Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಅರೇಬಿಯಾ: ಈ ವರ್ಷ ಮರಣ ದಂಡನೆ...

ಸೌದಿ ಅರೇಬಿಯಾ: ಈ ವರ್ಷ ಮರಣ ದಂಡನೆ ಶಿಕ್ಷೆ ದುಪ್ಪಟ್ಟು

ವಾರ್ತಾಭಾರತಿವಾರ್ತಾಭಾರತಿ2 April 2016 12:13 PM IST
share
ಸೌದಿ ಅರೇಬಿಯಾ: ಈ ವರ್ಷ ಮರಣ ದಂಡನೆ ಶಿಕ್ಷೆ ದುಪ್ಪಟ್ಟು

ರಿಯಾದ್, ಎ.2: ಈಗಾಗಲೇ 82 ಮಂದಿ ಕೈದಿಗಳಿಗೆ ಮರಣದಂಡನೆ ವಿಧಿಸಿರುವ ಸೌದಿ ಅರೇಬಿಯಾ ಕಳೆದ ವರ್ಷಕ್ಕಿಂತ ಎರಡು ಪಟ್ಟು ಹೆಚ್ಚು ಮಂದಿಗೆ ಮರಣದಂಡನೆ ವಿಧಿಸಲು ಸಜ್ಜಾಗಿದೆ ಎಂದು ಮಾನವ ಹಕ್ಕು ಸಂಘಟನೆ ಬಿಡುಗಡೆಗೊಳಿಸಿರುವ ಹೊಸ ಅಂಕಿ-ಅಂಶಗಳಲ್ಲಿ ಬಹಿರಂಗವಾಗಿದೆ.

ಸೌದಿ ಅರೇಬಿಯಾದ ಈ ಕ್ರಮ ಅರಬ್ ರಾಷ್ಟ್ರಗಳು ಹಾಗೂ ಬ್ರಿಟನ್ ನಡುವಿನ ಸಂಬಂಧದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಬ್ರಿಟಿಷ್ ಸರಕಾರ ಮರಣ ದಂಡನೆ ಶಿಕ್ಷೆಯನ್ನು ನಿಲ್ಲಿಸುವಂತೆ ಗಲ್ಫ್ ರಾಷ್ಟ್ರಕ್ಕೆ ಒತ್ತಡ ಹೇರುತ್ತಾ ಬಂದಿದೆ.

2014ರಲ್ಲಿ 88 ಮಂದಿ ಆರೋಪಿಗಳ ಶಿರಚ್ಛೇದ ನಡೆಸಿದ್ದ ಸೌದಿ ಅರೇಬಿಯಾ ಕಳೆದ ವರ್ಷ 158 ಮಂದಿಗೆ ಮರಣದಂಡನೆ ವಿಧಿಸಿತ್ತು. ಈಗಾಗಲೇ 82 ಮಂದಿಯನ್ನು ಶಿರಚ್ಛೇದ ನಡೆಸಿರುವ ಸೌದಿ ಸರಕಾರ ಈ ವರ್ಷದ ಅಂತ್ಯಕ್ಕೆ 320ಕ್ಕೂ ಅಧಿಕ ಮಂದಿಯನ್ನು ಮರಣ ದಂಡನೆ ಶಿಕ್ಷೆಗೆ ಗುರಿಪಡಿಸುವ ಸಾಧ್ಯತೆಯಿದ್ದು, ಇದು ಕಳೆದ ವರ್ಷಕ್ಕಿಂತ ಎರಡು ಪಟ್ಟು ಹೆಚ್ಚಾಗಲಿದೆ.

ಸೌದಿ ಸರಕಾರ ಹಾಗೂ ಸ್ಥಳೀಯ ಮಾಧ್ಯಮ ವರದಿಗಳನ್ನು ಆಧರಿಸಿ ಬ್ರಿಟನ್ ಮೂಲದ ಮಾನವ ಹಕ್ಕು ಸಂಘಟನೆ ಅಂಕಿ-ಅಂಶವನ್ನು ಕಲೆಹಾಕಿದೆ. ಇತ್ತೀಚೆಗಷ್ಟೇ ಸೌದಿ ಅರೇಬಿಯಕ್ಕೆ ಭೇಟಿ ನೀಡಿದ್ದ ಬ್ರಿಟನ್‌ನ ರಕ್ಷಣಾ ಕಾರ್ಯದರ್ಶಿ ಮೈಕ್ ಫಾಲ್ಲನ್, ರಾಜಕುಮಾರ ಮುಹಮ್ಮದ್ ಬಿನ್ ನಾಫ್ ಬಿನ್ ಅಬ್ದುಲ್ ಅಝೀಝ್ ಅಲ್ ಸೌದ್‌ರನ್ನು ಭೇಟಿಯಾಗಿ ಯುಕೆ-ಸೌದಿಯ ರಕ್ಷಣಾ ಸಂಬಂಧವನ್ನು ಬಲಿಷ್ಠ ಗೊಳಿಸಲು ನೆರವಾಗುವಂತೆ ಕೋರಿದ್ದರು.

ಅಬ್ದುಲ್ ಅಝೀಝ್ ಅಲ್ ಸೌದ್ ಮರಣದಂಡನೆ ಶಿಕ್ಷೆಯ ಜಾರಿಯ ಮೇಲುಸ್ತುವಾರಿಯನ್ನು ವಹಿಸಿದ್ದಾರೆ. ಆದರೆ, ಈ ಭೇಟಿಯ ಬಳಿಕ ಇಬ್ಬರು ಕೈದಿಗಳ ಶಿರಚ್ಛೇದ ನಡೆಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X