Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ವಿನಾಯಕ ಬಾಳಿಗಾರ ಸಾವಿನ ಕಾರಣಕ್ಕೆ...

‘ವಿನಾಯಕ ಬಾಳಿಗಾರ ಸಾವಿನ ಕಾರಣಕ್ಕೆ ಧ್ವನಿಯಾಗೋಣ’

ಡಿಆರ್‌ಟಿಐ ಕಾರ್ಯಕರ್ತರ ಸಂವಾದ

ವಾರ್ತಾಭಾರತಿವಾರ್ತಾಭಾರತಿ2 April 2016 3:17 PM IST
share

ಮಂಗಳೂರು, ಎ. 2: ನಗರದ ಆರ್‌ಟಿಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗಾರ ಹತ್ಯೆಯ ಆರೋಪಿಗಳನ್ನು ಬಂಧನಕ್ಕೆ ಒತ್ತಾಯಿಸುವ ಜತೆಯಲ್ಲೇ ಅವರ ಸಾವಿಗೆ ಕಾರಣವಾದ, ಅವರು ಕೈಗೆತ್ತಿಕೊಂಡಿದ್ದ ಪ್ರಕರಣಗಳನ್ನು ನಾವು ಮುಂದುವರಿಸುವ ಮೂಲಕ ಅವರ ಸಾವಿಗೊಂದು ಗೌರವ ಸಲ್ಲಿಸಬೇಕು. ಸಮಾಜದಲ್ಲಿ ನ್ಯಾಯಕ್ಕಾಗಿ ಹೋರಾಡುವ ಒಬ್ಬ ಆರ್‌ಟಿಐ ಕಾರ್ಯಕರ್ತನನ್ನು ಕೊಂದರೆ ನೂರಾರು ಕಾರ್ಯಕರ್ತರು ಹುಟ್ಟಿಕೊಳ್ಳುತ್ತಾರೆಂಬ ಭಯವನ್ನು ಭ್ರಷ್ಟರಲ್ಲಿ ಮೂಡಿಸಬೇಕು’’.ಇಂತಹದೊಂದು ಆಗ್ರಹ ಪೂರ್ವಕ, ಒಕ್ಕೊರಳ ಧ್ವನಿ ನಗರದ ಆರ್‌ಟಿಐ ಬಳಕೆದಾರರಿಂದ ವ್ಯಕ್ತವಾಯಿತು.

ಆರ್‌ಟಿಐ ಕಾರ್ಯಕರ್ತ ಹಾಗೂ ರಾಜಸ್ತಾನದಲ್ಲಿ ಅರುಣಾ ರಾಯ್ ನೇತೃತ್ವದಲ್ಲಿ ಆರಂಭಿಸಿದ ರಾಜಸ್ತಾನ ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆ (ಎಂಕೆಎಸ್‌ಎಸ್)ನ ಪ್ರತಿನಿಧಿ ನಿಖಿಲ್ ಶೆಣೈ ಜತೆ ವೆಲೆನ್ಶಿಯಾದ ರೋಶನಿ ನಿಲಯ ಕಾಲೇಜು ಸಭಾಂಗಣದಲ್ಲಿ ನಗರದ ಆರ್‌ಟಿಐ ಬಳಕೆದಾರರ ಜತೆಗನ ಸಂವಾದ ಕಾರ್ಯಕ್ರಮದಲ್ಲಿ ಈ ಅಭಿಪ್ರಾಯ ವ್ಯಕ್ತವಾಯಿತು.


‘‘ಕೊಲೆ ಆರೋಪಿಗಳ ಹುಡುಕಾಟಕ್ಕೆ ಕೇವಲ ಒತ್ತಡ ಹೇರುವ ಬದಲು, ವಿನಾಯಕ ಅವರು ಯಾವ ಪ್ರಕರಣವನ್ನು ಕೈಗೆತ್ತಿಕೊಂಡಿದ್ದರು, ಯಾಕಾಗಿ ಕೊಲೆಯಾದರು ಎಂಬ ವಿಷಯವನ್ನು ಹಿಂಬಾಲಿಸಿ ಅದರ ಬೆನ್ನು ಹಿಡಿಯುವ ಪ್ರಯತ್ನ ನಡೆಸಿದರೆ, ನ್ಯಾಯಕ್ಕಾಗಿ ಹೋರಾಡುವ ಆರ್‌ಟಿಐ ಕಾರ್ಯಕರ್ತನ ಹತ್ಯೆ ನೂರಾರು ಆರ್‌ಟಿಐ ಕಾರ್ಯಕರ್ತರ ಸೃಷ್ಟಿಗೆ ಕಾರಣವಾಗುತ್ತದೆ ಎಂಬ ಪ್ರಬಲವಾದ ಸಂದೇಶದ ಸಮಾಜದಲ್ಲಿ ರವಾನೆಯಾಗುತ್ತದೆ’’ ಎಂದು ಸಂವಾದದ ವೇಳೆ ನಗರದ ಸಾಮಾಜಿಕ ಹೋರಾಟಗಾರ್ತಿ ಅಭಿಪ್ರಾಯಿಸಿದರು.


