Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವ ಕವಿಗಳು ಸಾಹಿತ್ಯದತ್ತ...

ಯುವ ಕವಿಗಳು ಸಾಹಿತ್ಯದತ್ತ ವಾಲುತ್ತಿರುವುದು ಶ್ಲಾಘನೀಯ: ಡಾ.ಸಿದ್ದಲಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ3 April 2016 10:07 PM IST
share
ಯುವ ಕವಿಗಳು ಸಾಹಿತ್ಯದತ್ತ ವಾಲುತ್ತಿರುವುದು ಶ್ಲಾಘನೀಯ: ಡಾ.ಸಿದ್ದಲಿಂಗಯ್ಯ

ಬೆಂಗಳೂರು, ಎ.3: ಹೊಸ ತಲೆಮಾರಿನ ಯುವ ಕವಿಗಳಿಂದು ಕನ್ನಡ ಸಾಹಿತ್ಯವನ್ನು ರಚಿಸುತ್ತಿರುವುದು ಶ್ಲಾಘನೀಯ ಎಂದು ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ ಅಭಿಪ್ರಾಯಿಸಿದ್ದಾರೆ.
ರವಿವಾರ ನಗರದ ಸ್ವಾತಂತ್ರ ಉದ್ಯಾನ ವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ನಿತ್ಯೋತ್ಸವ ಸಾಹಿತ್ಯ ಬಳಗದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಪತ್ರಕರ್ತ, ಕವಿ ರಮೇಶ್ ಹಿರೇಜಂಬೂರ ಅವರು ರಚಿಸಿರುವ ‘ಅಳುವ ನದಿಗಳು’ ಕವನ ಸಂಕಲನ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
ದಲಿತರು ಮತ್ತು ಶೋಷಿತರ ನೋವು-ನಲಿವುಗಳ ಕುರಿತ ಸಾಹಿತ್ಯವನ್ನು ರಚಿಸು ವತ್ತ ಯುವ ತಲೆಮಾರಿನ ಕವಿಗಳು ಮುಂದಾ ಗುತ್ತಿರುವುದು ಅಭಿನಂದನೀಯ. ಸಾಹಿತ್ಯದಲ್ಲಿ ಬಂಡಾಯ ಧೋರಣೆಯ ಕವಿತೆಗಳು ರಚನೆ ಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅವರು ಹೇಳಿದರು.
 ಸಮಾಜ ಬದಲಾಗಬೇಕು, ಸಮಾನತೆಯ ಸಮಾಜ ನಿರ್ಮಾಣ ಆಗಬೇಕೆಂಬ ಕನಸಿನೊಂದಿಗೆ ಯುವ ಕವಿಗಳು ತಮ್ಮ ಸಾಹಿತ್ಯವನ್ನು ರಚಿಸಬೇಕು. ಆ ಹಿನ್ನೆಲೆಯಲ್ಲಿ ಆರೋಗ್ಯಪೂರ್ಣವಾದ ಕವಿತೆಗಳು ಅಳುವ ನದಿಗಳು ಕವನ ಸಂಕಲನದಲ್ಲಿ ಮೂಡಿ ಬಂದಿವೆ. ಇನ್ನೂ ಬಡವರು ಬಡವರಾಗಿಯೇ ಉಳಿದಿದ್ದಾರೆ, ಶ್ರೀಮಂತರು ಇನ್ನೂ ಹೆಚ್ಚು ಶ್ರೀಮಂತರಾಗುತ್ತ್ತಿದ್ದಾರೆ. ಹೀಗಾಗಿ ತುಳಿತಕ್ಕೆ ಒಳಗಾಗಿರುವಂತಹವರು ಇದರಲ್ಲಿರುವ ಅರ್ಥವನ್ನು ಅರಿಯಬೇಕು ಎಂದರು.
