Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೀದಿಗೆ ಬಂದ ಬೀದಿಬದಿ ವ್ಯಾಪಾರಿಗಳ ಬದುಕು

ಬೀದಿಗೆ ಬಂದ ಬೀದಿಬದಿ ವ್ಯಾಪಾರಿಗಳ ಬದುಕು

ವಿನೋದ್ ಪುದುವಿನೋದ್ ಪುದು3 April 2016 11:41 PM IST
share
ಬೀದಿಗೆ ಬಂದ ಬೀದಿಬದಿ ವ್ಯಾಪಾರಿಗಳ ಬದುಕು


ಮಂಗಳೂರು, ಎ.3: ನಗರಗಳು ಮಾಲ್ ಸಂಸ್ಕೃತಿಗೆ ಒಗ್ಗಿಕೊಳ್ಳುತ್ತಿದ್ದರೂ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ದಿನಬಳಕೆಯ ವಸ್ತುಗಳು ಸಿಗುವುದು ಬೀದಿಬದಿ ವ್ಯಾಪಾರಿಗಳ ಬಳಿ. ಆದ್ದರಿಂದ ಜನಸಾಮಾನ್ಯರಿಗೆ ಬೀದಿಬದಿಯಲ್ಲಿ ವಸ್ತುಗಳನ್ನು ಖರೀದಿಸುವುದು ಅಗತ್ಯವಾಗಿಬಿಟ್ಟಿದೆ. ಆದರೆ ಸದಾ ಅತಂತ್ರ ಸ್ಥಿತಿಯಲ್ಲಿ ವ್ಯಾಪಾರ ನಡೆಸುವ ಬೀದಿಬದಿ ವ್ಯಾಪಾರಿಗಳಿಗೆ ಕಾನೂನಿನ ರಕ್ಷಣೆಯಿದ್ದರೂ ಅದನ್ನು ತಮ್ಮ ರಕ್ಷಣೆಗೆ ಬಳ ಸಲು ಸಾಧ್ಯವಿಲ್ಲದಂತಾಗಿದೆ.

ಇದಕ್ಕಿದ್ದಂತೆ ರಾತ್ರಿ ಬೆಳಗಾಗುವುದರೊಳಗೆ ಬೀದಿಬದಿಯ ವ್ಯಾಪಾರಿ ಗಳ ಅಂಗಡಿಗಳನ್ನು ಬುಲ್ಡೋಜರ್‌ಗಳು ಅಪ್ಪಚ್ಚಿ ಮಾಡುವ ಕಾರ್ಯ ನಿರಂತರವಾಗಿ ನಡೆಯುತ್ತಿವೆ. ಬೀದಿಬದಿ ವ್ಯಾಪಾರಿಗಳು ಸಂಘಟಿತರಾಗಿ ಹೋರಾಟ ಮಾಡಿದ ಫಲವಾಗಿ 2012ರಲ್ಲಿ ಬೀದಿಬದಿ ವ್ಯಾಪಾರಸ್ಥರ ಜೀವನೋಪಾಯ ಹಕ್ಕುಗಳ ರಕ್ಷಣಾ ಮಸೂದೆ-2012 ಲೋಕ ಸಭೆಯಲ್ಲಿ ಮಂಡನೆಯಾಗಿ ಜಾರಿ ಯಾಗಿದೆ. ದೇಶದ ಸರ್ವೋಚ್ಚ ನ್ಯಾಯಾಲಯವೂ ಕೂಡ ಜನಸಾಮಾನ್ಯರ ಬದುಕಿಗೆ ಪೂರಕವಾದ ಬೀದಿಬದಿ ವ್ಯಾಪಾರವನ್ನು ರಕ್ಷಿಸುವಲ್ಲಿ ಸ್ಥಳೀಯಾಡಳಿತ ಮುತುವರ್ಜಿ ವಹಿಸಬೇಕೆಂದು ತೀರ್ಪು ನೀಡಿದೆ. ಸರಕಾರ ಬೀದಿಬದಿ ವ್ಯಾಪಾರಿಗಳಿಗೆ ನೀಡಬೇಕಿದ್ದ ಗುರುತು ಚೀಟಿಯನ್ನು ಸರಿಯಾಗಿ ಇನ್ನೂ ವಿತರಿಸಿಲ್ಲ.

ಮಂಗಳೂರು ನಗರದಲ್ಲಿ 1,200ಕ್ಕೂ ಅಧಿಕ ಬೀದಿಬದಿ ವ್ಯಾಪಾರಿಗಳಿದ್ದಾರೆ. ಆದರೆ ಕೇವಲ 208 ಮಂದಿಗೆ ಸರಕಾರದ ಗುರುತು ಚೀಟಿಯನ್ನು ನೀಡಲಾಗಿದೆ. 325 ಮಂದಿಯ ಗುರುತುಚೀಟಿ ಮುದ್ರಣವಾಗಿ ತಯಾರಾ ಗಿದ್ದರೂ ಇನ್ನು ವಿತರಿಸಲಾಗಿಲ್ಲ. ಇದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ಅಧಿಕೃತ ದಾಖಲೆಯಿಲ್ಲದಂತಾಗಿದೆ.

