Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ ಸರಕಾರಿ ಆಸ್ಪತ್ರೆಯ ಶೀತಲೀಕರಣ...

ಕಾರ್ಕಳ ಸರಕಾರಿ ಆಸ್ಪತ್ರೆಯ ಶೀತಲೀಕರಣ ಘಟಕ: ಉದ್ಘಾಟನೆಗೆ ಮೊದಲೇ ಬಂಡವಾಳ ಬಯಲು!

ವಾರ್ತಾಭಾರತಿವಾರ್ತಾಭಾರತಿ1 April 2016 11:46 PM IST
share
ಕಾರ್ಕಳ ಸರಕಾರಿ ಆಸ್ಪತ್ರೆಯ ಶೀತಲೀಕರಣ ಘಟಕ: ಉದ್ಘಾಟನೆಗೆ ಮೊದಲೇ ಬಂಡವಾಳ ಬಯಲು!

ಮುಹಮ್ಮದ್ ಶರೀಫ್ ಕಾರ್ಕಳ
ಕಾರ್ಕಳ, ಎ.1: ಇಲ್ಲಿನ ಸರಕಾರಿ ಆಸ್ಪತ್ರೆಯ ಶೀತಲೀಕರಣ ಘಟಕ ಇನ್ನೇನು ಉದ್ಘಾಟನೆಗೊಂಡು ಸಾರ್ವಜನಿಕರ ಸೇವೆಗೆ ತೆರೆದುಕೊಳ್ಳುವಷ್ಟರಲ್ಲಿ ನಿಜ ಬಣ್ಣ ಬಯಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ.

ನಿರ್ಮಿತಿ ಕೇಂದ್ರವು ಶೀತಲೀಕರಣ ಘಟಕದ ಕಾಮಗಾರಿಗಳನ್ನು ಮಾಡಿದೆ. ಆದರೆ, ಇದರಲ್ಲಿ ಕಳಪೆ ಕಾಮಗಾರಿ ನಡೆದಿದೆಯೇ? ಎನ್ನುವ ಸಂದೇಹ ಘಟಕದ ಕಟ್ಟಡವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಹುಟ್ಟುತ್ತವೆ. ಕಟ್ಟಡದ ಕಿಟಕಿಗಳು ತುಕ್ಕು ಹಿಡಿದು ಇನ್ನೇನು ಮುರಿದು ಬೀಳಲಿರುವ ಪರಿಸ್ಥಿತಿಗೆ ತಲುಪಿದೆ. ಶೀತಲೀಕರಣದ ಯಂತ್ರಕ್ಕೂ ಅಲ್ಲಲ್ಲಿ ತುಕ್ಕು ಹಿಡಿದಿರುವುದು ಬೆಳಕಿಗೆ ಬಂದಿದೆ. ಎರಡು ಮೃತ ದೇಹಗಳನ್ನು ಇಡುವ ವ್ಯವಸ್ಥೆ ಇರುವ ಅಲೆಂಜರ್ಸ್‌ ಕಂಪೆನಿಯ ಈ ಶೀತಲೀಕರಣ ಯಂತ್ರ ಸೆಕೆಂಡ್ ಹ್ಯಾಂಡ್ ಯಂತ್ರದಂತೆ ಕಾಣುತ್ತಿದ್ದು, ಯಂತ್ರದ ಖರೀದಿಯಲ್ಲೇ ಗೋಲ್‌ಮಾಲ್ ನಡೆದಿದೆಯೇ ಎನ್ನುವ ಪ್ರಶ್ನೆ ಎದ್ದಿವೆ.ಉದ್ಘಾಟನೆಗೆ ಮೊದಲೇ ಕಳಪೆ ಕಾಮಗಾರಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

