Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಲ್ಕತಾ ಮೇಲ್ಸೇತುವೆ ದುರಂತಕ್ಕೆ...

ಕೋಲ್ಕತಾ ಮೇಲ್ಸೇತುವೆ ದುರಂತಕ್ಕೆ ಕಾರಣವಾದ ಕಂಪೆನಿಗೆ ರಾಜ್ಯದಲ್ಲಿ 12 ಯೋಜನೆಗಳ ಗುತ್ತಿಗೆ!

ವಾರ್ತಾಭಾರತಿವಾರ್ತಾಭಾರತಿ2 April 2016 11:44 PM IST
share
ಕೋಲ್ಕತಾ ಮೇಲ್ಸೇತುವೆ ದುರಂತಕ್ಕೆ ಕಾರಣವಾದ ಕಂಪೆನಿಗೆ ರಾಜ್ಯದಲ್ಲಿ 12 ಯೋಜನೆಗಳ ಗುತ್ತಿಗೆ!

ಬೆಂಗಳೂರು, ಎ.2: ಕೋಲ್ಕತಾದಲ್ಲಿ ಗುರುವಾರ 24 ಮಂದಿಯನ್ನು ಬಲಿ ತೆಗೆದುಕೊಂಡ ಮೇಲ್ಸೇತುವೆ ಕುಸಿತದ ಬಳಿಕ, ಎಲ್ಲರ ಕೆಂಗಣ್ಣಿಗೆ ಗುರಿಯಾಗಿರುವ ನಿರ್ಮಾಣ ಸಂಸ್ಥೆ ಇರಗವರಪು ವೆಂಕಟರೆಡ್ಡಿ ಕನ್‌ಸ್ಟ್ರಕ್ಷನ್ಸ್ ಲಿಮಿಟೆಡ್(ಐವಿಆರ್‌ಸಿಎಲ್) ಬೆಂಗಳೂರಿನಲ್ಲಿ 6 ಮೆಟ್ರೊ ನಿಲ್ದಾಣಗಳ ಸಹಿತ 12 ಯೋಜನೆಗಳನ್ನು ಕರ್ನಾಟಕದಲ್ಲಿ ಕೈಗೆತ್ತಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಕೋಲ್ಕತಾದ ದುರಂತದಿಂದಾಗಿ, ‘ಸುರಕ್ಷಿತ ಹಾಗೂ ತಾಳಿಕೆಯ ವಿಶ್ವವನ್ನು ಕಟ್ಟಲು ಬದ್ಧ’ ಎಂಬ ಐವಿಆರ್‌ಸಿಎಲ್‌ನ ಪ್ರತಿಪಾದನೆಗೆ ಕರಿಮೋಡ ಮುಸುಕಿದಂತಾಗಿದೆ. ಆದಾಗ್ಯೂ, ಕಂಪೆನಿಗೆ ಕಳಂಕ ಬರುವಂತಹ ಯಾವ ಘಟನೆಯೂ ಕರ್ನಾಟಕದಲ್ಲಿ ಈವರೆಗೆ ನಡೆದಿಲ್ಲ.

ಅದು ಹಲಸೂರು, ಸಿಎಂಎಚ್ ರೋಡ್, ಓಲ್ಡ್ ಮದ್ರಾಸ್ ರೋಡ್, ಬೈಯಪ್ಪನ ಹಳ್ಳಿ, ಆರ್.ವಿ. ರೋಡ್ ಹಾಗೂ ಜಯನಗರ ಮೆಟ್ರೊ ನಿಲ್ದಾಣಗಳನ್ನು ನಿರ್ಮಿಸಿದೆ. ಇವುಗಳಲ್ಲಿ ಮೊದಲ ನಾಲ್ಕು ನಿಲ್ದಾಣಗಳು ಕಾರ್ಯಾಚರಣೆ ಆರಂಭಿಸಿದ್ದರೆ, ಕೊನೆಯ ಎರಡು ಉದ್ಘಾಟನೆಗಾಗಿ ಕಾಯುತ್ತಿವೆ.

