Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೈನಾ, ಸಿಂಧು ಗೆಲುವಿನಾರಂಭ, ಶ್ರೀಕಾಂತ್,...

ಸೈನಾ, ಸಿಂಧು ಗೆಲುವಿನಾರಂಭ, ಶ್ರೀಕಾಂತ್, ಪ್ರಣಯ್‌ಗೆ ಸೋಲು

ವಾರ್ತಾಭಾರತಿವಾರ್ತಾಭಾರತಿ6 April 2016 11:43 PM IST
share

ಮಲೇಷ್ಯಾ ಓಪನ್ ಸೂಪರ್ ಸರಣಿ

 ಷಾ ಆಲಂ(ಮಲೇಷ್ಯಾ), ಎ.6: ಮಲೇಷ್ಯಾ ಓಪನ್ ಸೂಪರ್ ಸರಣಿಯಲ್ಲಿ ಮಹಿಳೆಯರ ವಿಭಾಗದಲ್ಲಿ ಸೈನಾ ನೆಹ್ವಾಲ್ ಹಾಗೂ ಪಿ.ವಿ. ಸಿಂಧು ಎರಡನೆ ಸುತ್ತಿಗೆ ಪ್ರವೇಶಿಸಿದ್ದಾರೆ.

ಬುಧವಾರ ಇಲ್ಲಿ ಆರಂಭವಾದ ಟೂರ್ನಿಯಲ್ಲಿ ಪುರುಷರ ವಿಭಾಗದಲ್ಲಿ ಭಾರತದ ಇಬ್ಬರು ಶಟ್ಲರ್‌ಗಳು ನಿರಾಶಾದಾಯಕ ಪ್ರದರ್ಶನ ನೀಡಿದ್ದಾರೆ.

ಕಳೆದ ವಾರ ಇಂಡಿಯಾ ಓಪನ್‌ನಲ್ಲಿ ಸೆಮಿಫೈನಲ್‌ಗೆ ತಲುಪಿದ್ದ ಸೈನಾ 550,000 ಯುಎಸ್ ಡಾಲರ್ ಬಹುಮಾನ ಮೊತ್ತದ ಟೂರ್ನಿಯಲ್ಲಿ ಸಕಾರಾತ್ಮಕ ಆರಂಭ ಪಡೆದಿದ್ದಾರೆ. ಸೈನಾ ಥಾಯ್ಲೆಂಡ್‌ನ ನಿಟ್‌ಚಾವೊನ್ ಜಿಂದ್‌ಪಾಲ್‌ರನ್ನು 30 ನಿಮಿಷದಲ್ಲಿ ಪಂದ್ಯದಲ್ಲಿ 21-16, 21-7 ಗೇಮ್‌ಗಳ ಅಂತರದಿಂದ ಮಣಿಸಿದ್ದಾರೆ.

ಮೂರನೆ ಶ್ರೇಯಾಂಕದ ಸೈನಾ ಮುಂದಿನ ಸುತ್ತಿನಲ್ಲಿ ಕೊರಿಯಾದ ಬೇ ಯಿಯೊನ್‌ರನ್ನು ಎದುರಿಸಲಿದ್ದಾರೆ.

 ಆರನೆ ಶ್ರೇಯಾಂಕದ ಸಿಂಧು ಮತ್ತೊಂದು ಮಹಿಳೆಯರ ಸಿಂಗಲ್ಸ್‌ನಲ್ಲಿ ಚೀನಾದ ಬಿಂಗ್‌ಜಿಯಾವೊರನ್ನು 21-16, 21-17 ಗೇಮ್‌ಗಳಿಂದ ಮಣಿಸಿದರು. 40 ನಿಮಿಷಗಳಲ್ಲಿ ಗೆಲುವು ಸಾಧಿಸಿರುವ ಸಿಂಧು 2015ರ ಇಂಡೋನೇಷ್ಯಾ ಮಾಸ್ಟರ್ಸ್‌ ಹಾಗೂ 2016ರ ಸ್ವಿಸ್‌ಓಪನ್‌ನ ಸೋಲಿಗೆ ಸೇಡು ತೀರಿಸಿಕೊಂಡರು.

ಸಿಂಧು ಮುಂದಿನ ಸುತ್ತಿನಲ್ಲಿ ಕೊರಿಯಾದ ಸಂಗ್‌ಜೀ ಹ್ಯೂನ್‌ರನ್ನು ಎದುರಿಸಲಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ರಿಯೋ ಒಲಿಂಪಿಕ್ಸ್ ಆಕಾಂಕ್ಷಿ ಎಚ್‌ಎಸ್ ಪ್ರಣಯ್ ಹಾಗೂ ಕೆ.ಶ್ರೀಕಾಂತ್ ಮೊದಲ ಸುತ್ತಿನಲ್ಲೇ ಮುಗ್ಗರಿಸುವುದರೊಂದಿಗೆ ನಿರಾಸೆಗೊಳಿಸಿದರು.

   ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಶ್ರೀಕಾಂತ್ ಅವರು ಥಾಯ್ಲೆಂಡ್‌ನ ಬೂನ್ಸಕ್ ಪೊನ್ಸಾನ ವಿರುದ್ಧ 53 ನಿಮಿಷಗಳ ಹೋರಾಟದಲ್ಲಿ 21-23, 21-9,10-21ಗೇಮ್‌ಗಳ ಅಂತರದಿಂದ ಶರಣಾದರು . ಪೊನ್ಸಾನ ವಿರುದ್ಧ 3-1 ಗೆಲುವಿನ ದಾಖಲೆ ಪ್ರಯೋಜನಕ್ಕೆ ಬರಲಿಲ್ಲ. ಕಳೆದ ತಿಂಗಳು ಸ್ವಿಸ್ ಓಪನ್ ಪ್ರಶಸ್ತಿ ಜಯಿಸಿದ್ದ ಪ್ರಣಯ್, ಇಂಡಿಯಾ ಓಪನ್ ಚಾಂಪಿಯನ್ ಜಪಾನ್‌ನ ಕೆಂಟೊ ಮೊಮೊಟಾ ವಿರುದ್ಧ ಕಠಿಣ ಹೋರಾಟ ನೀಡಿದ ಹೊರತಾಗಿಯೂ 19-21, 20-22 ಗೇಮ್‌ಗಳ ಅಂತರದಿಂದ ಸೋತರು. ಪ್ರಣಯ್ ಇಂಡಿಯಾ ಓಪನ್ ಟೂರ್ನಿಯಲ್ಲೂ ಮೊದಲ ಸುತ್ತಿನಲ್ಲೇ ಸೋತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X