Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿನ್ನಿಕಲ್ಲು- ಉದ್ದಮಜಲು ಸಂಪರ್ಕ ಧರೆ...

ನಿನ್ನಿಕಲ್ಲು- ಉದ್ದಮಜಲು ಸಂಪರ್ಕ ಧರೆ ಕುಸಿತ: ರಸ್ತೆ ಸಂಚಾರಕ್ಕೆ ಅಡ್ಡಿ, ನೀರು ಟ್ಯಾಂಕ್ ಕುಸಿತ ಭೀತಿ

ವಾರ್ತಾಭಾರತಿವಾರ್ತಾಭಾರತಿ6 April 2016 6:55 PM IST
share
ನಿನ್ನಿಕಲ್ಲು- ಉದ್ದಮಜಲು ಸಂಪರ್ಕ ಧರೆ ಕುಸಿತ: ರಸ್ತೆ ಸಂಚಾರಕ್ಕೆ ಅಡ್ಡಿ, ನೀರು ಟ್ಯಾಂಕ್ ಕುಸಿತ ಭೀತಿ

ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ಹಾಗೂ ಉದ್ದ ಮಜಲು ಸಂಪರ್ಕ ರಸ್ತೆಯಂಚಿನಲ್ಲಿದ್ದ ಧರೆ ಬುಧವಾರ ನಸುಕಿನ ಜಾವ ಕುಸಿದು ಬಿದ್ದಿದ್ದು, ಇದರಿಂದ ಒಂದೆಡೆ ರಸ್ತೆ ಸಂಚಾರಕ್ಕೆ ಅಡಚಣೆಯಾದರೆ, ಇನ್ನೊಂದೆಡೆ ಧರೆಯಲ್ಲಿದ್ದ ಕುಡಿಯುವ ನೀರಿನ ಟ್ಯಾಂಕ್ ಅಪಾಯದಂಚಿಗೆ ಸಿಲುಕಿದೆ.
ಕಳೆದ 25 ವರ್ಷಗಳ ಹಿಂದೆ ಜಿಲ್ಲಾ ಪರಿಷತ್‌ನ ಅವಧಿಯಲ್ಲಿ ನಿನ್ನಿಕಲ್ಲು ಆಸುಪಾಸಿನ 75 ಮನೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವುದಕ್ಕಾಗಿ ಗುಡ್ಡದ ಮೇಲೊಂದು 25 ಸಾವಿರ ಲೀಟರ್ ಸಾಮರ್ಥ್ಯದ ಕುಡಿಯುವ ನೀರಿನ ಟ್ಯಾಂಕ್ ಅನ್ನು ನಿರ್ಮಿಸಲಾಗಿತ್ತು. ಆದರೆ ಕಾಲಕಳೆದಂತೆ ಜನಸಂಖ್ಯಾ ಹೆಚ್ಚಳ ಹಾಗೂ ಜನಸೌಕರ್ಯಕ್ಕಾಗಿ ನಿನ್ನಿಕಲ್ಲು ಹಾಗೂ ಉದ್ದಮಜಲು ಸಂಪರ್ಕ ರಸ್ತೆಯನ್ನು ಹಿರೇಬಂಡಾಡಿ ಗ್ರಾಮ ಪಂಚಾಯತ್ ಈ ಗುಡ್ಡವನ್ನು ಅಗೆದು ನಿರ್ಮಿಸಿತು. ಟ್ಯಾಂಕ್ ಬಳಿಯೇ ರಸ್ತೆ ನಿರ್ಮಾಣವಾದುದರಿಂದ ಕೆಳಗಡೆ ರಸ್ತೆ, ಮೇಲ್ಗಡೆ ಧರೆಯ ಮೇಲೆ ಟ್ಯಾಂಕ್ ಇರುವಂತಾಯಿತು. ಇಂದು ನಸುಕಿನ ಜಾವ ಟ್ಯಾಂಕ್ ಇರುವ ಧರೆ ಏಕಾಏಕಿ ಕುಸಿದು ಬಿದ್ದಿದ್ದು, ಮಣ್ಣೆಲ್ಲಾ ರಸ್ತೆಗೆ ಬಿದ್ದು ರಸ್ತೆ ಬಂದ್ ಆಗಿತ್ತು. ಅಲ್ಲದೇ, ನೀರಿನ ಪೈಪ್‌ಗಳೆಲ್ಲಾ ಒಡೆದು ಹೋಗಿ ರಸ್ತೆಯಲ್ಲೆಲ್ಲಾ ನೀರು ಹರಿದು ಹೋಗಿತ್ತು.
ಸುದ್ದಿ ತಿಳಿದು ಬೆಳಗ್ಗೆ ಸ್ಥಳಕ್ಕೆ ತೆರಳಿದ ಉಪ್ಪಿನಂಗಡಿ ಗ್ರಾಮ ಪಂಚಾಯತ್‌ನ ಬಿಲ್‌ಕಲೆಕ್ಟರ್ ಇಸಾಕ್ ಹಾಗೂ ಸಿಬ್ಬಂದಿ ಅಬ್ಬಾಸ್ ರಸ್ತೆಯಲ್ಲಿ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿದರು. ಸ್ಥಳಕ್ಕೆ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಗೋಪಾಲ ಹೆಗ್ಡೆ, ರಮೇಶ, ಕವಿತಾ, ಸುಂದರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಅಸಾಫ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಪತ್ರಿಕೆಯೊಂದಿಗೆ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಅಸಾಫ್, ಈ ಬಗ್ಗೆ ಜಿಲ್ಲಾ ಪಂಚಾಯತ್ ಎಂಜಿನಿಯರ್ ಇಲಾಖೆಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಟ್ಯಾಂಕ್‌ನ ಧರೆ ಕುಸಿತದಿಂದ ಆ ಭಾಗದ ಜನರಿಗೆ ನೀರು ಕಡಿತಗೊಂಡಿದ್ದು, ಇನ್ನೊಂದೆಡೆ ಲಕ್ಷಾಂತರ ರೂಪಾಯಿಯ ಟ್ಯಾಂಕ್ ಕೂಡಾ ಈಗ ಅಪಾದಂಚಿನಲ್ಲಿದೆ. ಆದ್ದರಿಂದ ಸಂಬಂಧಿತ ಇಲಾಖೆ ಕೂಡಲೇ ಎಚ್ಚೆತ್ತುಕೊಳ್ಳಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X