ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ
ಮಂಗಳೂರು, ಎ.5: ನಗರದ ಸ್ವಾಮಿ ಸದಾನಂದ ಸರಸ್ವತಿ ಆಂಗ್ಲಮಾಧ್ಯಮ ಪ್ರೌಢಶಾಲೆ ಮತ್ತು ಭಾರತಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆಯುತ್ತಿರುವ ಬೇಸಿಗೆ ರಜಾ ಶಿಬಿರದ ಅಂಗವಾಗಿ ನಡೆಯುತ್ತಿರುವ ಬೇಸಿಗೆ ರಜಾ ಶಿಬಿರದ ಅಂಗವಾಗಿ ಗೃಹ ರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ವತಿಯಿಂದ ಬೆಂಕಿ ಅಪಘಾತಕ್ಕೀಡಾದ ಸಂದರ್ಭ ಎದುರಿಸಬೇಕಾದ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆಯು ಮಂಗಳವಾರ ಕಾಲೇಜಿನಲ್ಲಿ ನಡೆಯಿತು.
ಅಗ್ನಿಶಾಮಕ ದಳದ ಮುಖ್ಯಾಧಿಕಾರಿ ಶೇಖರ್ ಬಿ. ಮತ್ತು ಅಗ್ನಿಶಾಮಕ ದಳದ ಕಚೇರಿಯ ಅಧಿಕಾರಿ ಗಂಗಾನಾಯ್ಕಿ ಜೆ. ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಗೃಹ ರಕ್ಷದ ದಳದ ಜಿಲ್ಲಾ ಕಮಾಂಡೆಂಟ್ ಡಾ.ಮುರಳಿ ಮೋಹನ್ ಚೂಂತಾರು, ಉಪ ಕಮಾಂಡೆಂಟ್ ರಮೇಶ್, ಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ರಾಜೇಂದ್ರ ಪ್ರಸಾದ್, ಕೋಶಾಧಿಕಾರಿ ಕೃಷ್ಣ ನೀರಮೂಲೆ, ಮಂಗಳೂರು ಹವ್ಯಕ ಮಂಡಲದ ಅಧ್ಯಕ್ಷ ಕೆ.ಪಿ.ಭಟ್ ಉಪಸ್ಥಿತರಿದ್ದರು.
Next Story