Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರ್‌ಟಿಇ ಪ್ರವೇಶ: ಲಭ್ಯವಿರುವ...

ಆರ್‌ಟಿಇ ಪ್ರವೇಶ: ಲಭ್ಯವಿರುವ ಸೀಟ್‌ಗಳಿಗಿಂತ ದುಪ್ಪಟ್ಟು ಅರ್ಜಿಗಳು ಸಲ್ಲಿಕೆ

ಶಿವಮೊಗ್ಗ ಜಿಲ್ಲೆಯಲ್ಲಿ ಲಭ್ಯವಿರುವುದು 2,369 ಸೀಟು, ಅರ್ಜಿ ಬಂದಿರುವುದು 4,940

ವಾರ್ತಾಭಾರತಿವಾರ್ತಾಭಾರತಿ3 April 2016 10:10 PM IST
share
ಆರ್‌ಟಿಇ ಪ್ರವೇಶ: ಲಭ್ಯವಿರುವ ಸೀಟ್‌ಗಳಿಗಿಂತ ದುಪ್ಪಟ್ಟು ಅರ್ಜಿಗಳು ಸಲ್ಲಿಕೆ

ಶಿವಮೊಗ್ಗ, ಎ.3: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಕಾಯ್ದೆಯಡಿ, ಪ್ರಸ್ತುತ ವರ್ಷದ ಪ್ರವೇಶ ಪ್ರಕ್ರಿಯೆಯನ್ನು ರಾಜ್ಯ ಸರಕಾರ ಕಳೆದ ತಿಂಗಳಿನಿಂದಲೇ ವಿದ್ಯುಕ್ತವಾಗಿ ಆರಂಭಿಸಿದೆ. ಅರ್ಜಿ ಸಲ್ಲಿಕೆಗೆ ಸರಕಾರ ನಿಗದಿಪಡಿಸಿದ್ದ ಕಾಲಾವಧಿ ಈಗಾಗಲೇ ಪೂರ್ಣಗೊಂಡಿದೆ. ರಾಜ್ಯಾದ್ಯಂತ ಲಕ್ಷಾಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿಯೂ ಕೂಡ ಲಭ್ಯವಿರುವ ಸೀಟ್‌ಗಳಿಗಿಂತ ದುಪ್ಪಟ್ಟು ಅರ್ಜಿಗಳು ಸಲ್ಲಿಕೆಯಾಗಿವೆ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸುವ ಪ್ರಕಾರ, ಪ್ರಸ್ತುತ ವರ್ಷ ಶಿವಮೊಗ್ಗ ಜಿಲ್ಲೆಯ ವಿವಿಧ ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಅಡಿ ಎಲ್.ಕೆ.ಜಿ. ಹಾಗೂ 1 ನೆ ತರಗತಿ ಪ್ರವೇಶಕ್ಕೆ 2,369 ಸೀಟ್‌ಗಳು ಲಭ್ಯವಿದೆ. ಆದರೆ ಸಲ್ಲಿಕೆಯಾಗಿರುವ ಅರ್ಜಿಗಳ ಸಂಖ್ಯೆ 4,940, ಲಭ್ಯವಿರುವ ಸೀಟ್‌ಗಳಿಗಿಂತ ಸರಿಸುಮಾರು 2,571 ಅರ್ಜಿಗಳು ಹೆಚ್ಚು ಸಲ್ಲಿಕೆಯಾಗಿವೆ. ಆರ್‌ಟಿಇ ಸೀಟ್ ಗಿಟ್ಟಿಸಿಕೊಳ್ಳಲು ಸಾಕಷ್ಟು ಪೈಪೋಟಿ ಕಂಡುಬಂದಿದೆ. ಜಿಲ್ಲೆಯ ಇತರೆ ತಾಲೂಕುಗಳಿಗೆ ಹೋಲಿಕೆ ಮಾಡಿದರೆ, ನಿರೀಕ್ಷಿಸಿದಂತೆ ಅತೀ ಹೆಚ್ಚು ಸಂಖ್ಯೆಯ ಖಾಸಗಿ ಶಾಲೆಗಳಿರುವ ಶಿವಮೊಗ್ಗ ತಾಲೂಕಿನಲ್ಲಿಯೇ ಸರಿಸುಮಾರು 2,500 ಕ್ಕೂ ಅಧಿಕ ಅರ್ಜಿಗಳು ಬಂದಿವೆ. ಭದ್ರಾವತಿ ಎರಡನೆ ಸ್ಥಾನದಲ್ಲಿದೆ. ಉಳಿದಂತೆ ಹೊಸನಗರ ತಾಲೂಕಿನಲ್ಲಿ ಅತೀ ಕಡಿಮೆ ಸಂಖ್ಯೆಯ ಅರ್ಜಿಗಳು ಸಲ್ಲಿಕೆಯಾಗಿವೆ. ಇಲ್ಲಿ ಎಲ್‌ಕೆ.ಜಿ ವಿಭಾಗದಲ್ಲಿ ಯಾವುದೇ ಅರ್ಜಿಗಳು ಸಲ್ಲಿಕೆಯಾಗಿಲ್ಲ. ತಾಲೂಕುವಾರು ವಿವರ:

