Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಯ ಜನಧನ್ ಯೋಜನೆ...

ಪ್ರಧಾನಿ ಮೋದಿಯ ಜನಧನ್ ಯೋಜನೆ ಬ್ಯಾಂಕ್‌ಗಳಿಗೆ ಸಂಕಷ್ಟ

ವಾರ್ತಾಭಾರತಿವಾರ್ತಾಭಾರತಿ9 April 2016 4:40 PM IST
share
ಪ್ರಧಾನಿ ಮೋದಿಯ ಜನಧನ್ ಯೋಜನೆ ಬ್ಯಾಂಕ್‌ಗಳಿಗೆ ಸಂಕಷ್ಟ

ಲಕ್ನೊ, ಎಪ್ರಿಲ್.9: ಪ್ರಧಾನಿ ನರೇಂದ್ರ ಮೋದಿಯ ಜನಧನ್ ಯೋಜನೆಯ ಆರಂಭ ಭಾರೀ ಆವೇಶದಿಂದ ನಡೆದಿತ್ತು. ಆದರೆ ಈಗ ಈ ಜನಧನ್ ಖಾತೆ ನಿಭಾಯಿಸುವುದು ಬ್ಯಾಂಕ್‌ಗಳಿಗೆ ಕಷ್ಟಕರವಾಗಿದೆ ಎಂದು ವರದಿಯಾಗಿದೆ. ಬ್ಯಾಂಕ್ ಅಧಿಕಾರಿಗಳು ರಿಸರ್ವ್‌ಬ್ಯಾಂಕ್‌ನ ಒತ್ತಡದಿಂದ ತೆರೆಯಲಾದ ಝೀರೊ ಬ್ಯಾಲೆನ್ಸ್ ಖಾತೆಗಳನ್ನು ಸಕ್ರಿಯವಾಗಿರಿಸಲು ಹಣ ವ್ಯಯಿಸಬೇಕಾಗಿ ಬಂದಿದೆ ಎನ್ನಲಾಗಿದೆ.

ಬ್ಯಾಂಕ್ ಅಧಿಕಾರಿಗಳು ಹೇಳುವ ಪ್ರಕಾರ ಜನಧನ್ ಖಾತೆ ತ್ರಾಸಕರವಾಗಿದೆ. ಝೀರೊ ಬ್ಯಾಲೆನ್ಸ್‌ನಲ್ಲಿ ತೆರೆದ ಖಾತೆಗಳಲ್ಲಿ ಒಂದೂ ಪೈಸೆಯನ್ನು ಜಮೆ ಮಾಡಲಾಗುತ್ತಿಲ್ಲ. ಖಾತೆಯನ್ನು ಸಕ್ರಿಯವಾಗಿರಿಸಲಿಕ್ಕೆ ಭಾರೀ ಒತ್ತಡವಿದೆ. ಭಾರತೀಯ ಸ್ಟೇಟ್ ಬ್ಯಾಂಕ್‌ನ ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಎರಡು ಲಕ್ಷ ರೂಪಾಯಿಯ ವಿಮೆ ಮತ್ತು ಐದು ಸಾವಿರ ರೂಪಾಯಿಯ ಓವರ್‌ಡ್ರಾಫ್ಟ್ ಆಸೆಯಲ್ಲಿ ದೇಶಾದ್ಯಂತ ಹನ್ನೊಂದು ಕೋಟಿಗೂ ಅಧಿಕ ಜನಧನ್ ಖಾತೆ ತೆರೆಯಲಾಗಿದೆ. ಇದರಲ್ಲಿ ನಾಲ್ಕು ಕೋಟಿಗೂ ಅಧಿಕಖಾತೆಯಲ್ಲಿ ನಯಾಪೈಸೆ ಬ್ಯಾಲೆನ್ಸ್ ಇಲ್ಲ. ಅಧಿಕಾರಿ ಝೀರೊ ಬ್ಯಾಲೆನ್ಸ್‌ನಿಂದಾಗಿ ಆ ಖಾತೆಗೆ ವಿಮೆಯ ಲಾಭವೂ ಇಲ್ಲ ಓವರ್‌ಡ್ರಾಫ್ಟ್ ಸಿಗುವುದಿಲ್ಲ. ಹೀಗಿರುವಾಗ ಖಾತೆಯನ್ನು ಸಕ್ರಿಯವಾಗಿರಿಸಬೇಕೆಂದು ರಿಸರ್ವ್ ಬ್ಯಾಂಕ್‌ನಿಂದ ಭಾರೀ ಒತ್ತಡವೂ ಇದೆ ಎಂದು ಬ್ಯಾಂಕ್ ಅಧಿಕಾರಿ ತಿಳಿಸಿದ್ದಾರೆ. ಈ ಒತ್ತಡದಿಂದಾಗಿ ಬ್ಯಾಂಕ್‌ಗಳು ನಿರ್ಬಂಧಕ್ಕೊಳಗಾಗಿವೆ. ಪಂಜಾಬ್ ನ್ಯಾಶನಲ್ ಬ್ಯಾಂಕ್‌ನ ಹಿರಿಯ ಅಧಿಕಾರಿಯೊಬ್ಬರು ಐಎಎನ್‌ಎಸ್ ಗೆ ಖಾತೆಯನ್ನು ತೆರೆದ ಬಳಿಕ ಖಾತೆದಾರ ಮತ್ತೆ ಬ್ಯಾಂಕ್‌ನತ್ತ ಮುಖ ಹಾಕಿಲ್ಲ ಎಂದು ತಿಳಿಸಿರುವುದಾಗಿ ವರದಿ ತಿಳಿಸಿದೆ.

