Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಮಂಕುತಿಮ್ಮನ ಕಗ್ಗ’ ಆಧುನಿಕ ಕಾಲದ...

‘ಮಂಕುತಿಮ್ಮನ ಕಗ್ಗ’ ಆಧುನಿಕ ಕಾಲದ ಉಪನಿಷತ್ತು: ಅ.ರಾ.ಮಿತ್ರ

ವಾರ್ತಾಭಾರತಿವಾರ್ತಾಭಾರತಿ3 April 2016 10:04 PM IST
share
‘ಮಂಕುತಿಮ್ಮನ ಕಗ್ಗ’ ಆಧುನಿಕ ಕಾಲದ ಉಪನಿಷತ್ತು: ಅ.ರಾ.ಮಿತ್ರ

ಬೆಂಗಳೂರು, ಎ.3: ಹಿರಿಯ ಸಾಹಿತಿ ಡಿ.ವಿ. ಗುಂಡಪ್ಪ (ಡಿವಿಜಿ)ನವರ ‘ಮಂಕುತಿಮ್ಮನ ಕಗ್ಗ’ವು ಭವಿಷ್ಯದಲ್ಲಿ ನಡೆಯುವಂತಹ ತಲ್ಲಣಗಳನ್ನು ಮೊದಲೆ ಅರ್ಥೈಸಲಾಗಿದೆ. ಈ ಕಗ್ಗ ಆಧುನಿಕ ಕಾಲದ ಉಪನಿಷತ್ತು ಎಂದು ಹಿರಿಯ ಸಾಹಿತಿ ಅ.ರಾ.ಮಿತ್ರ ಅಭಿಪ್ರಾಯಪಟ್ಟಿದ್ದಾರೆ.
 ರವಿವಾರ ನಗರದ ನಯನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹೊಂಬಾಳೆ ಪ್ರತಿಭಾರಂಗ ಆಯೋಜಿಸಿದ್ದ ಕವಿದನಿ-ಡಿವಿಜಿ ಕವಿತೆಗಳ ಓದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಡಿವಿಜಿಯವರ ಮಂಕುತಿಮ್ಮನ ಕಗ್ಗವು ಜಗಕ್ಕೆ ಹಾಸ್ಯದ ಮೂಲಕವೇ ನೀತಿಪಾಠ ಹೇಳುತ್ತದೆ. ಅಲ್ಲದೆ, ಭವಿಷ್ಯದಲ್ಲಿ ಸಂಭವಿಸುವ ತಲ್ಲಣಗಳು ಮತ್ತು ಮಾನವೀಯ ಸಂಬಂಧ ಗಳಲ್ಲಿನ ತೊಡಕುಗಳ ಬಗ್ಗೆ ಪ್ರತಿಪಾದಿಸಿದ್ದರು. ಹೀಗಾಗಿ ಈ ಕಗ್ಗ ಆಧುನಿಕ ಕಾಲದ ಉಪನಿಷತ್ತು ಎಂದು ಗುರುತಿಸಬಹುದು ಎಂದು ಹೇಳಿದರು.
 ಡಿವಿಜಿ ಒಂದು ವಿಶ್ವಕೋಶವಿದ್ದಂತೆ. ಅನೇಕ ಭಾಷೆಗಳನ್ನು ಬಲ್ಲ ಅವರು ಆಂಗ್ಲ ಭಾಷೆಯಲ್ಲಿ ಆಂಗ್ಲ ಪಂಡಿತರನ್ನೇ ನಾಚಿಸುವಂತಹ ಪ್ರೌಢಿಮೆಯನ್ನು ಕರಗತಗೊಳಿಸಿಕೊಂಡಿದ್ದರು. ಕನ್ನಡದಲ್ಲಿ ಪ್ರಾಸವನ್ನು ಬಿಟ್ಟು ಕವಿತೆಗಳನ್ನು ರಚಿಸಿದ ಮೊದಲ ಕವಿ ಡಿವಿಜಿ ಎಂದು ಹೇಳಿದ ಅವರು, ಕನ್ನಡ ಸಾಹಿತ್ಯದ ಹಳೆಯ ಪರಂಪರೆಯನ್ನು ಪ್ರಜ್ವಲಿಸುವಂತಹ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸುವ ಅವಶ್ಯಕತೆಯಿದೆ ಎಂದರು.
ಕಾರ್ಯಕ್ರಮದಲ್ಲಿ ಸಾಹಿತಿ ಡಾ.ನಾ.ಗೀತಾಚಾರ್ಯ ಮಾತನಾಡಿ, ದಕ್ಷಿಣ ಭಾರತದ ಪ್ರಸಿದ್ಧ ಕವಿಗಳಾದ ಸರ್ವಜ್ಞ, ತಿರುವಳ್ಳವರ್ ಮತ್ತು ವೇಮಣ್ಣರ ಸಾಲಿಗೆ ಕವಿ ಡಿವಿಜಿ ಸೇರುತ್ತಾರೆ. ಇವರ ತ್ರಿಪದಿಗಳು ಇಂದು ನುಡಿಗಟ್ಟು ಮತ್ತು ಗಾದೆಗಳಾಗಿ ಹೆಚ್ಚು ಪ್ರಚಲಿತವಾಗಿವೆ. ಅಲ್ಲದೆ, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತನ್ನ ಬಜೆಟ್ ಮಂಡನೆ ವೇಳೆ ‘ಕಗ್ಗ’ವನ್ನು ಉಲ್ಲೇಖಿಸಿರುವುದು ಗಮನಾರ್ಹ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಡಿವಿಜಿಯವರ ಕವಿತೆಗಳನ್ನು ಡಾ.ನಾ.ಗೀತಾಚಾರ್ಯ, ಅ.ರಾ.ಮಿತ್ರ, ಗಮಕ ಕಲಾವಿದ ಡಾ.ಕೆ.ಶ್ರೀನಿವಾಸ್ ವಾಚಿಸಿದರು. ಹೊಂಬಾಳೆ ಪ್ರತಿಭಾರಂಗದ ಎಚ್.ಫಲ್ಗುಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X