Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣ್ಣಪಳ್ಳ ಕೆರೆಯ ಅಭಿವೃದ್ಧಿ ಕಾಮಗಾರಿ...

ಮಣ್ಣಪಳ್ಳ ಕೆರೆಯ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ1 April 2016 11:52 PM IST
share
ಮಣ್ಣಪಳ್ಳ ಕೆರೆಯ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

 ಮಣಿಪಾಲ, ಎ.1: ಮಣಿಪಾಲ ಹಾಗೂ ಆಸುಪಾಸಿನ ಹಿರಿಯರು, ಮಹಿಳೆಯರು ಸೇರಿದಂತೆ ನಾಗರಿಕರ ವಿಹಾರ ತಾಣವಾಗಿರುವ ಮಣ್ಣಪಳ್ಳ ಕೆರೆಯ ಸುತ್ತಲೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಸುಮಾರು 1.32 ಕೋಟಿ ರೂ.ವೆಚ್ಚದಲ್ಲಿ ನಡೆಸಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಪ್ರಮೋದ್ ಮಧ್ವರಾಜ್ ಶುಕ್ರವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮಣ್ಣಿಪಳ್ಳ ಪರಿಸರದಲ್ಲಿ ಈಗ ಭಾರೀ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಜನರಿಂದ ಇನ್ಯಾವುದೇ ಬೇಡಿಕೆ ಬಂದರೂ ಅವುಗಳನ್ನು ಈಡೇರಿಸಲಾಗುವುದು ಎಂದರು.
ಒಳಚರಂಡಿಗೆ 200 ಕೋಟಿ ರೂ.: ಮಣಿಪಾಲದೊಳಗಿನ ಎಲ್ಲ ರಸ್ತೆಗಳನ್ನು ಸುಮಾರು 7ಕೋಟಿ ರೂ.ವೆಚ್ಚದಲ್ಲಿ ದುರಸ್ತಿಪಡಿಸಲಾಗಿದೆ. ಇಲ್ಲಿನ ಅತೀ ದೊಡ್ಡ ಸಮಸ್ಯೆಯಾದ ಒಳಚರಂಡಿ ಕಾಮಗಾರಿಗೆ ಎಡಿಬಿ ಯೋಜನೆಯಡಿ 200 ಕೋಟಿ ರೂ.ಮಂಜೂರಾಗಿದ್ದು, ಡಿಪಿಆರ್ ಹಂತದಲ್ಲಿದೆ. ಇದರಿಂದ ಮಣಿಪಾಲವನ್ನೊಳಗೊಂಡ ಶಿವಳ್ಳಿ, ಪುತ್ತೂರು ಹಾಗೂ ಕೊಡವೂರು ಗ್ರಾಮಗಳಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಅಳವಡಿಸಲಾಗುವುದು ಎಂದರು.
ಎಡಿಬಿ ಯೋಜನೆಯಡಿ 300 ಕೋಟಿ ರೂ.ಮಂಜೂರಾಗಿದ್ದು, ಇದರಲ್ಲಿ 100 ಕೋಟಿ ರೂ.ಯೋಜನೆ ಕುಡಿಯುವ ನೀರಿಗಾಗಿ ಮೀಸಲಿರಿಸಲಾಗಿದೆ. ಇದರಡಿ ಸ್ವರ್ಣ ನದಿಗೆ ಸಿಮ್ರದಲ್ಲಿ ಇನ್ನೊಂದು ಅಣೆಕಟ್ಟು ಕಟ್ಟಿ ಅದರ ಮೂಲಕ ಉಡುಪಿ ನಗರಕ್ಕೆ ದಿನದ 24 ಗಂಟೆಯೂ ವರ್ಷವಿಡಿ ಕುಡಿಯುವ ನೀರನ್ನು ನೀಡುವ ಯೋಜನೆಯಿದೆ ಎಂದು ಪ್ರಮೋದ್ ಹೇಳಿದರು.
