Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ: ಆಸಕ್ತಿಯ ಹಸಿವು ಕಲಾ...

ಕೊಣಾಜೆ: ಆಸಕ್ತಿಯ ಹಸಿವು ಕಲಾ ಸಾಮರ್ಥ್ಯವನ್ನು ರೂಪಿಸುತ್ತದೆ: ಜಬ್ಬಾರ್ ಸಮೋ

ಯಕ್ಷಮಂಗಳ ಪ್ರಚಾರೋಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ5 April 2016 8:54 PM IST
share
ಕೊಣಾಜೆ: ಆಸಕ್ತಿಯ ಹಸಿವು ಕಲಾ ಸಾಮರ್ಥ್ಯವನ್ನು ರೂಪಿಸುತ್ತದೆ: ಜಬ್ಬಾರ್ ಸಮೋ

 ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಶಾರದಾ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ‘ತಾಳಮದ್ದಳೆ-ಅರ್ಥಗಾರಿಕೆ’ ಎಂಬ ವಿಷಯದಲ್ಲಿ ಜಬ್ಬಾರ್ ಸಮೋ ಉಪನ್ಯಾಸ ನೀಡಿ ಮಾತನಾಡಿದರು.

ಕೊಣಾಜೆ: ಯಾವುದೇ ಕ್ಷೇತ್ರದಲ್ಲಿ ಪ್ರಾಥಮಿಕವಾಗಿ ಆಸಕ್ತಿಯ ಹಸಿವು ಕಲಾ ಸಾಮರ್ಥ್ಯವನ್ನು ರೂಪಿಸುತ್ತದೆ. ಹಾಗೆಯೇ ತಾಳಮದ್ದಳೆ ಅರ್ಥಧಾರಿಯಾಗಲು ಕೆಲವೊಂದು ಪ್ರಾಥಮಿಕ ಅರ್ಹತೆಯನ್ನು ಹೊಂದಬೇಕಾಗುತ್ತದೆ. ಪ್ರಮುಖವಾಗಿ ಈ ಕ್ಷೇತ್ರದಲ್ಲಿ ಆಸಕ್ತಿ, ಪ್ರಸಂಗಗಳ ಅಧ್ಯಯನ, ಪುರಾಣ ಜ್ಞಾನ ಹೀಗೆ ತನ್ನ ಅರಿವಿನ ಪರಿಧಿಯನ್ನು ವಿಸ್ತರಿಸಿಕೊಂಡು ಮುನ್ನಡೆಯಬೇಕಿದೆ. ಆಸಕ್ತಿ ಮತ್ತು ಅರಿವು ಈ ಕ್ಷೇತ್ರದಲ್ಲಿ ತನ್ನ ಸಾಮರ್ಥ್ಯವನ್ನು ರೂಪಿಸುತ್ತದೆ ಎಂದು ಪ್ರಸಿದ್ದ ತಾಳಮದ್ದಳೆ ಅರ್ಥಧಾರಿ ಜಬ್ಬಾರ್ ಸಮೋ ಅವರು ಅಭಿಪ್ರಾಯ ಪಟ್ಟರು.
   
    ಅವರು ಮಂಗಳವಾರ ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಮಂಗಳೂರು ಕೊಡಿಯಾಲಬೈಲ್‌ನ ಶಾರದಾ ಪದವಿ ಕಾಲೇಜಿನಲ್ಲಿ ಯಕ್ಷಮಂಗಳ ಪ್ರಚಾರೋಪನ್ಯಾಸ ಮಾಲಿಕೆಯ ‘ತಾಳಮದ್ದಳೆ-ಅರ್ಥಗಾರಿಕೆ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡುತ್ತಾ ಮಾತನಾಡಿದರು. ಯಕ್ಷಗಾನದಲ್ಲಿ ಗುರು ಶಿಷ್ಯ ಪರಂಪರೆ ಇದ್ದ ಹಾಗೆ ಯಕ್ಷಗಾನದ ತಾಳಮದ್ದಳೆ ಕ್ಷೇತ್ರದಲ್ಲಿ ಗುರುಪರಂಪರೆಯು ಬೆಳೆದು ಬಾರದ ಹಿನ್ನೆಲೆಯಲ್ಲಿ ಈ ಕೇತ್ರದಲ್ಲಿ ಹೊಸಮುಖಗಳು ಅಥವಾ ಯುವಅರ್ಥಧಾರಿಗಳು ಮೂಡಿಬರುತ್ತಿಲ್ಲ ಎಂದು ಹೇಳಿದರು.
ಇಂದು ಯಕ್ಷಗಾನ, ತಾಳಮದ್ದಳೆ ಕ್ಷೇತ್ರ ಸೇರಿದಂತೆ ಪ್ರತಿಭೆಗಳು ಕೂಡಾ ಮಾರುಕಟ್ಟೆಯ ಸರಕುಗಳಾಗುತ್ತಿರುವುದು ದುರಂತವಾಗಿದೆ. ಈ ದೃಷ್ಠಿಕೋನವು ಬದಲಾಗುವುದರೊಂದಿಗೆ ಯುವ ಸಮುದಾಯ ಆಸಕ್ತಿಯೊಂದಿಗೆ ಯಕ್ಷಗಾನ ಮತ್ತು ತಾಳಮದ್ದಳೆ ಕ್ಷೇತ್ರದತ್ತ ಒಲವು ತೋರಿಸಿ ಕಲೆಯ ಶ್ರೀಮಂತಿಗೆ ಸಾಕ್ಷಿಯಾಗಬೇಕಿದೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾರದಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕಬ್ಬಿನಾಳೆ ಬಾಲಕೃಷ್ಣ ಭಾರದ್ವಾಜ್, ಅವರು ಇತಿಹಾಸಲ್ಲಿ 13ನೇ ಶತಮಾನದಲ್ಲಿಯೇ ತಾಳಮದ್ದಳೆಯ ಸೇವೆಯು ನಡೆದಿರುವ ಬಗ್ಗೆ ಉಲ್ಲೇಖವಿದೆ. ಯಕ್ಷಗಾನ ಕೇತ್ರದಲ್ಲಿ ತಾಳಮದ್ದಳೆಯ ಪಾತ್ರವೂ ಪ್ರಮುಖವಾದುದು ಎಂದು ಹೇಳಿದರು.

ಮಂಗಳೂರು ವಿವಿಯ ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಧನಂಜಯ ಕುಂಬ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾರದಾ ಕಾಲೇಜಿನ ಸಲಹಾ ಸಮಿತಿ ಸದಸ್ಯರಾದ ಡಾ.ಲೀಲಾ ಉಪಾಧ್ಯಾಯ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಪತಿ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯಕ್ಷಗಾನ ಅಧ್ಯಯನ ಕೇಂದ್ರದ ಸತೀಶ್ ಕೊಣಾಜೆ, ಶಾರದಾ ಕಾಲೇಜಿನ ಉಪಪ್ರಾಂಶುಪಾಲ ಮಾಧವ ಕೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಸುಚಿತ್ರಾ ಜಿ.ಎಸ್,ಸ್ವಾಗತಿಸಿ, ರಕ್ಷಿತ್ ಕುಮಾರ್ ವಂದಿಸಿದರು. ವರ್ಷಾ ವಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X