Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. "ನೀವು 11 ರಾಜ್ಯಗಳಿಗೆ ದುಡ್ಡೇ...

"ನೀವು 11 ರಾಜ್ಯಗಳಿಗೆ ದುಡ್ಡೇ ಕೊಟ್ಟಿಲ್ಲ ! ಅವರೇನು ಭಿಕ್ಷೆ ಬೇಡಬೇಕಾ'' ?

ಬಿಸಿಸಿಐಗೆ ಸುಪ್ರೀಂ ಕೋರ್ಟ್ ತಪರಾಕಿ

ವಾರ್ತಾಭಾರತಿವಾರ್ತಾಭಾರತಿ5 April 2016 7:07 PM IST
share
ನೀವು  11 ರಾಜ್ಯಗಳಿಗೆ ದುಡ್ಡೇ ಕೊಟ್ಟಿಲ್ಲ ! ಅವರೇನು ಭಿಕ್ಷೆ ಬೇಡಬೇಕಾ ?

ಹೊಸದಿಲ್ಲಿ, ಎ.5: ಕೆಲವು ರಾಜ್ಯಗಳ ಕ್ರಿಕೆಟ್ ಸಂಸ್ಥೆಗಳಿಗೆ ಹಣ ನೀಡಿದ್ದೀರಿ.ಹನ್ನೊಂದು ರಾಜ್ಯಗಳಿಗೆ ದುಡ್ಡೇ ಕೊಟ್ಟಿಲ್ಲ. ಅವರೇನು ಭಿಕ್ಷೆ ಬೇಡಬೇಕಾ ? ಎಂದು ಭಾರತೀಯ ಕ್ರಿಕೆಟ್ ಮಂಡಳಿಯನ್ನು ಇಂದು ತೀವ್ರ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ ಹೀಗಾದರೆ ನಿಮ್ಮಿಂದ ದೇಶದಲ್ಲಿ ಕ್ರಿಕೆಟ್‌ನ ಅಭಿವೃದ್ಧಿ ಅಸಾಧ್ಯ ಎಂದು ಅಭಿಪ್ರಾಯಪಟ್ಟಿದೆ.
   ನಿವೃತ್ತ ನ್ಯಾಯಮೂರ್ತಿ ಲೋಧಾ ನೇತೃತ್ವದ ಸಮಿತಿಯು 2013ರ ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣ ಹಿನ್ನೆಲೆಯಲ್ಲಿ ಕ್ರಿಕೆಟ್‌ನ ಸುಧಾರಣೆಗೆ ಸಲ್ಲಿಸಿರುವ ಶಿಫಾರಸುಗಳಿಗೆ ಸಂಬಂಧಿಸಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ‘‘ನೀವು(ಬಿಸಿಸಿಐನ ಸದಸ್ಯರು ) ನಿಮಗೆ ಲಾಭವಾಗುವ ವ್ಯವಸ್ಥೆಯನ್ನು ರೂಪಿಸಿಕೊಂಡಿರುವಿರಿ’’ ಎಂದು ಅಭಿಪ್ರಾಯಪಟ್ಟಿದೆ.
 ಬಿಸಿಸಿಐಗೆ ಸಂಯೋಜನೆಗೊಂಡಿರುವ ಕ್ರಿಕೆಟ್ ಸಂಸ್ಥೆಗಳಿಗೆ ಅನುದಾನ ಹಂಚಿಕೆಯ ಬಗ್ಗೆ ಭಾರತೀಯ ಕ್ರಿಕೆಟ್ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಮ್ ಕೋರ್ಟ್ ‘‘ ಬಿಸಿಸಿಐ ವಿವಿಧ ರಾಜ್ಯಗಳಲ್ಲಿ ಕ್ರಿಕೆಟ್‌ನ ಮೂಲಭೂತ ಆವಶ್ಯಕತೆಗಳಿಗೆ ವರ್ಷಕ್ಕೆ 480 ಕೋಟಿ ರೂ. ಪಾವತಿಸಿದೆ. ಕಳೆದ 20 ವರ್ಷಗಳ ಅವಧಿಯಲ್ಲಿ ಸುಮಾರು 2,000 ಕೋಟಿ ರೂ. ಹಣ ನೀಡಲಾಗಿದೆ. ನೀವು ನೀಡಿರುವ ಹಣ ಸದುಪಯೋಗವಾಗಿರುವ ಬಗ್ಗೆ ನಿಮ್ಮಲ್ಲಿ ಸರಿಯಾದ ಲೆಕ್ಕೆ ಇದೆಯೇ ಎಂದು ಪ್ರಶ್ನಿಸಿದೆ.
ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ನೇತೃತ್ವದ ನ್ಯಾಯಪೀಠ ‘‘ ಗುಜರಾತ್ ರಾಜ್ಯಕ್ಕೆ 66 ಕೋಟಿ ರೂ. ಹಣ ನೀಡಲಾಗಿದೆ. ಈಶಾನ್ಯ ರಾಜ್ಯಗಳಿಗೆ ಬರೇ 50 ಲಕ್ಷ ರೂಪಾಯಿ ಯಾಕೆ ನೀಡಿದ್ದೀರಿ ?’’ ಎಂದು ಮಂಡಳಿಯನ್ನು ಪ್ರಶ್ನಿಸಿತು
   ಬಿಸಿಸಿಐ ಹಣದ ಹಂಚಿಕೆಯ ಬಗ್ಗೆ ಲೆಕ್ಕಪರಿಶೋಧನೆಗೊಳಪಟ್ಟ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿತ್ತು. ಈ ವರದಿಯಲ್ಲಿ 29 ರಾಜ್ಯಗಳ ಪೈಕಿ 11 ರಾಜ್ಯಗಳಿಗೆ ಕಳೆದ ಐದು ವರ್ಷಗಳ ಅವಧಿಯಲ್ಲಿ ನಯಾಪೈಸೆ ಅನುದಾನ ನೀಡದಿರುವುದನ್ನು ಗುರುತಿಸಿದ ಸುಪ್ರೀಂ ಕೋರ್ಟ್ ಬಿಸಿಸಿಐನ ಹಣದ ಹಂಚಿಕೆಯ ನೀತಿಯ ಬಗ್ಗೆ ಗರಂ ಆಗಿದೆ. ‘‘ಕಳೆದ ಆರು ವರ್ಷಗಳಲ್ಲಿ ಬಿಹಾರಕ್ಕೆ ಏನನ್ನೂ ನೀಡಿಲ್ಲ. ನೀವು ಹಣ ನೀಡದಿದ್ದರೆ ಕಡೆಗಣಿಸಲ್ಪಟ್ಟ ರಾಜ್ಯಗಳಲ್ಲಿ ಕ್ರಿಕೆಟ್‌ನ ಅಭಿವೃದ್ಧಿ ಹೇಗೆ ಸಾಧ್ಯ ? ನಿಮ್ಮಿಂದ ದೇಶದ ಕ್ರೀಡಾ ಅಭಿವೃದ್ಧಿಗೆ ಕೊಡುಗೆ ಏನೂ ಇಲ್ಲ ’’ ಎಂದು ಬಿಸಿಸಿಐನ ಕಾರ್ಯವೈಖರಿಯ ಬಗ್ಗೆ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ನೇತೃತ್ವದ ನ್ಯಾಯಪೀಠದ ನ್ಯಾಯಮೂರ್ತಿ ಎಫ್.ಎಂ.ಐ. ಕಲೀಫುಲ್ಲಾ ಅವರು ಬಿಸಿಸಿಐ ನಾಗಲ್ಯಾಂಡ್, ಮಣಿಪುರ ಮತ್ತು ತ್ರಿಪುರಾ ರಾಜ್ಯಗಳಿಗೆ ಕಳೆದ ಐದು ವರ್ಷಗಳಲ್ಲಿ ನೀಡಲಾದ ಅನುದಾನದ ಬಗ್ಗೆ ಬಿಸಿಸಿಐನಿಂದ ವಿವರ ಬಯಸಿದರು.
ಸುಪ್ರೀಂ ಕೋರ್ಟ್‌ನ ಸಂದೇಹಗಳಿಗೆ ಸ್ಪಷ್ಟನೆ ನೀಡಿರುವ ಬಿಸಿಸಿಐ‘‘ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕ್ರಿಕೆಟ್‌ನ ಅಭಿವೃದ್ಧಿ ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಬಿಸಿಸಿಐನ ಸದಸ್ಯತ್ವ ಪಡೆದಿರುವ ಎಲ್ಲ ರಾಜ್ಯಗಳಿಗೂ ಬಿಸಿಸಿಐ ಅನುದಾನ ನೀಡುತ್ತಿದೆ. ಅರುಣಾಚಲ ಪ್ರದೇಶ ಮತ್ತು ಬಿಹಾರದ ಕ್ರಿಕೆಟ್ ಸಂಸ್ಥೆಗಳು ಲೆಕ್ಕಪರಿಶೋಧನೆಗೊಳಪಟ್ಟ ಲೆಕ್ಕಪತ್ರವನ್ನು ನೀಡಿಲ್ಲ. ಈ ಕಾರಣದಿಂದಾಗಿ 2010ರಿಂದ ಬಿಸಿಸಿಐ ಆ ಸಂಸ್ಥೆಗಳಿಗೆ ಅನುದಾನ ನೀಡಿಲ್ಲ’’ ಎಂದು ಹೇಳಿಕೆ ನೀಡಿದೆ.
ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X