ಉಳ್ಳಾಲ: ದೇರಳಕಟ್ಟೆ, ನಿಟ್ಟೆ ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ, ‘ಸಾಂಸ್ಕೃತಿಕ ಹಬ್ಬ’ ಕಾರ್ಯಕ್ರಮ

ಉಳ್ಳಾಲ: ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ ಇದರ ಮೊದಲನೇಯ ವರ್ಷದ ‘ಸಾಂಸ್ಕೃತಿಕ ಹಬ್ಬ’ ಕಾರ್ಯಕ್ರಮ ದೇರಳಕಟ್ಟೆ ನಿಟ್ಟೆ ವಿಶ್ವವಿದ್ಯಾಲಯ ಆಡಿಟೋರಿಯಂನಲ್ಲಿ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎ.ಬಿ.ಶೆಟ್ಟಿ ದಂತವೈದ್ಯಕೀಯ ಕಾಲೇಜಿನ ಡೀನ್ ಪ್ರೊ. ಡಾ.ಕೃಷ್ಣ ನಾಯಕ್ ಮಾತನಾಡಿ ಪ್ರತಿಯೊಂದು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಹೆಚ್ಚಿನ ಒತ್ತು ನೀಡಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಬಹುದು ಎಂದರು. ಕಾರ್ಯಕ್ರಮದಲ್ಲಿ ಮ್ಯಾಡ್-ಜಾಹೀರಾತು, ಸೃಜನಾತ್ಮಕ ಬರವಣಿಗೆ, ಮುಖಕ್ಕೆ ಬಣ್ಣ ಹಚ್ಚುವಿಕೆ ಮತ್ತು ಫ್ಯಾಷನ್ ಷೋ ಕಾರ್ಯಕ್ರಮಗಳು ನಡೆಯಿತು.
Next Story





