Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಥಾಣೆ: ಕೊಡ ನೀರಿಗಾಗಿ ರೈಲು ಪ್ರಯಾಣ!

ಥಾಣೆ: ಕೊಡ ನೀರಿಗಾಗಿ ರೈಲು ಪ್ರಯಾಣ!

ವಾರ್ತಾಭಾರತಿವಾರ್ತಾಭಾರತಿ7 April 2016 11:57 PM IST
share

ಮುಂಬೈ, ಎ.7: ಇಂಡಿಯನ್ ಪ್ರೀಮಿಯರ್ ಲೀಗ್‌ಗಾಗಿ ಕ್ರಿಕೆಟ್ ಪಿಚ್‌ಗಳನ್ನು ತಯಾರಿಸಲು ಲಕ್ಷಾಂತರ ಲೀಟರ್ ನೀರನ್ನು ಉಪಯೋಗಿಸುತ್ತಿರುವ ವಿರುದ್ಧ ಅರ್ಜಿಯೊಂದರ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ನಡೆಸುತ್ತಿದೆ. ಅಲ್ಲಿಂದ ಅಷ್ಟೇನೂ ದೂರವಲ್ಲದ ಥಾಣೆಯಲ್ಲಿ 30ರ ಹರೆಯದ ಪ್ರತಿಭಾ ಪಾಟೀಲ್ ಎಂಬವರು, ಕೇವಲ 2 ಕ್ಯಾನ್ ನೀರು ತರಲು ರೈಲಿನಲ್ಲಿ 10 ಕಿ.ಮೀ. ಪ್ರಯಾಣಿಸುತ್ತಾರೆ. ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಗುವ ಸಂಭವವಿದೆ.

ರಾಜ್ಯದ ವಿಶಾಲ ಭಾಗಗಳಲ್ಲಿ ಬರಗಾಲ ತಾಂಡವವಾಡುತ್ತಿದ್ದು, ಮಹಾರಾಷ್ಟ್ರ ಕೈಗಾರಿಕಾಭಿವೃದ್ಧಿ ನಿಗಮವು ಮುಂಬೈಗೆ ನೆರೆಯ ಥಾಣೆಗೆ ಪ್ರತಿ ವಾರ 60 ತಾಸು ನೀರಿನ ಸಂಪರ್ಕ ಕಡಿತಗೊಳಿಸಲಾಗುವುದೆಂದು ಘೋಷಿಸಿದೆ.
ಇಲ್ಲೆಲ್ಲೂ ನೀರಿಲ್ಲ. ತಾವು ನೀರು ತರುವುದಕ್ಕಾಗಿ ರೈಲಲ್ಲಿ ಹೋಗುತ್ತೇವೆ. ಆ ವೇಳೆ, ಮಕ್ಕಳನ್ನು ಮನೆಯಲ್ಲೇ ಅವರ ಪಾಡಿಗೆ ಬಿಟ್ಟು ಹೋಗಬೇಕಾಗುತ್ತದೆ. ಇದರಿಂದಾಗಿ ಅವರಿಗೆ ಕೆಲವೊಮ್ಮೆ ಶಾಲೆ ತಪ್ಪುತ್ತದೆಂದು ಥಾಣೆಯ ದಿವಾ ನಿವಾಸಿ ಪಾಟೀಲ್ ಹೇಳಿದ್ದಾರೆ.
ವಾರಕ್ಕೆ 3-4 ದಿನವೂ ತಮಗೆ ನೀರು ಸಿಗುತ್ತಿಲ್ಲ. ಉಳಿದ ದಿನಗಳಲ್ಲೂ ನಂಬುವುದಕ್ಕಾಗುವುದಿಲ್ಲ. ಕೆಲವರು ನೀರಿನ ಟ್ಯಾಂಕರ್‌ಗಳನ್ನವಲಂಬಿಸಿದ್ದೇವೆ ಹಾಗೂನೀರನ್ನು ಸಂಗ್ರಹಿಸಿಡುತ್ತೇನೆಂದು ಇನ್ನೊಬ್ಬರು ತಿಳಿಸಿದ್ದಾರೆ.
ಥಾಣೆಯ ಸಾವಿರಾರು ಹತಾಶ ನಿವಾಸಿಗಳು ನೀರನ್ನು ಬಿಂದು ಬಿಂದು ಲೆಕ್ಕ ಮಾಡುತ್ತಾರೆ. ಚಿನ್ನ ತುಟ್ಟಿಯಾದರೆ ಅದನ್ನು ಕೊಳ್ಳದಿರಬಹುದು. ಆದರೆ, ನೀರಿನ ವಿಷಯದಲ್ಲಿ ಹಾಗಾಗುವುದಿಲ್ಲವೆಂದು ದಿವಾದ ಮತ್ತೊಬ್ಬ ನಿವಾಸಿ ಹೇಳಿದ್ದಾರೆ.
ಎಂಐಡಿಸಿ ವಾರಕ್ಕೆ 60 ದಿನ ನೀರು ಪೂರೈಕೆ ಕಡಿತಗೊಳಿಸುವುದರಿಂದ ಕಲ್ವಾ ಹಾಗೂ ದಿವಾಗಳಂತಹ ಪ್ರದೇಶಗಳು ಬಹುವಾಗಿ ಬಾಧಿತವಾಗಲಿವೆಯೆಂದು ಥಾಣೆಮಹಾನಗರ ಪಾಲಿಕೆಯ ಸಂದೀಪ ಮಾಲ್ವಿ ಅಭಿಪ್ರಾಯಿಸಿದ್ದಾರೆ. ನಗರ ಪಾಲಿಕೆ ಸಹ ಅನಿವಾರ್ಯವಾಗಿ ಶೇ.40ರಷ್ಟು ನೀರು ಪೂರೈಕೆಯನ್ನು ಕಡಿತಗೊಳಿಸಿದೆ. ಆ ಬಳಿಕ ಟ್ಯಾಂಕರ್‌ನವರು ನೀರಿನ ಬೆಲೆ ಹೆಚ್ಚಿಸಿದ್ದಾರೆ.
ವಿಚಿತ್ರವೆಂದರೆ, ಠಾಣೆ ಸರೋವರಗಳ ನಗರವೆಂದೇ ಪ್ರಸಿದ್ಧ. ಅಲ್ಲಿ 30 ಸರೋವರಗಳು ಹಾಗೂ 500 ಕೊಳವೆ ಬಾವಿಗಳಿವೆ. ಆದರೆ, ಅಗಾಧ ಜಲ ಬಿಕ್ಕಟ್ಟಿನೊಂದಿಗೆ ಹೋರಾಡಲು ನಗರ ಪಾಲಿಕೆ ವಿಫಲವಾಗಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X