Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಲ ಕಾರ್ಮಿಕರ ಪುನರ್ವಸತಿ: ರಾಜ್ಯಗಳಿಗೆ...

ಬಾಲ ಕಾರ್ಮಿಕರ ಪುನರ್ವಸತಿ: ರಾಜ್ಯಗಳಿಗೆ ಎನ್ನೆಚ್ಚಾರ್ಸಿ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ1 April 2016 11:39 PM IST
share

ಹೊಸದಿಲ್ಲಿ,ಎ.1: 2013,ಮಾರ್ಚ್-2014,ಜುಲೈ ಅವಧಿಯಲ್ಲಿ ರಾಜಸ್ಥಾನದ ವಿವಿಧೆಡೆಗಳಿಂದ ರಕ್ಷಿಸಲಾಗಿರುವ 740 ಬಾಲಕಾರ್ಮಿಕರನ್ನು ಪುನರ್ವಸತಿಗೊಳಿಸುವಲ್ಲಿ ಅಧಿಕಾರಿಗಳ ಉದಾಸೀನ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ನೆಚ್ಚಾರ್ಸಿ)ವು ರಾಜಸ್ಥಾನ, ಬಿಹಾರ, ಜಾರ್ಖಂಡ್, ಪ.ಬಂಗಾಲ, ಉತ್ತರ ಪ್ರದೇಶ ಮತ್ತು ದಿಲ್ಲಿ ರಾಜ್ಯಗಳಿಗೆ ನೋಟಿಸುಗಳನ್ನು ಹೊರಡಿಸಿದ್ದು, ಎಂಟು ವಾರಗಳಲ್ಲಿ ಕ್ರಮಾನುಷ್ಠಾನ ವರದಿಗಳನ್ನು ಸಲ್ಲಿಸುವಂತೆ ಅವುಗಳಿಗೆ ಸೂಚಿಸಿದೆ.
 ಈ ಪೈಕಿ 610 ಬಾಲಕಾರ್ಮಿಕರು ಬಿಹಾರಕ್ಕೆ ಸೇರಿದವರಾಗಿದ್ದರೆ,ಉಳಿದವರು ಜಾರ್ಖಂಡ್,ಪ.ಬಂಗಾಲ,ಉತ್ತರ ಪ್ರದೇಶ,ದಿಲ್ಲಿ ಮತ್ತು ರಾಜಸ್ಥಾನಗಳಿಗೆ ಸೇರಿದವರಾಗಿದ್ದಾರೆ.
    ಆದರೆ ಬಿಹಾರದ 456 ಮಕ್ಕಳಿಗೆ ಮಾತ್ರ ಬಿಡುಗಡೆ ಪ್ರಮಾಣಪತ್ರಗಳನ್ನು ನೀಡಲಾಗಿದೆ. ಆದರೂ ರಾಜಸ್ಥಾನದ ಅಧಿಕಾರಿಗಳು ಅವರಿಗೆ ಪ್ರಮಾಣಪತ್ರಗಳ ಪ್ರತಿಗಳನ್ನು ನೀಡಿಲ್ಲ. 284 ಮಕ್ಕಳಿಗೆ ಪ್ರಮಾಣಪತ್ರಗಳನ್ನು ಇನ್ನಷ್ಟೇ ನೀಡಬೇಕಾಗಿದೆ. ಆಯಾ ರಾಜ್ಯಗಳ ಸಂಬಂಧಿತ ಜಿಲ್ಲಾಡಳಿತಗಳು ಈ ಜೀತಮುಕ್ತ ಬಾಲಕಾರ್ಮಿಕರ ಪುನರ್ವಸತಿ ಪ್ರಕ್ರಿಯೆಯನ್ನು ಆರಂಭಿಸಲು ಈ ಪ್ರಮಾಣಪತ್ರಗಳು ಅಗತ್ಯವಾಗಿವೆ ಎಂದು ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.
ಮಕ್ಕಳ ಸಂಕಷ್ಟಗಳಿಗೆ ಯಾರೂ ಕಿವಿಗೊಡುತ್ತಿರುವುದು ಕಂಡು ಬರುತ್ತಿಲ್ಲ. ಇದು ಕೇವಲ ಕಾನೂನುಗಳನ್ನು ಉಲ್ಲಂಘಿಸಿ ಮಕ್ಕಳನ್ನು ದುಡಿಮೆಗೆ ಹಚ್ಚಿದ ಘಟನೆಯಲ್ಲ. ಮಕ್ಕಳನ್ನು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಕಳ್ಳ ಸಾಗಣೆ ಮಾಡಿರುವ ಹೇಯ ಕೃತ್ಯವಾಗಿದೆ ಎಂದು ಆಯೋಗ ಸದಸ್ಯ ನ್ಯಾ.ಡಿ.ಮುರುಗೇಶನ್ ಅಭಿಪ್ರಾಯಿಸಿದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X