ಕುಡಿಯುವ ನೀರು ಪೂರೈಕೆ: ಉಡುಪಿಗೆ 1 ಕೋ.ರೂ. ಬಿಡುಗಡೆ
ಉಡುಪಿ, ಎ.1: ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಯಿಂದ ಉಡುಪಿ ಜಿಲ್ಲೆಗೆ 1 ಕೋ.ರೂ. ಅನ್ನು ಸರಕಾರ ಬಿಡು ಗಡೆ ಮಾಡಿದೆ.
ಮುಂಜಾಗ್ರತಾ ಕ್ರಮವಾಗಿ ತುರ್ತು ಪರಿಸ್ಥಿತಿ ನಿಭಾಯಿ ಸಲು 25 ಲಕ್ಷ ರೂ. ಅನುದಾನವನ್ನು ಈಗಾಗಲೇ ಜಿಪಂ ಸಿಇಒ ಅವರಿಗೆ ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಬಗ್ಗೆ ನೀಡಲಾದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲೆಯ ಎಲ್ಲಾ ತಾಪಂ ಕಾರ್ಯ ನಿರ್ವಹಣಾಧಿಕಾರಿ ಮತ್ತು ತಹಶೀಲ್ದಾರ್ಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ತಿಳಿಸಿದ್ದಾರೆ.
Next Story