು ವರ್ಷದೊಳಗೆ ಸ್ವಾತಂತ್ರ್ಯ ದೊರೆಯಬೇಕು. ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಬೇಕು. ಭಾರತ ಅಹಿಂಸೆಯ ಮುಖಾಂತರ ಸ್ವತಂತ್ರವಾಗುವುದಿಲ್ಲ ಆದರೆ ನನಗೆ ಮಹಾತ್ಮ ಗಾಂಧಿಯವರ ಬಗ್ಗೆ ಗೌರವವಿದೆ.’’ ಎಂದಿದ್ದರೆ ಫೆಬ್ರವರಿ 1946ರಲ್ಲಿ ಮಾಡಿದ ಭಾಷಣದಲ್ಲಿ ‘‘ಇದು ಸುಭಾಸ್ ಚಂದ್ರ ಬೋಸ್ ಮಾತನಾಡುತ್ತಿರುವುದು. ಜೈಹಿಂದ್. ಜಪಾನ್ ಶರಣಾಗತಿಯ ನಂತರ ನನ್ನ ಭಾರತದ ಸಹೋದರ ಸಹೋದರಿಯರನ್ನು ಉದ್ದೇಶಿಸಿ ನಾನು ಮೂರನೇ ಬಾರಿ ಮಾತನಾಡುತ್ತಿದ್ದೇನೆ. ಇಂಗ್ಲೆಂಡಿನ ಪ್ರಧಾನಿ ಪೆಥ್ವಿಕ್ ಲಾರೆನ್ಸ್ ಮತ್ತು ಇತರ ಇಬ್ಬರು ಸದಸ್ಯರನ್ನು ಬ್ರಿಟಿಷ್ ಸಾಮ್ರಾಜ್ಯಶಾಹಿ ಖಾಯಂ ಆಗಿ ನೆಲೆಗೊಳ್ಳುವಂತೆ ಮಾಡಿ ಭಾರತದ ರಕ್ತ ಹೀರಲು ಭಾರತಕ್ಕೆ ಕಳುಹಿಸುತ್ತಿದ್ದಾರೆ,’’ಎಂದು ಹೇಳಿದ್ದರು.
 
ಬಿಡುಗಡೆಗೊಂಡ ಕಡತದಲ್ಲಿ ಭಾರತದಲ್ಲಿ ಬ್ರಿಟಿಷರ ಕಟ್ಟ ಕಡೆಯ ವೈಸ್‌ರಾಯ್ ಲೂಯಿಸ್ ಮೌಂಟ್ ಬ್ಯಾಟನ್ ಅವರಿಗೆ ಖುರ್ಷೆದ್ ನೌರೋಜಿಯವರು ಜುಲೈ 22,1946ರಲ್ಲಿ ಬರೆದ ಪತ್ರವೊಂದರ ಉಲ್ಲೇಖವೂ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X