ಅಮೃತ ಯೋಜನೆಯಡಿ ದೊರೆಯುವ 100 ಕೋಟಿ ರೂ. ಅನುದಾನದಲ್ಲಿ 76 ಬಡಗುಬೆಟ್ಟು, ಹೆರ್ಗ ಗ್ರಾಮಗಳಿಗೆ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುವುದು. ಈ ಮೂಲಕ ಚುನಾವಣೆಗೆ ಮುನ್ನ ಬಿಡುಗಡೆಗೊಳಿಸಿದ ‘ವಿಷನ್ ಡಾಕ್ಯುಮೆಂಟ್’ನಲ್ಲಿ ಹೇಳಿದ ಹೆಚ್ಚಿನ ಸೌಲಭ್ಯವನ್ನು ತನ್ನ ಕ್ಷೇತ್ರಕ್ಕೆ ನೀಡಿದಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಜಿಪಂ ಸದಸ್ಯ ಜನಾರ್ದನ ತೋನ್ಸೆ, ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ, ಉಪಾಧ್ಯಕ್ಷೆ ಸಂಧ್ಯಾ ಕುಮಾರಿ, ಪ್ರಾಧಿಕಾರದ ಆಯುಕ್ತ ಜನಾರ್ದನ, ಸ್ಥಳೀಯ ನಗರಸಭಾ ಸದಸ್ಯ ನರಸಿಂಹ ನಾಯಕ್, ನಿರ್ಮಿತಿ ಕೇಂದ್ರದ ನಿರ್ದೇಶಕ ಅರುಣ್‌ಕುಮಾರ್ ಉಪಸ್ಥಿತರಿದ್ದರು.
ಉಡುಪಿ ನಗರಸಭೆಯ ಪೌರಾಯುಕ್ತ ಡಿ.ಮಂಜುನಾಥಯ್ಯ ಕಾರ್ಯಕ್ರಮ ನಿರೂಪಿಸಿದರು.ಸುಮಾರು 99 ಎಕರೆ ಪ್ರದೇಶದಲ್ಲಿ ವ್ಯಾಪಿಸಿರುವ ಮಣ್ಣಪಳ್ಳ ಕೆರೆ 66 ಎಕರೆಯಷ್ಟು ಅಚ್ಚುಕಟ್ಟು ಪ್ರದೇಶವನ್ನು ಹೊಂದಿದೆ. ಈ ಕೆರೆಯ ಸುತ್ತಲೂ ಇದೀಗ 47 ಲಕ್ಷರೂ.ವೆಚ್ಚದಲ್ಲಿ ಕಬ್ಬಿಣದ ತಡೆಬೇಲಿಯನ್ನು ನಿರ್ಮಿಸಿ ಅತಿಕ್ರಮವನ್ನು ತಡೆಯಲಾಗಿದೆ. ಅಲ್ಲದೆ ಕೆರೆಯ ಸುತ್ತಲೂ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಅಲ್ಲಲ್ಲಿ ಸ್ಟೈನ್‌ಲೆಸ್ ಸ್ಟೀಲ್ ಡಸ್ಟ್‌ಬಿನ್‌ಗಳನ್ನು ಅಳವಡಿಸಲಾಗಿದೆ. ಕೆರೆಯ ಸುತ್ತಲೂ ವಾಕಿಂಗ್ ಟ್ರಾಕ್‌ಗಳನ್ನು ನಿರ್ಮಿಸಲಾಗಿದೆ. ಮುಂಜಾನೆ ಹಾಗೂ ಸಂಜೆ ಭಾರೀ ಸಂಖ್ಯೆಯಲ್ಲಿ ವಾಕಿಂಗ್‌ಗೆ ಬರುವ ಮಣಿಪಾಲಿಗರ ಕೋರಿಕೆಯಂತೆ ಕೆರೆಯ ಸುತ್ತಲೂ ಸುಮಾರು 16 ಲಕ್ಷರೂ.ವೆಚ್ಚದಲ್ಲಿ 40ರಷ್ಟು ಸೋಲಾರ್ ದೀಪಗಳನ್ನು ಅಳವಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X