Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರ್‌ಟಿಇ ದುರುಪಯೋಗ ಕಡಿವಾಣಕ್ಕೆ...

ಆರ್‌ಟಿಇ ದುರುಪಯೋಗ ಕಡಿವಾಣಕ್ಕೆ ಪ್ರತ್ಯೇಕ ಜಾಗೃತ ದಳ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ1 April 2016 11:28 PM IST
share
ಆರ್‌ಟಿಇ ದುರುಪಯೋಗ ಕಡಿವಾಣಕ್ಕೆ ಪ್ರತ್ಯೇಕ ಜಾಗೃತ ದಳ: ದಿನೇಶ್ ಗುಂಡೂರಾವ್

ಬೆಂಗಳೂರು, ಎ.1: ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ)ಯ ದುರುಪಯೋಗಕ್ಕೆ ಕಡಿವಾಣ ಹಾಕಲು ಪ್ರತ್ಯೇಕ ಜಾಗೃತ ದಳವನ್ನು ರಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್‌ಗುಂಡೂರಾವ್ ಭರವಸೆ ನೀಡಿದ್ದಾರೆ.
ಶುಕ್ರವಾರ ನಗರದ ಎ.ವಿ.ವರದಾಚಾರ್ ಕಲಾ ಕ್ಷೇತ್ರದಲ್ಲಿ ಆರ್‌ಟಿಇ ಸ್ಟೂಡೆಂಟ್ಸ್ ಅಂಡ್ ಪೇರೆಂಟ್ಸ್‌ಅಸೋಸಿಯೇಶನ್ ಆಯೋಜಿಸಿದ್ದ ಆರ್‌ಟಿಇ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಆರ್ಥಿಕ ದುರ್ಬಲರು, ಅಲ್ಪಸಂಖ್ಯಾತರು ಮತ್ತುದಲಿತರಿಗೆ ಉಚಿತ ಶಿಕ್ಷಣ ನೀಡುವ ಸದುದ್ದೇಶದಿಂದ ಯುಪಿಎ ಸರಕಾರ ಆರ್‌ಟಿಇ ಕಾಯ್ದೆಯನ್ನು ಅನುಷ್ಠಾನಗೊಳಿಸಿತ್ತು. ಆದರೆ ಈ ಕಾಯ್ದೆ ಇಂದು ಉಳ್ಳವರ ಪಾಲಾಗುವ ಮೂಲಕ ದುರುಪಯೋಗವಾಗುತ್ತಿದೆ. ಈ ಪರಿಣಾಮ ಬಡವರು ಮತ್ತು ದಲಿತರಿಗೆ ಅನ್ಯಾಯವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಆರ್‌ಟಿಇ ನಿಯಮದ ಪ್ರಕಾರ ಖಾಸಗಿ ಶಾಲೆಗಳಲ್ಲಿ ಶೇ. 25ರಷ್ಟು ಸೀಟುಗಳನ್ನು ಆರ್ಥಿಕವಾಗಿ ಹಿಂದುಳಿದ ಮತ್ತು ದಲಿತರಿಗೆ ಮೀಸಲಿಟ್ಟಿರಬೇಕು ಎಂದು ಆದೇಶವಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ ಮತ್ತು ತಾತ್ಸಾರ ಮನೋಭಾವದಿಂದ ಅರ್ಹ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ ಎಂದು ಆತಂಕಪಟ್ಟರು.
ಅರ್ಹ ಫಲಾನುಭವಿಗಳಿಗೆ ಮಾತ್ರ ಆರ್‌ಟಿಇ ಕಾಯಿದೆ ಅಡಿಯ ಸೀಟುಗಳು ದೊರಕಬೇಕು. ಹಾಗೂ ಈ ಕಾಯ್ದೆಯ ದುರುಪಯೋಗವನ್ನು ತಡೆಯುವ ನಿಟ್ಟಿನಲ್ಲಿ ಪ್ರತ್ಯೇಕ ಜಾಗೃತದಳವನ್ನು ರಚಿಸಿಲು ಸಂಬಂಧಪಟ್ಟ ಸಚಿವ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಸರಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
 ಕಾರ್ಯಕ್ರಮದಲ್ಲಿ ಆರ್‌ಟಿಇ ಸ್ಟೂಡೆಂಟ್ಸ್‌ಆಂಡ್ ಪೇರೆಂಟ್ಸ್ ಅಸೋಸಿಯೇಶನ್‌ನ ಪ್ರಧಾನಕಾರ್ಯದರ್ಶಿ ಬಿ.ಎನ್.ಯೋಗಾನಂದ್ ಮಾತ ನಾಡಿ, ಆರ್‌ಟಿಇ ಕಾಯಿದೆಯ ಅಡಿ ಮೀಸಲಿಟ್ಟಿರುವ ಸೀಟುಗಳು ಅನರ್ಹರ ಪಾಲಾಗದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೆಯೇ ಸರಕಾರ ಕೂಡಲೆ ಆರ್‌ಟಿಇ ಜಾಗೃತದಳವನ್ನು ರಚಿಸಬೇಕು. ಈ ದಳಕ್ಕೆ ಶಾಸನಬದ್ಧ ಅಧಿಕಾರ ನೀಡಬೇಕು ಎಂದು ಆಗ್ರಹಿಸಿದರು.
  ದೇಶದಲ್ಲಿ 2009ರ ಎ.1ರಂದು ಆರ್‌ಟಿಇ ಕಾಯಿದೆ ಅನುಷ್ಠಾನಗೊಳಿಸಿದ ಜ್ಞಾಪಕಾರ್ಥವಾಗಿ ದೇಶಾದ್ಯಂತ ಪ್ರತಿ ವರ್ಷ ಎ.1ರಂದು ಆರ್‌ಟಿಇ ದಿನಾಚರಣೆಯನ್ನು ಸರಕಾರವೇ ಆಯೋಜಿಸಬೇಕು. ಈ ಮೂಲಕ ಆರ್‌ಟಿಇ ಕಾಯಿದೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯರಾದ ಮಮತಾ ವೆಂಕಟೇಶ್, ಚಂದ್ರಕಲಾ ಗಿರೀಶ್‌ಲಕ್ಕಣ್ಣ, ಪಳಿನಿಕಾಂತ್, ಪದ್ಮಾವತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X