ಉಪ ಚುನಾವಣೆ : ಸುಳ್ಯದಲ್ಲಿ ನಾಮಪತ್ರ ಸಲ್ಲಿಕೆ ಆರಂಭ
ಸುಳ್ಯ: ಸುಳ್ಯ ನಗರ ಪಂಚಾಯಿತಿ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಬುಧವಾರ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಎ.17ರಂದು ಸುಳ್ಯ ನಗರ ಪಂಚಾಯಿತಿ ಒಂದನೇ ವಾರ್ಡಿಗೆ ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ದಿನೇಶ್ ಮಣಿಯಾಣಿ ನಾಮಪತ್ರ ಸಲ್ಲಿಸಿದ್ದಾರೆ. ಸ್ಥಳೀಯ ವಾರ್ಡ್ ಬಿಜೆಪಿ ಅಧ್ಯಕ್ಷರಾಗಿರುವ ದಿನೇಶ್ ಪಕ್ಷದ ಮುಖಂಡರೊಂದಿಗೆ ಚುನಾವಣಾಧಿಕಾರಿ ಚಂದ್ರಶೇಖರ ಪೇರಾಲು ಅವರಿಗೆ ನಾಮಪತ್ರ ಸಲ್ಲಿಸಿದರು. ನ.ಪಂ. ಅಧ್ಯಕ್ಷ ಪ್ರಕಾಶ್ ಹೆಗ್ಡೆ, ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷೆ ಮೋಹಿನಿ ನಾಗರಾಜ್, ಬಿಜೆಪಿ ನಗರ ಸಮಿತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ನ.ಪಂ. ಸದಸ್ಯರಾದ ಗಿರೀಶ್ ಕಲ್ಲುಗದ್ದೆ, ಗೋಪಾಲ್ ನಡುಬೈಲು, ಶೀಲಾ ಮಾಧವ, ಬಿಜೆಪಿ ಮುಖಂಡರಾದ ಐ.ಬಿ.ಚಂದ್ರಶೇಖರ್, ಸೋಮನಾಥ ಪೂಜಾರಿ, ಕುಶ ನೀರಬಿದಿರೆ, ಬಾಲಕೃಷ್ಣ ರೈ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸದಸ್ಯ ದಿವಂಗತ ಚಂದ್ರಕುಮಾರ್ ಅವರ ಸಹೋದರ ಶಿವಕುಮಾರ್ ಕಂದಡ್ಕ ನಾಮಪತ್ರ ಸಲ್ಲಿಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್, ನಗರ ಪಂಚಾಯತ್ ಸದಸ್ಯರಾದ ಕೆ.ಎಂ.ಮುಸ್ತಫ, ಗೋಕುಲದಾಸ್, ಶಶಿಕಲಾ, ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್, ಕಂದಡ್ಕ ಕಾಲನಿಯ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.