ನಗರವನ್ನು ಅಂದವಾಗಿಸುವ ಹೆಸರಿನಲ್ಲಿ ಬೀದಿಬದಿ ವ್ಯಾಪಾರಸ್ಥರನ್ನು ಹತ್ತಿಕ್ಕುವ ಮೂಲಕ ನಿರಂತರ ದೌರ್ಜನ್ಯಗಳು ನಡೆಯುತ್ತಲೇ ಇವೆ. ಮಂಗಳೂರಿನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ಯೋಜನೆ ಇನ್ನೂ ಈಡೇರಿಲ್ಲ. ಟೌನ್ ವೆಂಡಿಂಗ್ ಕಮಿಟಿ ರಚನೆಯಾಗಿ ಹಲವು ಸಭೆಗಳು ನಡೆದರೂ ಪರ್ಯಾಯ ವ್ಯವಸ್ಥೆ ಮಾಡಲು ಮನಪಾ ಆಡಳಿತ ಮೀನಮೇಷ ಎಣಿಸುತ್ತಿದೆ. ಪರ್ಯಾಯ ವ್ಯವಸ್ಥೆಗೆ ಸ್ಥಳ ನಿಗದಿಯಾಗಿದ್ದರೂ ಆ ಬಗ್ಗೆ ಮನಪಾ ಆಡಳಿತಕ್ಕೆ ಇನ್ನೂ ಸ್ಪಷ್ಟತೆಯಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಮಂಗಳೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಮೂಡು ಬಿದಿರೆ, ಬಿ.ಸಿ.ರೋಡ್, ಸಿದ್ದಕಟ್ಟೆ, ಕುತ್ತಾರ್, ಉಪ್ಪಿನಂಗಡಿ, ಸುರತ್ಕಲ್ ಮುಂತಾದ ಕಡೆಗಳಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಒಟ್ಟುಗೂಡಿಸಿ ಹಕ್ಕಿಗಾಗಿ ಹೋರಾಟವನ್ನು ನಡೆಸುತ್ತಿದೆ. ಮತ್ತೊಂದೆಡೆ ನಗರವನ್ನು ಅಂದವಾಗಿಸುವ ನೆಪದಲ್ಲಿ ಬೀದಿಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇದೆ. ಒಟ್ಟಿನಲ್ಲಿ ಬೀದಿಬದಿ ವ್ಯಾಪಾರಿಗಳು ತಮ್ಮ ಅತಂತ್ರ ಬದುಕಿನ ಬಗ್ಗೆಯೆ ಚಿಂತಿತರಾಗಿದ್ದಾರೆ.

ಬೀದಿಬದಿ ವ್ಯಾಪಾರಿಗಳಿಗೆ ಶೀಘ್ರ ಪರ್ಯಾಯ ವ್ಯವಸ್ಥೆಯನ್ನು ಮಾಡಬೇಕು. ವಿಳಂಬ ಮಾಡದೆ ಗುರುತಿನ ಚೀಟಿಯನ್ನು ವಿತರಿಸಬೇಕು. ಬೀದಿಬದಿ ವ್ಯಾಪಾರಕ್ಕೆ ಪರ್ಯಾಯ ಜಾಗವನ್ನು ಗುರುತಿಸಿ ಕೊಡಲಾಗಿದೆ.ಆದರೆ ಮನಪಾಕ್ಕೆ ಬೀದಿಬದಿ ವ್ಯಾಪಾರಿಗಳಿಗೆ ವ್ಯವಸ್ಥೆ ಕಲ್ಪಿಸಬೇಕೆಂಬ ಇಚ್ಛಾಶಕ್ತಿಯೇ ಇಲ್ಲ. ಕೇಂದ್ರ ಸರಕಾರ ಬೀದಿಬದಿ ವ್ಯಾಪಾರಿಗಳನ್ನು ಬಡವರು ಎಂದು ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಬಿಪಿಎಲ್ ಕಾರ್ಡ್ ನೀಡಬೇಕು ಮತ್ತು ಮನೆ ನಿವೇಶನವನ್ನು ನೀಡಬೇಕು.
-ಸುನೀಲ್‌ಕುಮಾರ್ ಬಜಾಲ್, ಗೌರವಾಧ್ಯಕ್ಷರು, ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ

208 ಬೀದಿಬದಿ ವ್ಯಾಪಾರಿಗಳಿಗೆ ಈಗಾಗಲೇ ಗುರುತಿನ ಚೀಟಿ ನೀಡಲಾಗಿದೆ. ಉಳಿದವರಿಗೆ ಅವರ ಪ್ರದೇಶವನ್ನು ನೋಡಿ ನೀಡುತ್ತೇವೆ. ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆಗೆ ಜಾಗವನ್ನು ಗುರುತಿಸಲಾಗಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು
- ಹರಿನಾಥ್, ಮನಪಾ ಮೇಯರ್

share
ವಿನೋದ್ ಪುದು
ವಿನೋದ್ ಪುದು
Next Story
X