ಅಪಘಾತದ ಗಾಯಾಳು ಮೃತ್ಯು
ಪಡುಬಿದ್ರೆ, ಎ.2: ಬಡಾ ಎರ್ಮಾಳು ಗ್ರಾಮದ ಉಚ್ಚಿಲ ಬದ್ದಿಂಜೆ ಮಠದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾ.27 ರಂದು ಸಂಜೆ ವೇಳೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂಳೂರಿನ ಅಣ್ಣಯ್ಯ ಪೂಜಾರಿ(68) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ವೇಳೆ ಮೃತಪಟ್ಟಿದ್ದಾರೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೈಕ್, ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಅಣ್ಣಯ್ಯ ಪೂಜಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಅಪಘಾತದಲ್ಲಿ ಬೈಕ್ ಸವಾರ ಮುಹಮ್ಮದ್ ಫಯಾಝ್ ಎಂಬವರೂ ಗಾಯಗೊಂಡಿದ್ದರು. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story