Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕುಲಭೂಷಣ್ ಬಂಧನದ ಜೊತೆ ಇರಾನ್‌ಗೆ ನಂಟು...

ಕುಲಭೂಷಣ್ ಬಂಧನದ ಜೊತೆ ಇರಾನ್‌ಗೆ ನಂಟು ಕಲ್ಪಿಸಬೇಡಿ

ಮಾಧ್ಯಮಗಳಿಗೆ ಪಾಕ್ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ3 April 2016 11:56 PM IST
share
ಕುಲಭೂಷಣ್ ಬಂಧನದ ಜೊತೆ ಇರಾನ್‌ಗೆ ನಂಟು ಕಲ್ಪಿಸಬೇಡಿ

ಇಸ್ಲಾಮಾಬಾದ್,ಎ.3: ಭಾರತೀಯ ಗೂಢಚಾರನೆಂದು ಆರೋಪಿಸಲಾದ, ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಯಾದವ್ ಬಂಧನ ಪ್ರಕರಣದ ಜೊತೆ ಇರಾನ್‌ಗೆ ನಂಟು ಕಲ್ಪಿಸಬಾರದೆಂದು ಪಾಕಿಸ್ತಾನ ಸರಕಾರ ಇಂದು ತನ್ನ ದೇಶದ ಮಾಧ್ಯಮಗಳಿಗೆ ತಿಳಿಸಿದೆ. ಇಂತಹ ವರದಿಗಳಿಂದ ಪಾಕ್ ಜೊತೆಗಿನ ದ್ವಿಪಕ್ಷೀಯ ಸಂಬಂಧಗಳ ಮೇಲೆ ನಕಾರಾತ್ಮಕ ಪರಿಣಾಮವುಂಟಾಗುವ ಸಾಧ್ಯತೆಯಿದೆಯೆಂದು ಇರಾನ್ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಪಾಕ್ ಈ ಹೇಳಿಕೆ ನೀಡಿದೆ.

 ‘‘ಭಾರತೀಯ ಬೇಹುಗಾರಿಕಾ ಜಾಲದ ಚಟುವಟಿಕೆಗಳ ಜೊತೆಗೆ ಇರಾನ್‌ಗೆ ಯಾವುದೇ ರೀತಿಯ ಸಂಬಂಧವಿಲ್ಲ. ಪಾಕಿಸ್ತಾನ ಹಾಗೂ ಇರಾನ್ ಹಲವು ದಶಕಗಳಿಂದ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಬಾಂಧವ್ಯಗಳನ್ನು ಹೊಂದಿವೆ ಹಾಗೂ ನಮ್ಮ ಸ್ನೇಹಕ್ಕೆ ಅಡ್ಡಬರಲು ಯಾರಿಗೂ ಸಾಧ್ಯವಿಲ್ಲ’ ಎಂದು ಪಾಕಿಸ್ತಾನದ ಗೃಹ ಸಚಿವ ನಿಸಾರ್ ಅಲಿ ಖಾನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಾಕಿಸ್ತಾನ-ಇರಾನ್‌ನ ‘ಸೋದರ’ ಬಾಂಧವ್ಯಗಳ ಬಗ್ಗೆ ವರದಿ ಮಾಡುವಾಗ ಜಾಗರೂಕತೆ ವಹಿಸಬೇಕೆಂದು ನಿಸಾರ್ ಪಾಕ್ ಮಾಧ್ಯಮಗಳಿಗೆ ಕಿವಿಮಾತು ಹೇಳಿದ್ದಾರೆ.

 ‘‘ಇರಾನ್ ಅಧ್ಯಕ್ಷ ಹಸನ್ ರೂಹಾನಿ ಅವರ ಇತ್ತೀಚಿನ ಪಾಕ್ ಭೇಟಿಯು ಫಲಪ್ರದವಾಗಿತ್ತು ಆದರೆ ಇರಾನ್ ಪಾಕ್ ವಿರುದ್ಧ ಕೆಲವು ನಿರ್ದಿಷ್ಟ ಚಟುವಟಿಕೆಗಳಲ್ಲಿ ತೊಡಗಿದೆಯೆಂಬ ಭಾವನೆಯನ್ನು ಮೂಡಿಸುವ ಪ್ರಯತ್ನಗಳು ನಡೆಯುತ್ತಿವೆ’’ ಎಂದವರು ವಿಷಾದಿಸಿದರು. ಇರಾನ್ ಅಧ್ಯಕ್ಷರ ಪಾಕ್ ಭೇಟಿ ಸಕಾರಾತ್ಮಕವಾಗಿದ್ದ ಹೊರತಾಗಿಯೂ ಮಾಧ್ಯಮಗಳ ಕೆಲವು ನಿರ್ದಿಷ್ಟ ವರ್ಗವು ಇರಾನ್‌ನ್ನು ನಕಾರಾತ್ಮಕವಾಗಿ ಬಿಂಬಿಸುತ್ತಿರುವ ಬಗ್ಗೆ ಇರಾನಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆಂದು ನಿಸಾರ್ ಅಲಿ ಖಾನ್ ಹೇಳಿದರು.

ಪಾಕ್ ಹಾಗೂ ಇರಾನ್ ನಡುವಿನ ಐತಿಹಾಸಿಕ ಬಾಂಧವ್ಯವನ್ನು ಕೆಲವು ಸ್ಥಾಪಿತ ಹಿತಾಸಕ್ತಿಗಳು ಹಾಳುಗೆಡವಲು ಯತ್ನಿಸುತ್ತಿವೆಯೆಂದು ಅವರು ಆರೋಪಿಸಿದರು.

ಇರಾನ್‌ನಿಂದ ಬಲೂಚಿಸ್ತಾನವನ್ನು ಪ್ರವೇಶಿಸಿದ ಕುಲಭೂಷಣ್ ಯಾದವ್ ಬಗ್ಗೆ ಟೆಹರಾನ್‌ಗೆ ಅರಿವಿದ್ದಿರಬಹುದೆಂದು ಪಾಕ್‌ನ ಕೆಲವು ಮಾಧ್ಯಮ ವರದಿಗೆ ಇರಾನ್ ರಾಯಭಾರಿ ಕಚೇರಿಯು ತನ್ನ ಅಸಮಾಧಾನ ವ್ಯಕ್ತಪಡಿಸಿತ್ತು. ಇಂತಹ ವರದಿಗಳು ಉಭಯದೇಶಗಳ ಬಾಂಧವ್ಯಗಳ ಮೇಲೆ ನಕಾರಾತ್ಮಕ ಪರಿಣಾವುಂಟು ಮಾಡುವುದೆಂದು ಅದು ಎಚ್ಚರಿಕೆ ನೀಡಿತ್ತು.

ಇರಾನ್‌ನಲ್ಲಿ ಸಣ್ಣದೊಂದು ನೌಕಾ ಸಂಸ್ಥೆಯನ್ನು ನಡೆಸುತ್ತಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಯಾದವ್‌ರನ್ನು ಕಳೆದ ತಿಂಗಳು ಬಲೂಚಿಸ್ತಾನದಲ್ಲಿ ಬಂಧಿಸಲಾಗಿತ್ತು. ಆತ ಭಾರತದ ಬೇಹುಗಾರಿಕಾ ಸಂಸ್ಥೆ ರಾ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು ಬಲೂಚಿಸ್ತಾನ ಹಾಗೂ ಲಾಹೋರ್‌ನಲ್ಲಿ ವಿಧ್ವಂಸಕ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದರೆಂದು ಪಾಕ್ ಭದ್ರತಾ ಸಂಸ್ಥೆಗಳ ಆಪಾದಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X