Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರತಿಪಕ್ಷವನ್ನೊಳಗೊಂಡ ನೂತನ ಸರಕಾರಕ್ಕೆ...

ಪ್ರತಿಪಕ್ಷವನ್ನೊಳಗೊಂಡ ನೂತನ ಸರಕಾರಕ್ಕೆ ಆಕ್ಷೇಪವಿಲ್ಲ: ಸಿರಿಯ ಅಧ್ಯಕ್ಷ

ನಮಗೆ ಒಪ್ಪಿಗೆಯಿಲ್ಲ: ಪ್ರತಿಪಕ್ಷ

ವಾರ್ತಾಭಾರತಿವಾರ್ತಾಭಾರತಿ31 March 2016 11:54 PM IST
share
ಪ್ರತಿಪಕ್ಷವನ್ನೊಳಗೊಂಡ ನೂತನ ಸರಕಾರಕ್ಕೆ ಆಕ್ಷೇಪವಿಲ್ಲ: ಸಿರಿಯ ಅಧ್ಯಕ್ಷ

ಮಾಸ್ಕೊ/ಬೆರೂತ್, ಮಾ. 31: ಪ್ರತಿಪಕ್ಷದ ನಾಯಕರನ್ನು ಒಳಗೊಂಡ ನೂತನ ಸಿರಿಯ ಸರಕಾರವನ್ನು ಒಪ್ಪಿಕೊಳ್ಳಲು ತಾನು ಸಿದ್ಧ ಎಂದು ಸಿರಿಯದ ಅಧ್ಯಕ್ಷ ಬಶರ್ ಅಲ್ ಅಸಾದ್ ಹೇಳಿದ್ದಾರೆ. ಆದರೆ, ಬಶರ್ ಅಧಿಕಾರದಲ್ಲಿರುವ ಯಾವುದೇ ಸರಕಾರವು ಕಾನೂನುಬದ್ಧವಲ್ಲ ಎಂಬುದಾಗಿ ಪ್ರತಿಪಕ್ಷಗಳು ಈ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿವೆ.
ನೂತನ ಕರಡು ಸಂವಿಧಾನವನ್ನು ವಾರಗಳ ಅವಧಿಯಲ್ಲಿ ಸಿದ್ಧಪಡಿಸಬಹುದಾಗಿದೆ ಹಾಗೂ ಪ್ರತಿಪಕ್ಷಗಳು, ಸ್ವತಂತ್ರ ವ್ಯಕ್ತಿಗಳು ಮತ್ತು ನಿಷ್ಠಾವಂತರನ್ನೊಳಗೊಂಡ ನೂತನ ಸರಕಾರಕ್ಕೆ ಆಕ್ಷೇಪವಿಲ್ಲ ಎಂದು ಅವರು ಹೇಳಿರುವುದಾಗಿ ರಶ್ಯದ ವಾರ್ತಾಸಾಂಸ್ಥೆ ಆರ್‌ಐಎ ವರದಿ ಮಾಡಿದೆ.
ಪಾಲ್ಮೈರ ನಗರದಲ್ಲಿ ಲಭಿಸಿರುವ ಸೇನಾ ವಿಜಯದಿಂದ ಸಿರಿಯ ಅಧ್ಯಕ್ಷ ಉತ್ತೇಜನಗೊಂಡಿದ್ದಾರೆ ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಮುಂದಿನ ತಿಂಗಳು ಪುನಾರಂಭ ಗೊಳ್ಳಲಿರುವ ಜಿನೇವ ಶಾಂತಿ ಮಾತುಕತೆಯಲ್ಲಿ ಖಾತೆಗಳ ಹಂಚಿಕೆ ಮತ್ತು ಇತರ ತಾಂತ್ರಿಕ ವಿಷಯಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಬಶರ್ ತಿಳಿಸಿದರು. ಇವುಗಳು ಕಷ್ಟದ ಕೆಲಸವೇನಲ್ಲ ಎಂದರು. ಪ್ರತಿಪಕ್ಷದ ಸಂಧಾನಕಾರರು ಅಸಾದ್‌ರ ಈ ಹೇಳಿಕೆಗಳನ್ನು ತಕ್ಷಣ ತಳ್ಳಿಹಾಕಿದ್ದಾರೆ. ಪೂರ್ಣ ಅಧಿಕಾರವನ್ನು ಹೊಂದಿರುವ ಪರಿವರ್ತನೆ ಸರಕಾರವೊಂದನ್ನು ಸ್ಥಾಪಿಸುವ ಮೂಲಕ ಮಾತ್ರ ರಾಜಕೀಯ ಪರಿಹಾರವೊಂದನ್ನು ಕಂಡುಹಿಡಿಯಲು ಸಾಧ್ಯವಲ್ಲದೆ, ಅಸಾದ್ ನೇತೃತ್ವದ ಇನ್ನೊಂದು ಸರಕಾರದಿಂದಲ್ಲ ಎಂದು ಅವರು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.
‘‘ಬಶರ್ ಅಲ್ ಅಸಾದ್ ಮಾತನಾಡುತ್ತಿರುವುದಕ್ಕೂ ರಾಜಕೀಯ ಪ್ರಕ್ರಿಯೆಗೂ ಸಂಬಂಧವಿಲ್ಲ’’ ಎಂದು ಉನ್ನತ ಸಂಧಾನ ಸಮಿತಿಯ ಜಾರ್ಜ್ ಸಬ್ರ ಹೇಳಿದರು.

ಅಮೆರಿಕದ ತಿರಸ್ಕಾರ

ಸಿರಿಯದ ಅಧ್ಯಕ್ಷರ ಪ್ರಸ್ತಾಪವನ್ನು ಅಮೆರಿಕವೂ ತಿರಸ್ಕರಿಸಿದೆ. ‘‘ರಾಷ್ಟ್ರೀಯ ಏಕತಾ ಸರಕಾರದ ಭಾಗವಾಗಿ ಅವರು ತನ್ನನ್ನು ಕಲ್ಪಿಸಿಕೊಂಡರೋ ಏನೋ ನನಗೆ ಗೊತ್ತಿಲ್ಲ. ಆದರೆ, ಅದು ನಮಗೆ ಕೂಡಿಬರುವುದಿಲ್ಲ’’ ಎಂದು ಶ್ವೇತಭವನದ ವಕ್ತಾರ ಜೋಶ್ ಅರ್ನೆಸ್ಟ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X