ಐವಿಆರ್‌ಸಿಎಲ್, ಕರ್ನಾಟಕದಲ್ಲಿ ಮೆಟ್ರೊ ಯೋಜನೆಗಳನ್ನು ಮಾತ್ರವಲ್ಲದೆ, ನೀರು ಪೂರೈಕೆ, ನೀರಾವರಿ ಹಾಗೂ ಒಂದು ವಿದ್ಯುತ್ ಯೋಜನೆಯ ಕೆಲಸಗಳನ್ನೂ ಕೈಗೆತ್ತಿಕೊಂಡಿದೆ. ಇವುಗಳಲ್ಲಿ ಬೆಂಗಳೂರು ನೀರು ಪೂರೈಕೆ ಮತ್ತು ಒಳಚರಂಡಿ ಮಂಡಳಿಯ(ಬಿಡಬ್ಲುಎಸ್‌ಎಸ್‌ಬಿ) ಜೈಐಸಿಎ ನಿಧಿಯ ಯೋಜನೆ-2ರಡಿಯಲ್ಲಿ, ಫೋರ್ಬ್ಸ್ ಸಮತೋಲನ ಜಲಾಶಯದಿಂದ ಟಿ.ಕೆ. ಹಳ್ಳಿಗೆ ಕಚ್ಚಾ ನೀರು ಪೂರೈಕೆ ವ್ಯವಸ್ಥೆ, ಕರ್ನಾಟಕ ನಗರ ನೀರು ಪೂರೈಕೆ ಹಾಗೂ ಒಳಚರಂಡಿ ಮಂಡಳಿಯ ಸಣ್ಣ ಹಾಗೂ ಮಧ್ಯಮ ಪಟ್ಟಣಗಳಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯನ್ವಯ ಸಣ್ಣ ಹಾಗೂ ಮಧ್ಯಮ ಪಟ್ಟಣಗಳಲ್ಲಿ ನಗರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯನ್ವಯ ಆಲಮಟ್ಟಿ ಅಣೆಕಟ್ಟಿನಿಂದ ಹುನಗುಂದ, ಇಳಕಲ್, ಕುಷ್ಟಗಿ ಪಟ್ಟಣಗಳಿಗೆ ಮತ್ತು ಮಾರ್ಗದಲ್ಲಿ ಬರುವ ಗ್ರಾಮಗಳಿಗೆ ನೀರು ಸರಬರಾಜು ಯೋಜನೆಗಳು ಸೇರಿವೆ.

ಅಲ್ಲದೆ, ಕಾವೇರಿ ನೀರಾವರಿ ನಿಗಮಕ್ಕಾಗಿ ಅಲಂಬೂರು ಗ್ರಾಮದ ಸಮೀಪ ಕಬಿನಿ ನದಿಯಿಂದ ನೀರನ್ನೆತ್ತಿ, ನಂಜನಗೂಡು, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕುಗಳಲ್ಲಿ ಕುಡಿಯುವ ನೀರಿಗಾಗಿ 20 ಟ್ಯಾಂಕ್‌ಗಳನ್ನು ತುಂಬುವ ಯೋಜನೆಯನ್ನೂ ಸಂಸ್ಥೆ ವಹಿಸಿಕೊಂಡಿತ್ತು.

ಅದು, ಕರ್ನಾಟಕ ನೀರಾವರಿ ನಿಗಮಕ್ಕಾಗಿ ಎತ್ತಿನ ಹೊಳೆ ಹಾಗೂ ಭದ್ರಾ ಆಧುನಿಕೀಕರಣ ಯೋಜನೆಗಳ ಗುತ್ತಿಗೆಯನ್ನೂ ಪಡೆದಿದೆ. ನಿರ್ಮಾಣ ಸಂಸ್ಥೆಯು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ಲಿಮಿಟೆಡ್‌ಗಾಗಿ, ಕೊಡಗಿ ಸೂಪರ್ ಥರ್ಮಲ್ ಪವರ್ ಸ್ಟೇಶನ್ ಸ್ಟೇಜ್-1ರ ನಿವೇಶನದ ಹೊರಗಿನ ಸಿವಿಲ್ ಕಾಮಗಾರಿ ಪ್ಯಾಕೇಜ್‌ನ ಕೆಲಸಗಳನ್ನು ಮಾಡುತ್ತಿದೆ.

ಐವಿಆರ್‌ಸಿಎಲ್, ಸುಮಾರು 7 ವರ್ಷಗಳ ಹಿಂದೆ ಬಿಬಿಎಂಪಿಯ ಕೆಲವು ಯೋಜನೆಗಳಿಗೂ ಬಿಡ್ ಹಾಕಿತ್ತು. ಆದರೆ, ಪಾಲಿಕೆಯಲ್ಲಿ ನಡೆದಿದ್ದ ಕುಖ್ಯಾತ ‘ಮಧ್ಯ ರಾತ್ರಿಯ ಟೆಂಡರ್’ ಹಗರಣ, ಇಡೀ ಟೆಂಟರ್ ಪ್ರಕ್ರಿಯೆಯ ಮೇಲೆಯೇ ಕರಿ ನೆರಳನ್ನು ಬೀರಿತ್ತು. ಅದರಿಂದಾಗಿ, ಅದಕ್ಕೆ ಯಾವುದೇ ಗುತ್ತಿಗೆ ದೊರೆತಿರಲಿಲ್ಲವೆಂದು ಪಾಲಿಕೆಯ ಮುಖ್ಯ ಇಂಜಿನಿಯರ್ ಒಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X