Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಝರ್‌ಬೈಜನ್-ಆರ್ಮೇನಿಯ ಸಂಘರ್ಷ,...

ಅಝರ್‌ಬೈಜನ್-ಆರ್ಮೇನಿಯ ಸಂಘರ್ಷ, ನಗೊರ್ನೊ-ಕರಬಾಖ್: ಕನಿಷ್ಠ 13 ಸಾವು

ವಾರ್ತಾಭಾರತಿವಾರ್ತಾಭಾರತಿ5 April 2016 7:57 PM IST
share
ಅಝರ್‌ಬೈಜನ್-ಆರ್ಮೇನಿಯ ಸಂಘರ್ಷ, ನಗೊರ್ನೊ-ಕರಬಾಖ್: ಕನಿಷ್ಠ 13 ಸಾವು

ಸ್ಟೆಪನಕರ್ಟ್ (ಅಝರ್‌ಬೈಜನ್), ಎ. 5: ನಗೊರ್ನೊ-ಕರಬಾಖ್ ಭೂಪ್ರದೇಶಕ್ಕೆ ಸಂಬಂಧಿಸಿ ಅಝರ್‌ಬೈಜಾನ್ ಮತ್ತು ಆರ್ಮೆನಿಯ ಸೈನಿಕರ ನಡುವೆ ಸೋಮವಾರ ನಡೆದ ಸಂಘರ್ಷದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ.

ಸಂಘರ್ಷವನ್ನು ನಿಲ್ಲಿಸುವಂತೆ ರಶ್ಯ ಮತ್ತು ಪಾಶ್ಚಿಮಾತ್ಯ ದೇಶಗಳು ಯುದ್ಧನಿರತ ದೇಶಗಳಿಗೆ ಒತ್ತಡ ಹಾಕುತ್ತಿವೆ. ಆದರೆ, ಆರ್ಮೇನಿಯ ನಿಯಂತ್ರಣದ ಈ ಭೂಪ್ರದೇಶ (ನಗೊರ್ನೊ-ಕರಬಾಖ್) ಒಂದಲ್ಲ ಒಂದು ದಿನ ಅಝರ್‌ಬೈಜಾನ್‌ನ ನಿಯಂತ್ರಣಕ್ಕೆ ಬರುತ್ತದೆ ಎಂದು ಅಝರ್‌ಬೈಜಾನ್‌ನ ಮಿತ್ರದೇಶ ಟರ್ಕಿಯ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ದೊಗಾನ್ ಹೇಳಿದ್ದಾರೆ.

ಶುಕ್ರವಾರ ರಾತ್ರಿ ಸಂಘರ್ಷ ತಲೆದೋರಿದಂದಿನಿಂದ ಮೃತಪಟ್ಟವರ ಸಂಖ್ಯೆ 46ಕ್ಕೆ ಏರಿದೆ. ಆರ್ಮೇನಿಯದ ಐವರು ‘ಸ್ವಯಂಸೇವಾ’ ಹೋರಾಟಗಾರರು ಪ್ರಯಾಣಿಸುತ್ತಿದ್ದ ಬಸ್ಸೊಂದರ ಮೇಲೆ ದಾಳಿ ನಡೆದಾಗ ಅವರು ಮೃತಪಟ್ಟಿದ್ದಾರೆ ಎಂದು ಆರ್ಮೇನಿಯದ ರಕ್ಷಣಾ ಸಚಿವಾಲಯ ಹೇಳಿದೆ.

ಅದಕ್ಕೂ ಮೊದಲು, ಭೀಕರ ಶೆಲ್ ದಾಳಿಯಲ್ಲಿ ಮೂವರು ನಾಗರಿಕರು ಮತ್ತು ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ ಎಂದು ಕರಬಾಖ್‌ನಲ್ಲಿರುವ ಆರ್ಮೇನಿಯ ಬೆಂಬಲಿತ ಪ್ರತ್ಯೇಕವಾದಿ ಸರಕಾರದ ಅಧಿಕಾರಿಗಳು ಹೇಳಿದರು.

ಸೋಮವಾರ ರಾತ್ರಿ ಆರ್ಮೇನಿಯದ ಪಡೆಗಳು ನಡೆಸಿದ ಮೋರ್ಟರ್ ಮತ್ತು ಗ್ರೆನೇಡ್ ದಾಳಿಗಳಲ್ಲಿ ತನ್ನ ಮೂವರು ಸೈನಿಕರು ಮೃತಪಟ್ಟಿದ್ದಾರೆ ಎಂದು ಅಝರ್‌ಬೈಜನ್ ಹೇಳಿದೆ.

ಅಝರ್‌ಬೈಜನ್‌ನ ಭಾಗ ಎಂಬುದಾಗಿ ಅಂತಾರಾಷ್ಟ್ರೀಯವಾಗಿ ಗುರುತಿಸಲಾದ ಕರಬಾಖ್‌ನ ಕೆಲವು ಆಯಕಟ್ಟಿನ ಸ್ಥಳಗಳನ್ನು ತಾನು ವಶಪಡಿಸಿಕೊಂಡಿರುವುದಾಗಿ ಅಝರ್‌ಬೈಜನ್ ಹೇಳಿಕೊಂಡಿದೆ.

ಯಾಕೆ ಸಂಘರ್ಷ?

  ನಗೊರ್ನೊ-ಕರಬಾಖ್ ಪ್ರದೇಶವು ಮೊದಲು ಅಝರ್‌ಬೈಜನ್ ದೇಶಕ್ಕೆ ಸೇರಿತ್ತು. ಇಲ್ಲಿ ಆರ್ಮೇನಿಯ ಜನಾಂಗೀಯರು ವಾಸಿಸುತ್ತಿದ್ದಾರೆ. ಆರ್ಮೇನಿಯದ ಬೆಂಬಲದೊಂದಿಗೆ ನಗೊರ್ನೊ-ಕರಬಾಖ್ ಪ್ರದೇಶದಲ್ಲಿದ್ದ ಆರ್ಮೇನಿಯ ಜನಾಂಗೀಯರು ತಮ್ಮ ಪ್ರದೇಶವನ್ನು ಸ್ವತಂತ್ರ ದೇಶ ಎಂಬುದಾಗಿ ಘೋಷಿಸಿಕೊಂಡರು. ಅಂದಿನಿಂದ ಇಲ್ಲಿ ಸಂಘರ್ಷ ನಡೆಯುತ್ತಾ ಬಂದಿದೆ.

ಅಲ್ಲಿ 1988ರಲ್ಲಿ ಜನಾಂಗೀಯ ಸಂಘರ್ಷ ಆರಂಭವಾಯಿತು. 1990ರ ದಶಕದ ಆರಂಭದಲ್ಲಿ ತಾರಕಕ್ಕೇರಿತು. 1994ರಲ್ಲಿ ಅಧಿಕೃತ ಯುದ್ಧವಿರಾಮ ಏರ್ಪಟ್ಟರೂ, ಸಂಘರ್ಷ ನಿರಂತರವಾಗಿ ಮುಂದುವರಿಯುತ್ತಾ ಬಂದಿದೆ.

ಆರ್ಮೇನಿಯ ಮತ್ತು ಅಝರ್‌ಬೈಜನ್ ಎರಡೂ ದೇಶಗಳು ಮಾಜಿ ಸೋವಿಯತ್ ಒಕ್ಕೂಟದ ದೇಶಗಳಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X