ಸಮಾಜದಲ್ಲಿ ಸ್ವತಃ ಅರಿತ ನೋವು- ನಲಿವುಗಳನ್ನು ಪದಗಳನ್ನಾಗಿಸಿ ರಮೇಶ್ ಕವನ ಸಂಕಲನ ಮೂಲಕ ಜನರಿಗೆ ತಲುಪಿಸು ವಂತಹ ಪ್ರಯತ್ನ ಮಾಡಿದ್ದಾರೆ. ಇಂತಹ ಕವನ ಸಂಕಲನಗಳು ಮತ್ತು ಕನ್ನಡ ಸಾಹಿತ್ಯ ಹೆಚ್ಚಾಗಿ ಹೊರಬರಬೇಕು. ಹಾಗೂ ಹೆಚ್ಚು ಜನರನ್ನು ತಲುಪಬೇಕು. ಆಗ ಮಾತ್ರ ಸಮಾಜದಲ್ಲಿ ದೌರ್ಜನ್ಯ ಮುಕ್ತ ಸಮಾಜ ನಿರ್ಮಾಣ ಸಾಧ್ಯ. ಇದು ಮುಂದಿನ ಯುವ ಕವಿಗಳ ಆಶಯವಾಗಿರಬೇಕು ಎಂದು ತಿಳಿಸಿದರು.
ನಂತರ ಮಾತನಾಡಿದ ಕಸಾಪ ಅಧ್ಯಕ್ಷ ಮನು ಬಳಿಗಾರ್, ನಮ್ಮ ನಾಡಿನ ಸಾಹಿತ್ಯಕ್ಕೆ ಹಲವು ಹಳೆಯ ಇತಿಹಾಸವಿದೆ. ಆದರೆ ಇಂದು ಸುಮಾರು 2 ಸಾವಿರ ವರ್ಷಗಳ ಹಳೆಯ ದಾಖಲೆಗಳು ಸಿಗುವುದಿಲ್ಲ. ಅದರಲ್ಲಿ ನಮ್ಮ ನಾಡಿನ ಜನರು ಎಡವುತ್ತಿದ್ದಾರೆ ಎಂದು ಹೇಳಿದರು.
ಜಾಗತೀಕರಣದಲ್ಲಿ ನಮ್ಮ ದೇಶಿಯ ಭಾಷೆ, ಕಲೆ, ಸಂಸ್ಕೃತಿ ನಾಶವಾಗುತ್ತಿದೆ. ಭೂಮಿಯನ್ನು, ಕೃಷಿಯನ್ನು ಮತ್ತು ರೈತರನ್ನು ಮರೆಯಲಾಗುತ್ತಿದೆ. ರೈತ ಬೆಳೆದ ಅಕ್ಕಿ ನಮಗೆ ಬೇಕಿದೆ,ಆದರೆ ಅದೇ ರೈತ ಕೈ ಕೆಸರು ಮಾಡಿಕೊಂಡು ಮುಂದೆ ನಿಂತರೆ ಅವನನ್ನು ಕೀಳಾಗಿ ಕಾಣುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
 ಕವಿತೆಗಳು ಸಾಮಾನ್ಯ ಜನರಿಗೂ ತಲುಪಬೇಕು. ಅಲ್ಲಿ ಜನರಿಗೆ ಕವಿತೆಗಳು ನೋವಾಗು ವಂತೆ ತಡೆದು, ಇಲ್ಲಿನ ಸಾಮಾಜಿಕ ವ್ಯವಸ್ಥೆಯ ವಿರುದ್ಧ ಎಚ್ಚರಗೊಳಿಸಿ ಜಾಗೃತ ಗೊಳಿಸುವಂತಾಗಬೇಕು ಎಂದು ಹೇಳಿದರು. ರಂಗಕರ್ಮಿ ಕೆ.ವಿ. ನಾಗರಾಜ ಮೂರ್ತಿ, ಪುಸ್ತಕ ಪ್ರಾಧಿಕಾರ ಕಾರ್ಯದರ್ಶಿ ಡಾ.ಕೆ.ಮುರಳೀಧರ್, ಕೃತಿಯ ಲೇಖಕ ರಮೇಶ್ ಹಿರೇಜಂಬೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X