Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಿನ್ಯ: ಅಲ್-ಬುಖಾರಿ ಮಸೀದಿ ಉದ್ಘಾಟನೆ

ಕಿನ್ಯ: ಅಲ್-ಬುಖಾರಿ ಮಸೀದಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ2 April 2016 9:13 PM IST
share
ಕಿನ್ಯ: ಅಲ್-ಬುಖಾರಿ ಮಸೀದಿ ಉದ್ಘಾಟನೆ

ಉಳ್ಳಾಲ: ಇಸ್ಲಾಮಿನ ಬಗ್ಗೆ ಕೂಲಂಕಷವಾಗಿ ಅರ್ಥಮಾಡಿಕೊಳ್ಳಲು ಮಸೀದಿಗಳ ಅನಿವಾರ್ಯತೆ ಬಹಳಷ್ಟಿದೆ. ಮಸೀದಿ ಅಲ್ಲಾಹನ ಭವನವಾಗಿದ್ದು, ಅದಕ್ಕೆ ಸಲ್ಲಬೇಕಾದ ಗೌರವಗಳನ್ನು ನಾವು ನೀಡಬೇಕಾಗಿದೆ. ಧಾರ್ಮಿಕತೆಯ ಬೆಳವಣಿಗೆ ಮಸೀದಿಗಳು ಅಭಿವೃದ್ಧಿಗೊಂಡರೆ ಮಾತ್ರ ಸಾಧ್ಯ ಎಂದು ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದರು.

ಹುಸೈನಿಯಾ ಇಸ್ಲಾಮಿಕ್ ಸೆಂಟರ್ ಕಿನ್ಯ ಬದ್ರಿಯನಗರ ವಿದ್ಯಾ ಸಂಸ್ಥೆಯ ನಿರ್ಮಿಸಿದ ಅಲ್-ಬುಖಾರಿ ಮಸೀದಿಯನ್ನು ಶನಿವಾರ ಉದ್ಘಾಟಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

  ಮಸೀದಿಯಲ್ಲಿ ಮಾಡುವ ಕಾರ್ಯಗಳಲ್ಲಿ ನಮಾಜು ಪ್ರಮುಖವಾದುದು. ನಮಾಜಿಗಿರುವಷ್ಟು ಪ್ರಾಮುಖ್ಯತೆ ಬೇರೆ ಯಾವುದಕ್ಕೂ ಇಲ್ಲ. ಆದರೆ ನಮಾಜು ಮಾಡುವವ ಮುಸ್ಲಿಂ ಆಗಿರಬೇಕು. ನಮಾಜು ಮಾಡುವವನ ಹೃದಯ ಸ್ವಚ್ಛವಾಗಿರಬೇಕು. ನಮಾಜು ಮಾಡುವ ಸ್ಥಳ ಸ್ವಚ್ಛವಾಗಿರಬೇಕು ಮುಸ್ಲಿಂ ಆಗದವ ನಮಾಜು ಮಾಡಿದರೆ ಅದು ಸರಿಯಾಗುವುದಿಲ್ಲ. ಯಾಕೆಂದರೆ ನಮಾಜು ಮಾಡುವುದಕ್ಕೆ ಕೆಲವು ನೀತಿ ನಿಯಮಗಳಿವೆ. ಅದನ್ನು ಅನುಕರಣೆ ಮಾಡಿಕೊಂಡು ನಮಾಜು ಮಾಡಿದರೆ ಮಾತ್ರ ನಮಾಜು ಸರಿಯಾಗಲು ಸಾಧ್ಯ. ಇದರಲ್ಲಿ ಭಿನ್ನ ನಿಲುವು ಬೇಡ.ಮುಸ್ಲಿಂ ಸಮುದಾಯಗಳಿಗೆ ಆರಾಧನೆಯ ಮುಖ್ಯ ಕೇಂದ್ರವಾಗಿರುವ ಮಸೀದಿಯ ವಿಸ್ತರಣೆ ಈ ಕಾಲದಲ್ಲಿ ಅನಿವಾರ್ಯತೆ ಇದೆ. ನೂತನ ಮಸೀದಿ ನಿರ್ಮಾಣಕ್ಕೆ ಎಲ್ಲರೂ ತನುಮನಧನಗಳಿಂದ ಸಹಕರಿಸಿ ನೆರವಾಗಬೇಕು. ಮಸೀದಿಗೆ ನೀಡಿದ ಕೊಡುಗೆಯ ಫಲ ಎಲ್ಲರಿಗೂ ಸಿಗುತ್ತದೆ. ಧಾರ್ಮಿಕ ಕ್ಷೇತ್ರಗಳ ಬೆಳವಣಿಗೆಯ ಹಿಂದೆ ಮುಸ್ಲಿಮರ ಸೇವೆ ಬಹಳಷ್ಟು ಅಗತ್ಯವಿದೆ ಎಂದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೊಸೋಟ್ ಮಲ್‌ಹರ್ ವಿದ್ಯಾಸಂಸ್ಥೆಯ ಪ್ರ.ಕಾರ್ಯದರ್ಶಿ ಜಲಾಲುದ್ದೀನ್ ತಂಙಳ್ ವಹಿಸಿದ್ದರು. ಸಮಸ್ತ ಕೇರಳ ಸುನ್ನಿ ಜಂಇಯತುಲ್ ಉಲಮಾ ಉಪಾಧ್ಯಕ್ಷ ತಾಜುಶ್ಯರೀಅ ಆಲಿಕುಂಞಿ ಮುಸ್ಲಿಯಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಸೀದಿ ನಿರ್ಮಾಣಕ್ಕೆ ನಿವೇಶನ ನೀಡಿದ ಅಬ್ಬಾಸ್ ಹಾಜಿ ಕಿನ್ಯ ಮತ್ತು ಮಸೀದಿ ನಿರ್ಮಾಣ ಕಾರ್ಯದಲ್ಲಿ ಉತ್ತಮ ಸೇವೆಗೈದ ಇಸ್ಮಾಯಿಲ್ ಸಅದಿ ಕಿನ್ಯರವರನ್ನು ಸನ್ಮಾನಿಸಲಾಯಿತು.

