Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೀವನದ ಶಿಸ್ತು ಉದ್ಯಮದ ಯಶಸ್ಸಿನ ಗುಟ್ಟು:...

ಜೀವನದ ಶಿಸ್ತು ಉದ್ಯಮದ ಯಶಸ್ಸಿನ ಗುಟ್ಟು: ಪ್ರವೀಣ್ ಕಡ್ಲೆ

ವಾರ್ತಾಭಾರತಿವಾರ್ತಾಭಾರತಿ2 April 2016 11:51 PM IST
share
ಜೀವನದ ಶಿಸ್ತು ಉದ್ಯಮದ ಯಶಸ್ಸಿನ ಗುಟ್ಟು: ಪ್ರವೀಣ್ ಕಡ್ಲೆ

ಮಂಗಳೂರು, ಎ.2: ಜೀವನದ ಶಿಸ್ತು ಉದ್ಯಮದ ಯಶಸ್ಸಿಗೆ ಪ್ರಮುಖ ಕಾರಣವಾಗಿದ್ದು, ಶಿಸ್ತಿನ ಜೊತೆ ಸ್ಪಷ್ಟ ಗುರಿ ಅತ್ಯುತ್ತಮ ಸ್ಥಾನಕ್ಕೇರಲು ಸಹಕಾರಿ ಯಾಗುತ್ತದೆ ಎಂದು ಟಾಟಾ ಕ್ಯಾಪಿಟಲ್ ಗ್ರೂಪ್ ಆಫ್ ಕಂಪೆನೀಸ್‌ನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್ ಪಿ. ಕಡ್ಲೆ ಅಭಿಪ್ರಾಯಿಸಿದ್ದಾರೆ.

ಅವರು ಇಂದು ಬೋಂದೆಲ್‌ನ ಬೆಸೆಂಟ್ ವ್ಯವಹಾರಾಡಳಿತ ಸ್ನಾತಕೋತ್ತರ ಶಿಕ್ಷಣ ಸಂಸ್ಥೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಡೆಪ್ಯುಟಿ ಗವರ್ನರ್ ಜೊತೆಗಿನ ಸಂವಾದ ಕಾರ್ಯ ಕ್ರಮದಲ್ಲಿ ಉದ್ಯಮದಲ್ಲಿನ ತಮ್ಮ ಅನುಭವ ಹಾಗೂ ತಮ್ಮ ಜೀವನದ ಬಗ್ಗೆ ಅಭಿಪ್ರಾಯ ಹಂಚಿಕೊಂಡರು.

ತನ್ನ ಕುಟುಂಬ, ಬಾಲ್ಯ ಜೀವನ, ಶಾಲಾ ಕಾಲೇಜು ಜೀವನ ಹಾಗೂ ವೃತ್ತಿ ಜೀವನದ ಬಗ್ಗೆ ವಿವರ ನೀಡಿದ ಅವರು, ಅಗರ್‌ವಾಲ್ ಕಂಪೆನಿ ಹಾಗೂ ಟಾಟಾ ಸಂಸ್ಥೆಯಲ್ಲಿನ ವೃತ್ತಿ ಜೀವನ ತನ್ನಲ್ಲಿ ಉದ್ಯಮದ ಬಗ್ಗೆ ಸಾಕಷ್ಟು ಚೈತನ್ಯವನ್ನು ತುಂಬಿದೆ ಎಂದರು. ಕ್ರೀಡೆ, ವ್ಯವಹಾರ, ಕೈಗಾರಿಕೆ, ರಾಜಕೀಯ ಮುತ್ಸದ್ಧಿಗಳು ಹಾಗೂ ಚಿಂತಕರ ಜೀವನ ಚರಿತ್ರೆಯ ಪುಸ್ತಕಗಳನ್ನು ತಾನು ಹೆಚ್ಚಾಗಿ ಓದುತ್ತೇನೆ ಎಂದು ಹೇಳಿದ ಅವರು, ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು. ಟಾಟಾ ಸಂಸ್ಥೆಯು ಗಣ್ಯ ವ್ಯಕ್ತಿಗಳ ಜತೆಗಿನ ಒಡನಾಟಕ್ಕೆ ತನಗೆ ನೆರವು ನೀಡಿದೆ. ಸಂಸ್ಥೆಯ ಮುಖ್ಯಸ್ಥರ ಆತ್ಮೀಯ ಸಂಪರ್ಕ ಹಾಗೂ ಒಡನಾಟ ತನ್ನ ಉದ್ಯಮ ಕ್ಷಮತೆ ಹಾಗೂ ಕಾರ್ಯ ನಿರ್ವಹಣೆಗೆ ಸಹಕಾರಿಯಾಗಿದೆ ಎಂದು ಅವರು ಟಾಟಾ ಸಂಸ್ಥೆಯಲ್ಲಿನ ತಮ್ಮ ಅನುಭವವನ್ನು ಈ ಸಂದರ್ಭ ಹಂಚಿಕೊಂಡರು.

ಓರ್ವ ಉದ್ಯಮಿ, ಸಾಮಾಜಿಕ ವ್ಯಕ್ತಿಯಾಗಿ ಜತೆಗೆ ಓರ್ವ ಕುಟುಂಬಸ್ಥನಾಗಿ ಸಮಯ ನಿರ್ವಹಣೆ ಹೇಗೆ ಮಾಡುತ್ತೀರೆಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಅವರು, ಇದೊಂದು ಕಠಿಣ ಸವಾಲು. ಆದರೆ, ನೂತನ ತಂತ್ರಜ್ಞಾನ ಸಮಯ ನಿರ್ವಹಣೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ಅಧ್ಯಾತ್ಮದ ಬಗೆಗಿನ ಪ್ರಶ್ನೆಗೆ, ಅಧ್ಯಾತ್ಮವೆಂಬುದು ಒಂದು ನಂಬಿಕೆ. ನಾವು ಸಂಕಷ್ಟದಲ್ಲಿರುವಾಗ ನಂಬಿಕೆಗಳ ಮೊರೆ ಹೋಗುತ್ತೇವೆ. ಅದು ಅಗೋಚರ ಶಕ್ತಿಯಾಗಿರಬಹುದು ಅಥವಾ ದೇವರೆಂಬ ನಂಬಿಕೆಯೇ ಆಗಿರಬಹುದು. ಈ ನಂಬಿಕೆ ಕೆಲವೊಮ್ಮೆ ನಮ್ಮ ಸಮಸ್ಯೆಗಳಿಗೆ ಪರಿಹಾರ ಮಾರ್ಗವಾಗಿ ಬಿಡುತ್ತದೆ. ಇದು ಅವರವರ ನಂಬಿಕೆಯ ಪ್ರಶ್ನೆ ಎಂದ ವರು ಪ್ರತಿಕ್ರಿಯಿಸಿದರು.

ಬೆಸೆಂಟ್ ಸಂಸ್ಥೆಗಳ ಮುಖ್ಯಸ್ಥರಾದ ಕುಡ್ಪಿಜಗದೀಶ್ ಶೆಣೈ, ಮಣೇಲ್ ಅಣ್ಣಪ್ಪನಾಯಕ್, ಶ್ಯಾಮ ಸುಂದರ ಕಾಮತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X