   ತಾಲೂಕಿನಲ್ಲಿ ಈವರೆಗೂ ಶೀತಲೀಕರಣದ ಭಾಗ್ಯ ಒದಗಿ ಬಂದಿರಲಿಲ್ಲ. ಮೃತದೇಹಗಳನ್ನು ದೂರ ಪ್ರದೇಶದ ಸಂಬಂಧಿಕರು ಬರುವವರೆಗೂ ಕಾಯ್ದಿಡಬೇಕು ಎಂಬ ಮೃತ ಕುಟುಂಬದ ಬೇಡಿಕೆಗೆ ಉತ್ತರ ಸಿಕ್ಕಿರಲಿಲ್ಲ. ಇದರಿಂದ ಜಿಲ್ಲಾ ಕೇಂದ್ರ ಆಸ್ಪತ್ರೆಗಳಿಗೆ ದುಬಾರಿ ಬೆಲೆ ತೆತ್ತು ಮೃತದೇಹಗಳನ್ನು, ಅವರ ಒಡನಾಡಿಗಳು ಬರುವವರೆಗೂ ಅಲ್ಲಿಡುವ ಪ್ರಕ್ರಿಯೆಯಿಂದ ಸಾಮಾನ್ಯ ವರ್ಗದ ಜನರು ಸುಸ್ತಾಗುತ್ತಿದ್ದರು. ಈ ಮಧ್ಯೆ ಕಾರ್ಕಳ ಸರಕಾರಿ ಆಸ್ಪತ್ರೆಯು ಸಾಮಾನ್ಯರ ಬೇಡಿಕೆಗೆ ಸ್ಪಂದಿಸಿದ್ದು, ಸಂಸದೆ ಶೋಭಾ ಕರಂದ್ಲಾಜೆಯವರ ಅನುದಾನದಡಿ ಶೀತಲೀಕರಣ ಘಟಕವನ್ನು ತೆರೆದಿದೆ. ಸದ್ಯದಲ್ಲಿಯೇ ಈ ಘಟಕ ಉದ್ಘಾಟನೆಗೊಳ್ಳಲಿದ್ದು, ಅನಿವಾರ್ಯ ಸಂದರ್ಭದಲ್ಲಿ ಮೃತದೇಹವನ್ನು ಒಂದೆ ರಡು ದಿನ ಸಂರಕ್ಷಿಸಿಡ ಬಹುದಾಗಿದೆ. ಆಕಸ್ಮಿಕ ಅವಘಡಗಳಲ್ಲಿ ಮೃತಪಟ್ಟವರ ದೇಹಗಳನ್ನು ಸರಕಾರಿ ಆಸ್ಪತ್ರೆಗಳಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಲಾಗುತ್ತದೆ. ಬಳಿಕ ಸಂಬಂಧಪಟ್ಟವರ ವಶಕ್ಕೊಪ್ಪಿಸಲಾಗುತ್ತಿದೆ. ಅಂತಹವರ ಪಾಲಿಗೆ ಶೀತಲೀಕರಣ ಘಟಕ ಪ್ರಯೋಜನಕಾರಿಯಾಗಲಿದೆ. ಬಿಪಿಎಲ್ ಕಾರ್ಡುದಾರರಿಗೆ ಈ ಶೀಲೀಕರಣ ಘಟಕದ ಸೇವೆ ದೊರೆಯಲಿದ್ದು, ಮುಂದಿನ ದಿನಗಳಲ್ಲಿ ಇತರ ವರ್ಗದವರಿಗೆ ದೊರಕಿಸಿಕೊಡುವಲ್ಲಿ ಸರಕಾರಿ ಆಸ್ಪತ್ರೆ ಚಿಂತನೆ ನಡೆಸುತ್ತಿದೆ. ಇದು ಜನಸಾಮಾನ್ಯರಿಗೂ ಖುಷಿಕೊಡುವ ವಿಚಾರವಾದರೂ ಕಳಪೆ ಕಾಮಗಾರಿಯ ಸಂಗತಿ ಅನೇಕ ಪ್ರಶ್ನೆಗಳನ್ನು ಹುಟ್ಟು ಹಾಕಿವೆ.

ಜನಸಾಮಾನ್ಯರಿಗೆ ಪ್ರಯೋಜನವಾಗಬೇಕು ಎನ್ನುವ ದೃಷ್ಟಿಯಿಂದ ಸರಕಾರಿ ಆಸ್ಪತ್ರೆ ಶೀತಲೀಕರಣ ಘಟಕಕ್ಕೆ ಚಾಲನೆ ನೀಡಲಿದೆ. ಈ ಹಿಂದೆ ಮರಣೋತ್ತರ ಪರೀಕ್ಷೆಯ ನಂತರ ಮೃತರ ಕುಟುಂಬಗಳಿಗೆ ದೂರದೂರು ಗಳಲ್ಲಿರುವ ಮೃ

       ತರ ವಾರಸುದಾರರು ಬರುವ ತನಕ ಮೃತ ದೇಹಗಳನ್ನು ಸಂರಕ್ಷಿಸಿ ಇಡುವ ವ್ಯವಸ್ಥೆಯಿರಲಿಲ್ಲ. ಆದರೆ ಶೈತ್ಯಗಾರ ಘಟಕದ ಯಂತ್ರೋಪಕರಣದ ಗುಣಮಟ್ಟದ ಬಗ್ಗೆ ನನ್ನಲ್ಲಿ ಮಾಹಿತಿ ಇಲ್ಲ. ಡಾ. ಹೆಬ್ಬಾರ್, ಮುಖ್ಯ ವೈದ್ಯಾಧಿಕಾರಿಗಳು

          ನಗರ ಸರಕಾರಿ ಆಸ್ಪತ್ರೆ, ಕಾರ್ಕಳ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X