  ವೇದಿಕೆಯಲ್ಲಿ ಶರಫ್ಪುಲ್ ಉಲಮಾ ಪಿಎಂ ಅಬ್ಬಾಸ್ ಮುಸ್ಲಿಯಾರ್ ಅಲ್ ಮದೀನ, ಮಾಣಿ ದಾರುಲ್ ಇರ್ಷಾದ್‌ನ ಅಧ್ಯಕ್ಷ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್, ಎಸ್‌ವೈಎಸ್ ಮೀಂಪ್ರಿ ಅಧ್ಯಕ್ಷ ಸಯ್ಯಿದ್ ಅಲವಿ ತಂಙಳ್ ಕಿನ್ಯ, ಎಸ್‌ವೈಎಸ್ ರಾಜ್ಯಾಧ್ಯಕ್ಷ ಹುಸೈನ್ ಸಅದಿ ಕೆಸಿ.ರೋಡ್, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಎನ್‌ಕೆಎಂ ಶಾಫಿ ಸಅದಿ, ಪ್ರ.ಕಾರ್ಯದರ್ಶಿ ಎಂ.ಬಿ.ಎಂ ಸ್ವಾದಿಕ್ ಮಾಸ್ಟರ್, ಯಾಕುಬ್ ಸಅದಿ, ಕಾರ್ಯದರ್ಶಿ ಅಬ್ದುರ್ರಶೀದ್ ಝೈನಿ ಕಾಮಿಲ್, ಕರ್ನಾಟಕ ಎಸ್‌ಇಡಿಸಿ ಅಧ್ಯಕ್ಷ ಕೆ.ಕೆ. ಮೊಹ್ಯುದ್ದೀನ್ ಕಾಮಿಲ್ ಸಖಾಫಿ ಸುರಿಬೈಲ್, ಎಸ್‌ವೈಎಸ್ ಜಿಲ್ಲಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ, ಅಲ್ ಮದೀನ ಮೆನೇಜರ್ ಅಬ್ದುಲ್ ಖಾದರ್ ಸಖಾಫಿ, ಎಸ್‌ವೈಎಸ್ ಜಿಲ್ಲಾಧ್ಯಕ್ಷ ಎಂ.ಎ. ಸಿದ್ದೀಕ್ ಸಖಾಫಿ, ವಕ್ಫ್ ಬೋರ್ಡ್‌ನ ಜಿಲ್ಲಾಧ್ಯಕ್ಷ ರಶೀದ್ ಹಾಜಿ, ಕೆಎಂಜೆಸಿ ದ.ಕ. ಜಿಲ್ಲಾಧ್ಯಕ್ಷ ಹೈದರ್ ಪರ್ತಿಪ್ಪಾಡಿ, ಮಂಗಳೂರು ಇಸ್ಲಾಮಿಕ್ ಕಲ್ಚರಲ್ ಸೆಂಟರ್‌ನ ಅಧ್ಯಕ್ಷ ಬಿ.ಎಂ. ಮುಮ್ತಾರ್ ಅಲಿ, ಕೆಸಿಎಫ್ ಐಎನ್‌ಸಿ ಸಮಿತಿಯ ಪ್ರ.ಕಾರ್ಯದರ್ಶಿ ಹಾಜಿ ಶೇಖ್ ಬಾವ, ಏಷ್ಯನ್‌ಬಾವಾ ಹಾಜಿ ದೇರಳಕಟ್ಟೆ, ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಕೆ.ಎಂ ಅಬೂಬಕರ್ ಸಿದ್ದೀಕ್ ಮೊಂಟುಗೋಳಿ, ಕುರಿಯ ಎಸ್‌ವೈಎಸ್ ಅಧ್ಯಕ್ಷ ಅಶ್ರಫ್ ಸಖಾಫಿ ಕಿನ್ಯ, ಕಿನ್ಯ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಸಾಧುಕುಂಞಿ ಮಾಸ್ಟರ್ ಕಿನ್ಯ, ಉಪಾಧ್ಯಕ್ಷ ಕೆ.ಎಸ್ ಅಹ್ಮದ್ ಕುಂಞ ಹಾಜಿ, ಕಾರ್ಯದರ್ಶಿ ಅಬೂಸ್ವಾಲೀಹ್ ಕುರಿಯಕ್ಕಾರ್, ಕೆಎಂಜೆಸಿ ದ.ಕ. ಜಿಲ್ಲಾ ಉಪಾಧ್ಯಕ್ಷ ಆಲಿಕುಂಞಿ ಪಾರೆ, ಎಸ್‌ವೈಎಸ್ ಮುಡಿಪು ಸೆಂಟರ್ ಅಧ್ಯಕ್ಷ ಎಸ್.ಕೆ. ಖಾದರ್ ಹಾಜಿ, ಪುತ್ತುಬಾವ ಹಾಜಿ ದೇರಳಕಟ್ಟೆ, ಅಂಗರಗುಂಡಿ ಜುಮ್ಮಾ ಮಸೀದಿ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್, ಪ್ರಧಾನ ಕಾರ್ಯದರ್ಶಿ ಕೆಸಿಎಫ್ ಅಬೂದಾಬಿ ಹಸೈನಾರ್ ಅಮಾನಿ, ಎಸ್‌ಜೆಎಂ ತಲಪಾಡಿ ರೇಂಜ್ ಅಧ್ಯಕ್ಷ ಇಸ್ಮಾಯಿಲ್ ಸಅದಿ, ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಎನ್.ಎಸ್ ಉಮರಬ್ಬ, ಮಂಜನಾಡಿ ಗ್ರಾ.ಪಂ ಅಧ್ಯಕ್ಷ ಮುಹಮ್ಮದ್ ಅಸೈ, ಸದಸ್ಯರಾದ ಕೆ.ಪಿ ಅಶ್ರಫ್ ಕಲ್ಕಟ್ಟ, ಅಬ್ದುಲ್ ಖಾದರ್ ಕಲ್ಕಟ್ಟ, ಜಿ.ಪಂ. ಮಾಜಿ ಅಧ್ಯಕ್ಷ ಎನ್.ಎಸ್. ಕರೀಂ, ಇಲ್ಯಾಸ್ ಜುಮಾ ಮಸೀದಿ ಉಪಾಧ್ಯಕ್ಷ ಮುಹಮ್ಮದ್ ಹಾಜಿ ಖಂಡಿಕ, ಎಸ್‌ವೈಎಸ್ ಕಲ್ಕಟ್ಟ ಅಧ್ಯಕ್ಷ ಮೋನು ಮೊದಲಾದವರು ಉಪಸ್ಥಿತರಿದ್ದರು.

ಹುಸೈನಿಯಾ ಇಸ್ಲಾಮಿಕ್ ಸೆಂಟರ್‌ನ ಉಪಾಧ್ಯಕ್ಷ ಮುಹಮ್ಮದ್ ಅಲಿ ಸಖಾಫಿ ಕುತುಬಿನಗರ ಸ್ವಾಗತ ಹಾಗೂ ಪ್ರಾಸ್ತಾವಿಕ ಭಾಷಣ ಮಾಡಿದರು. ಕೋಶಾಧಿಕಾರಿ ವಿ.ಎ ಮುಹಮ್ಮದ್ ಮುಸ್ಲಿಯಾರ್ ಕಿನ್ಯ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X