ಭದ್ರಾವತಿ ತಾಲೂಕಿನಲ್ಲಿ 1,154 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ ಎಲ್‌ಕೆಜಿ ವಿಭಾಗದಲ್ಲಿ 968 ಹಾಗೂ ಒಂದನೆ ತರಗತಿಗೆ 186 ಅರ್ಜಿಗಳು ಸಲ್ಲಿಕೆಯಾಗಿವೆ. ಹೊಸನಗರದಲ್ಲಿ ಒಟ್ಟು 89 ಅರ್ಜಿಗಳು ಸಲ್ಲಿಕೆಯಾಗಿದ್ದು, ಎಲ್‌ಕೆಜಿ ವಿಭಾಗದಡಿ ಯಾವುದೇ ಅರ್ಜಿಗಳು ಬಂದಿಲ್ಲ. ಪ್ರಸ್ತುತ ಸಲ್ಲಿಕೆಯಾಗಿರುವ ಅರ್ಜಿಗಳೆಲ್ಲ ಒಂದನೆ ತರಗತಿಗೆ ಸಂಬಂಧಿಸಿದ್ದಾಗಿವೆೆ. ಸಾಗರದಲ್ಲಿ ಒಟ್ಟು 246 ಅರ್ಜಿಗಳು ಸಲ್ಲಿಕೆಯಾಗಿದ್ದು, ಎಲ್‌ಕೆಜಿಗೆ 144, ಒಂದನೇ ತರಗತಿಗೆ 102 ಅರ್ಜಿಗಳು ಸಲ್ಲಿಕೆಯಾಗಿವೆ. ಶಿಕಾರಿಪುರದಲ್ಲಿ 592 ಅರ್ಜಿಗಳು ಸಲ್ಲಿಕೆಯಾಗಿದ್ದು, ಎಲ್‌ಕೆಜಿಗೆ 82 ಹಾಗೂ ಒಂದನೆ ತರಗತಿಗೆ 51 ಅರ್ಜಿಗಳು ಸಂದಾಯವಾಗಿವೆ. ಶಿವಮೊಗ್ಗದಲ್ಲಿ ಅತೀ ಹೆಚ್ಚು 2,557 ಅರ್ಜಿಗಳು ಬಂದಿವೆ. ಎಲ್‌ಕೆಜಿ ವಿಭಾಗದಲ್ಲಿ 1,334 ಹಾಗೂ ಒಂದನೆ ತರಗತಿಗೆ 1,223 ಅರ್ಜಿಗಳು ಸಲ್ಲಿಕೆಯಾಗಿವೆ. ಸೊರಬದಲ್ಲಿ 152 ಅರ್ಜಿಗಳು ಸಲ್ಲಿಕೆಯಾಗಿದ್ದು, 86 ಅರ್ಜಿಗಳು ಎಲ್‌ಕೆಜಿಗೆ ಸಂಬಂಧಿಸಿದ್ದಾಗಿದ್ದರೆ, 66 ಅರ್ಜಿಗಳು ಒಂದನೆ ತರಗತಿಯದ್ದಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ 150 ಅರ್ಜಿಗಳು ಬಂದಿವೆ. ಎಲ್,ಕೆ.ಜಿ. ವಿಭಾಗದಲ್ಲಿ 112 ಅರ್ಜಿಗಳು ಹಾಗೂ ಒಂದನೆ ತರಗತಿಗೆ 38 ಅರ್ಜಿಗಳು ಬಂದಿವೆ. ಆನ್‌ಲೈನ್ ಲಾಟರಿ ಮೂಲಕ ಆಯೆ: ಡಿ.ಡಿ.ಪಿ.ಐ. ನಾರಾಯಣಗೌಡ

*** ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಗೌಡರವರು ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಮಾತನಾಡಿದರು. ಆನ್‌ಲೈನ್‌ನಲ್ಲಿ ಬಂದಿರುವ ಅರ್ಜಿಗಳನ್ನು ಆನ್‌ಲೈನ್ ಲಾಟರಿಯ ಮೂಲಕ ಆಯ್ಕೆ ಮಾಡಲಾಗುವುದು. ಎ.13 ರಂದು ಲಾಟರಿ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆನ್‌ಲೈನ್ ಲಾಟರಿ ಪ್ರಕ್ರಿಯೆಯಲ್ಲಿ ಆಯ್ಕೆ ಯಾದ ಮಕ್ಕಳ ಪೋಷಕರ ಮೊಬೈಲ್‌ಗೆ ಎಸ್‌ಎಂಎಸ್ ಸಂದೇಶ ಹೋಗಲಿದೆ. ಇದಾದ ನಂತರ ಪೋಷಕರು ತಮ್ಮ ಮಕ್ಕಳಿಗೆ ಸೀಟ್ ಲಭ್ಯವಾದ ಶಾಲೆಗಳಿಗೆ ತೆರಳಿ ಸೂಕ್ತ ದಾಖಲಾತಿ ಸಲ್ಲಿಸಿ, ಮಕ್ಕಳ ಪ್ರವೇಶಕ್ಕೆ ಕ್ರಮಕೈಗೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X