ಇದನ್ನು ಸಮರ್ಥಿಸಿ ಮಾತನಾಡಿದ ನಿಖಿಲ್ ಶೆಣೈ, ‘‘ವಿನಾಯ ಬಾಳಿಗಾರ ಹತ್ಯೆ ಕುರಿತಂತೆ ಮುಖ್ಯಮಂತ್ರಿಗೆ ಪತ್ರವೊಂದನ್ನು ಬರೆದು, ಅವರು ಕೈಗೆತ್ತಿಕೊಂಡಿದ್ದ ಪ್ರಕರಣಗಳ ಮೂಲವನ್ನು ಕಂಡುಕೊಂಡು ಅದಕ್ಕೆ ನ್ಯಾಯ ಒದಗಿಸುವಂತೆಯೂ ಆರ್‌ಟಿಐ ಕಾರ್ಯಕರ್ತರು ಮುಂದಾಗಬೇಕು. ಇಂತಹ ಕಾರ್ಯಗಳು ಆದಾಗ ಆರ್‌ಟಿಐ ಕಾರ್ಯಕರ್ತರ ಹೋರಾಟಕ್ಕೆ ಬಲ ದೊರಕಿದಂತಾಗುತ್ತದೆ’’ ಎಂದು ಪ್ರತಿಪಾದಿಸಿದರು.


ರಾಜಸ್ತಾನದಲ್ಲಿ ನರೇಗಾ ಸೇರಿದಂತೆ ಜನಸಾಮಾನ್ಯರ ಸಮಸ್ಯೆಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಂಕೆಎಸ್‌ಎಸ್ ದಿಟ್ಟ ಹೋರಾಟವನ್ನು ಮಾಡುತ್ತಿದೆ.


ಅಣೆಕಟ್ಟು, ಕಟ್ಟಡ ನಿರ್ಮಾಣಗಳಲ್ಲಿನ ಅವ್ಯವಹಾರ ಪ್ರಕರಣಗಳ ಜಾಡು ಹಿಡಿದು ಅದನ್ನು ಪರಿಶೀಲನೆ ನಡೆಸುವುದಲ್ಲದೆ ಈ ಬಗ್ಗೆ ಸ್ಥಳೀಯರಿಂದಲೇ ಮಾಹಿತಿ ಸಂಗ್ರಹಿಸಿ, ಅವರನ್ನು ಜಾಗೃತಿಗೊಳಿಸುವುದು, ಅವ್ಯಹಾರ ಪ್ರಕರಣಗಳ ಕುರಿತು ಎಫ್‌ಐಆರ್ ದಾಖಲಿಸುವಂತಹ ಕಾರ್ಯವನ್ನು ಸಂಘಟನೆ ಮಾಡುತ್ತಿದೆ. ಜನರನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಗ್ರಾಮದ ಜನರ ಬಿಡುವಿನ ವೇಳೆ ಹಾಡು, ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ವಿವರಿಸಿದರು.


ವಿವಿಧ ಅಭಿಪ್ರಾಯಗಳನ್ನು ಮಂಡಿಸಿದ ಆರ್‌ಟಿಐ ಬಳಕೆದಾರರು, ಕೇವಲ ಒಂದು ವಿಷಯವನ್ನು ಗುರಿಯಾಗಿಸಿ ಮಾಹಿತಿ ಪಡೆಯುವ ಬದಲು ಪೂರ್ಣ ರೀತಿಯಲ್ಲಿ ಕೇಳಿದರೆ ವಿವಿಧ ಆಯಾಮಗಳ ಬಗ್ಗೆ ಸರಿಯಾದ ಮಾಹಿತಿ ದೊರೆಯುತ್ತದೆ ಹಾಗೂ ಆರ್‌ಟಿಐ ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಬೇಕು. ಈ ನಿಟ್ಟಿನಲ್ಲಿ ಮಾಹಿತಿ ಹಂಚಿಕೆಯ ಕುರಿತು ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳುವ ಕುರಿತಂತೆಯೂ ನಿರ್ಧರಿಸಲಾಯಿತು.
ಪಡಿ ಸಂಸ್ಥೆಯ ರೆನ್ನಿ ಡಿಸೋಜಾ, ನಟೇಶ್ ಉಳ್ಳಾಲ್ ಹಾಗೂ ಇತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X