ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ
ಕಿಡ್ನಿ, ಲಿವರ್ ಬೆಂಗಳೂರು ಆಸ್ಪತ್ರೆಗೆ ರವಾನೆ
ಮಂಗಳೂರು, ಎ. 5: ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಟ್ಟಡದ ಐದನೆ ಮಹಡಿಯಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನೋರ್ವನ ಅಂಗಾಂಗವನ್ನು ದಾನ ಮಾಡಲಾಗಿದೆ.
ಕೇರಳ ಕಣ್ಣೂರಿನ ಪಯ್ಯನೂರ್ ಸಮೀಪದ ವಡಶೇರಿ ಗ್ರಾಮದ ನಿವಾಸಿ ಬಾಬು ಕೆ.ವಿ. (34) ಎಂಬವರು ಎ.2ರಂದು ಪಯ್ಯನೂರ್ನ ಚೀಮೇಣಿ ಬಳಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಎ.6ರಂದು ಬಾಬುರವರ ಮೆದುಳು ನಿಷ್ಕ್ರಿಯಗೊಂಡಿರುವ ಬಗ್ಗೆ ಆಸ್ಪತ್ರೆಯ ವೈದ್ಯರು ಕುಟುಂಬಸ್ಥರಿಗೆ ಮಾಹಿತಿ ನೀಡಿ ಅಂಗಾಂಗ ದಾನದ ಅರಿವು ಮೂಡಿಸಿದ್ದರು.ಅದರಂತೆ ಕುಟುಂಬಸ್ಥರು ಬಾಬುರವರ ಅಂಗಾಂಗ ದಾನ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು. ಹಾಗೇ ಬಾಬುರವರ ಕಿಡ್ನಿ ಮತ್ತು ಲಿವರ್ನ್ನು ಆಸ್ಪತ್ರೆಗೆ ದಾನ ಮಾಡಲಾಗಿದೆ. ರಾತ್ರಿ ಸುಮಾರು 10:30ಕ್ಕೆ ಲಿವರ್ನ್ನು ವಿಮಾನದ ಮೂಲಕ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ರವಾನಿಸಿರುವುದಾಗಿ ಎ.ಜೆ.ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.