ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು
ಕೊಲ್ಲೂರು, ಎ.2: ವೈಯಕ್ತಿಕ ಕಾರಣ ದಿಂದ ಮನನೊಂದು ಎ.1ರಂದು ಸಂಜೆ ವೇಳೆ ಮದ್ಯದೊಂದಿಗೆ ವಿಷ ಬೆರೆಸಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇಡೂರು ಗ್ರಾಮದ ಹೆರಿಯಣ್ಣ ಶೆಟ್ಟಿ (83) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಎ.2 ರಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story