ಕಂರ್ಬಿಸ್ಥಾನ ಬಳಿ ಯುವಕನಿಗೆ ಚೂರಿ ಇರಿತ
ಮಂಗಳೂರು, ಎ. 3: ಇಲ್ಲಿನ ಜಪ್ಪು ಕಂರ್ಬಿಸ್ಥಾನದ ಬಳಿ ಬೈಕ್ನಲ್ಲಿ ಬಂದ ಮೂರು ಮಂದಿಯ ತಂಡವೊಂದು ಯುವಕನೊಬ್ಬನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಇಂದು ರಾತ್ರಿ ಸಂಭವಿಸಿದೆ.
ಚೂರಿ ಇರಿತಕ್ಕೊಳಗಾದ ಯುವಕನನ್ನು ಆಶಿತ್ ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತ ಅಭಿಷೇಕ್ ಎಂಬವರೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭ ಆತನನ್ನು ಮತ್ತೊಂದು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ಮೂವರ ತಂಡ ಆಶಿತ್ನ ಬೈಕ್ಗೆ ಢಿಕ್ಕಿ ಹೊಡೆದು, ಚೂರಿಯಿಂದ ಇರಿದು ಪರಾರಿಯಾಗಿದೆ. ಗಾಯಾಳು ಆಶಿತ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story