Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಿಯು ಉತ್ತರ ಪತ್ರಿಕೆ ವೌಲ್ಯಮಾಪನ ಸ್ಥಗಿತ

ಪಿಯು ಉತ್ತರ ಪತ್ರಿಕೆ ವೌಲ್ಯಮಾಪನ ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ3 April 2016 10:02 PM IST
share

ಆತಂಕದಲ್ಲಿ ವಿದ್ಯಾರ್ಥಿಗಳು
ಬೆಂಗಳೂರು, ಎ. 3: ದ್ವಿತೀಯ ಪಿಯುಸಿಪರೀಕ್ಷೆಯ ಉತ್ತರ ಪತ್ರಿಕೆಗಳ ವೌಲ್ಯಮಾಪನ ದಿಂದ ಪದವಿಪೂರ್ವ ಕಾಲೇಜು ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಸಂಘ ಹಿಂದಕ್ಕೆ ಸರಿದಿರುವುದರಿಂದ, ವಿದ್ಯಾರ್ಥಿಗಳು ಮತ್ತೆ ಆತಂಕಕ್ಕೆ ಒಳಗಾಗುವಂತಾಗಿದೆ.
ಪದವಿಪೂರ್ವ ಶಿಕ್ಷಣ ಮಂಡಳಿಯು ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ವೌಲ್ಯಮಾಪನ ಆರಂಭಿಸಲು ನಿರ್ಧರಿಸಿದ್ದು, ವೌಲ್ಯಮಾಪನ ಪ್ರಕ್ರಿಯೆಲ್ಲಿ ಪಾಲ್ಗೊಳ್ಳುವಂತೆ ಉಪನ್ಯಾಸಕರಿಗೆ ಆದೇಶ ನೀಡಿತ್ತು.
ಆದರೆ, ತಮ್ಮ ಬೇಡಿಕೆಗಳು ಈಡೇರಿಸುವವರೆಗೆ ಯಾವುದೇ ಕಾರಣಕ್ಕೂ ವೌಲ್ಯಮಾಪನದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉಪನ್ಯಾಸಕರು ಪಟ್ಟು ಹಿಡಿದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.

ಬೆಂಗಳೂರು, ಮಂಗಳೂರು ಹಾಗೂ ಮೈಸೂರು ಸೇರಿದಂತೆ ಒಟ್ಟು 45 ಕೇಂದ್ರಗಳಲ್ಲಿ ಇಂದಿನಿಂದ ಪಿಯು ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆ ವೌಲ್ಯಮಾಪನ ಪ್ರಾರಂಭವಾಗಬೇಕಾಗಿತ್ತು. ಅಲ್ಲದೆ, ಒಂದು ವೌಲ್ಯಮಾಪನ ಕೇಂದ್ರ ದಲ್ಲಿ 600ಕ್ಕಿಂತ ಹೆಚ್ಚು ಉಪನ್ಯಾಸಕರು ಹಾಜರಾಗುತ್ತಾರೆ. ಆದರೆ, ಈ ಬಾರಿ ಒಬ್ಬರೂ ವೌಲ್ಯಮಾಪನ ಕೇಂದ್ರಕ್ಕೆ ಹಾಜರಾಗಿಲ್ಲ ಎಂದು ವರದಿ ಯಾಗಿದೆ.
 ನಗರದ ಫ್ರೀಡಂ ಪಾರ್ಕ್‌ನಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಮಾತನಾಡಿ, ಪಿಯು ಉಪನ್ಯಾಸಕರು ವೇತನ ತಾರತಮ್ಯ ನಿವಾರಣೆಗಾಗಿ 1998ರಿಂದಲೂ ಹೋರಾಟಗಳನ್ನು ನಡೆಸುತ್ತಿದ್ದಾರೆ. ಆದರೆ, ಇದುವರೆಗೂ ರಾಜ್ಯ ಸರಕಾರ ಯಾವುದೇ ಸಮಸ್ಯೆಗೆ ಸೂಕ್ತ ಪರಿಹಾರ ನೀಡದೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎ.1ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಸಿದ ಸಭೆಯೂ ವಿಫಲಗೊಂಡಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರು ವೌಲ್ಯಮಾಪನ ವನ್ನು ಬಹಿಷ್ಕರಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದು ಅವರು ಹೇಳಿದರು.
 ಉಪನ್ಯಾಸಕರ ಮತ್ತು ಪ್ರಾಂಶುಪಾಲರ ವೇತನ ತಾರತಮ್ಯ ನಿವಾರಣೆಗೆ ಜಿ.ಕುಮಾರ್‌ನಾಯ್ಕಾ ನೇತೃತ್ವದಲ್ಲಿ ರಚಿಸಿದ್ದ ಸಮಿತಿ ವರದಿಯನ್ನು ಸಲ್ಲಿಸಿ, ನಾಲ್ಕು ವರ್ಷಗಳು ಕಳೆದಿದ್ದರೂ ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ಸಾಲಿನಲ್ಲಿ ವರದಿಯನ್ನು ಅನುಷ್ಠಾನಗೊಳಿಸಬೇಕು ಹಾಗೂ ವೇತನ ಹೆಚ್ಚಳಗೊಳಿಸುವರೆಗೂ ಉತ್ತರ ಪತ್ರಿಕೆಗಳ ವೌಲ್ಯಮಾಪನಕ್ಕೆ ಮುಂದಾಗುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ದ್ವೀತಿಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಗೊಂದಲಕ್ಕೆ ತೇಪೆ ಹಾಕುವ ಕಾರ್ಯದಲ್ಲಿ ನಿರತರಾಗಿರುವ ಪಿಯು ಮಂಡಳಿ ಅಧಿಕಾರಿಗಳು ಇಂದು ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದೆ ಎನ್ನುವ ವಿಷಯವನ್ನೇ ಮರೆತ್ತಿದ್ದಾರೆ.
- ತಿಮ್ಮಯ್ಯ ಪುರ್ಲೆ, ಅಧ್ಯಕ್ಷ, ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X