Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲೋಕಾಯುಕ್ತ ಉಳಿವಿಗಾಗಿ ಅನಿರ್ದಿಷ್ಟಾವಧಿ...

ಲೋಕಾಯುಕ್ತ ಉಳಿವಿಗಾಗಿ ಅನಿರ್ದಿಷ್ಟಾವಧಿ ಧರಣಿ

ವಾರ್ತಾಭಾರತಿವಾರ್ತಾಭಾರತಿ2 April 2016 11:32 PM IST
share

ಬೆಂಗಳೂರು, ಎ. 2: ಕರ್ನಾಟಕ ಲೋಕಾ ಯುಕ್ತ ಸಂಸ್ಥೆಯನ್ನು ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ಕೊಲ್ಲಲು ಹೊರಟಿದೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ರಾಜ್ಯದ ಭ್ರಷ್ಟ ಸರಕಾರದ ಜನವಿರೋಧಿ ಆದೇಶದ ವಿರುದ್ಧ ಅನಿರ್ದಿಷ್ಟಾವಧಿ ಸತ್ಯಾಗ್ರಹಕ್ಕೆ ಧುಮುಕಿದೆ. ವಿನೂತನ ಪ್ರತಿಭಟನೆಯಲ್ಲಿ ಜನ ಸಾಮಾನ್ಯರು ಲೋಕಾಯುಕ್ತದ ಸಾವಿಗೆ ತಮ್ಮ ಶೋಕಾಚರಣೆ ವ್ಯಕ್ತಪಡಿಸಲು ತಮ್ಮ ಕೇಶ ಮಂಡನೆ ಮಾಡಿಸಿಕೊಂಡು ಪಕ್ಷದ ಮುಖಂಡರಾದ ರವಿಕೃಷ್ಣಾ ರೆಡ್ಡಿ, ವಿಜಯ ಕುಮಾರ್ ಶರ್ಮ, ಮೋಹನ್ ದಾಸರಿ ಸೇರಿದಂತೆ ಆರು ಹೋರಾಟಗಾರರು ಆರಂಭಿಸಿದ ಆಮರಣಾಂತ ಉಪವಾಸ ಸತ್ಯಾಗ್ರಹ ನಾಲ್ಕನೆ ದಿನವನ್ನು ಪೂರೈಸಿದೆ.
ಆಮ್ ಆದ್ಮಿ ಪಕ್ಷದ ಹೋರಾಟವನ್ನು ಬೆಂಬಲಿಸಿ ನಿವೃತ್ತ ಐಎಎಸ್ ಅಧಿಕಾರಿ ವಿಜಯಕುಮಾರ್ ಆಗಮಿಸಿ ಮಾತನಾಡಿ, ಸರಕಾರ ಸತತ ಮುರ್ನಾಲ್ಕು ವರ್ಷಗಳಿಂದ ಲೋಕಾಯುಕ್ತ ಸಂಸ್ಥೆಯನ್ನು ವ್ಯವಸ್ಥಿತವಾಗಿ ಮುಗಿಸಲು ಯತ್ನಿಸುತ್ತಿತ್ತು. ಈಗಿನ ಎಸಿಬಿ ರಚನೆ ಇದಕ್ಕೆ ಕೊನೆಯ ಮೊಳೆ ಎಂದು ಹೇಳಿದರು.
ಬೆಂಗಳೂರು ಆಟೊ ಒಕ್ಕೂಟ ಹಾಗೂ ಕನ್ನಡ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣ, ಲೋಕಾಯುಕ್ತ ಸಂಸ್ಥೆಯ ಶವ ಪೆಟ್ಟಿಗೆಯನ್ನು ಹೊತ್ತು ಮೈಸೂರ್ ಬ್ಯಾಂಕ್ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ಮಾಡಿ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಎಂ.ಪಿ.ನಾಡಗೌಡರು ಮಾತನಾಡಿ, ಸಿದ್ದರಾಮಯ್ಯ ನವರು ಮೊದಲ ಬಾರಿ ಶಾಸಕರಾಗಿದ್ದಾಗ ಲೋಕಾಯುಕ್ತ ಜಾರಿಗೆ ಬಂದಿತ್ತು. ಮುಖ್ಯಮಂತ್ರಿಯಾದ ಮೇಲೆ ಅವರ ಸಮಾಜವಾದಿ ತನ ಬದಲಾಗಿ, ಮಜಾವಾದಿಯಾಗಿದ್ದಾರೆ ಎಂದರು.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರು ಮಾತನಾಡಿ, ಈ ಹೋರಾಟಕ್ಕೆ ಅಣ್ಣಾ ಹಝಾರೆಯವರನ್ನು ಕರೆಸಬೇಕು, ರಾಜ್ಯದ 2-3 ಜಿಲ್ಲೆಗಳಲ್ಲಿ ಅವರು ಸಮಾವೇಶ ನಡೆಸಿ ಬೆಂಗಳೂರಿಗೆ ಬರಬೇಕು ಎಂದರು. ಇನ್ನು ನಾಲ್ಕನೆ ದಿನದಿಂದ ಉಪವಾಸ ವಿರುವ ರಾಜ್ಯ ಮುಖಂಡರಾದ ರವಿಕೃಷ್ಣಾ ರೆಡ್ಡಿ ಮಾತನಾಡಿ, ಲೋಕಾಯುಕ್ತ ಬಲ ಗೊಳ್ಳುವವರೆಗೂ ನಮ್ಮ ಹೋರಾಟ ನಿಲ್ಲುವು ದಿಲ್ಲ ಎಂದು ಹೇಳಿದರು.
 ಆಮ್ ಆದ್ಮಿ ಪಕ್ಷ ರಾಜ್ಯದ ಮಹಾ ಜನತೆಯ ಮೇಲೆ ನ್ಯಾಯಪರತೆ ಮತ್ತು ಭ್ರಷ್ಟಾಚಾರ ವಿರೋಧಿ ನಿಲುವಿನ ವಿಶ್ವಾಸ ವಿಟ್ಟು ಈ ಹೋರಾಟಕ್ಕೆ ಧುಮುಕುತ್ತಿದ್ದು, ಇದನ್ನು ಸಂಪೂರ್ಣವಾಗಿ ಬೆಂಬಲಿಸಲು ಮತ್ತೊಮ್ಮೆ ಕಳಕಳಿಯ ಮನವಿ ಮಾಡುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X