"ಐದು ಸಾವಿರ ರೂಪಾಯಿಯ ಓವರ್‌ಡ್ರಾಫ್ಟ್‌ನ ಆಸೆಯಲ್ಲಿ ತೆರೆಯಲಾದ ಖಾತೆಗಳಿಗೆ ಪೈಸೆ ಬರದಿದ್ದರೆ ಅವರಿಗೆ ಭ್ರಮನಿರಸನವಾಗಲಿದೆ. ಇಂತಹ ಖಾತೆದಾರರಿಗೆ ಹಲವು ಬಾರಿ ಪತ್ರ ಬರೆಯಲಾಗಿದೆ.ಆದರೆ ಯಾವುದೇ ಪ್ರಯೋಜನವಾಗಿಲ್ಲ. ಈಗ ಈ ಖಾತೆ ಬ್ಯಾಂಕ್ ಮ್ಯಾನೇಜರ್‌ಗೆ ತಲೆನೋವಾಗಿದೆ" ಎಂದು ಆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಯು ಈ ಕಷ್ಟದಿಂದ ಪಾರಾಗಲು ಶೂನ್ಯ ಬ್ಯಾಲೆನ್ಸ್ ಖಾತೆಯನ್ನು ನಿರ್ವಹಿಸಲು ಬ್ಯಾಂಕ್ ಮ್ಯಾನೇಜರ್ ರೂಪಾಯಿ ಹಾಕಬೇಕಾಗಿದೆ. ಈ ಕೆಲಸದಲ್ಲಿ ಎಲ್ಲ ಸಿಬ್ಬಂದಿ ನಿರತರಾಗಿದ್ದಾರೆ ಎಂದು ಅವರು ತಮ್ಮ ಅಭಿಮತವನ್ನು ವ್ಯಕ್ತಪಡಿಸಿದ್ದಾರೆ.

ಈಗ ಖಾತೆದಾರಿನ ಹೆಸರಲ್ಲಿ ಒಂದು ಒಂದು ರೂಪಾಯಿಯ ವೋಚರ್ ಮಾಡಲಾಗುತ್ತದೆ. ಇದಕ್ಕೆ ದಿನವಹಿ ಚಾಕಾಫಿ ಖರ್ಚಿನಿಂದ ತುಂಬಲಾಗುತ್ತಿದೆ. ಪ್ರದಾನ ಮಂತ್ರಿ ನರೇಂದ್ರ ಮೋದಿ ಈ ಯೋಜನೆಯನ್ನು ಹೊಗಳುತ್ತಲೇಇರುತ್ತಾರೆ. ಸ್ವಾತಂತ್ರ್ಯ ಸಿಕ್ಕಿದ ಬಳಿಕ ಕಳೆದ ಎರಡು ವರ್ಷಗಳಿಂದ ಬ್ಯಾಂಕ್‌ನಲ್ಲಿ ಇಷ್ಟೊಂದು ಖಾತೆಗಳು ತೆರೆಯಲ್ಪಟ್ಟಿದೆ ಎಂದು ಹೇಳುತ್ತಾರೆ. ನೊಯ್ಡಾದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಜನಧನ್‌ಯೋಜನೆಯಿಂದಾಗಿ ದೇಶದ ಖಜಾನೆಗೆ 35ಸಾವಿರ ಕೋಟಿರೂಪಾಯಿ ಒಟ್ಟುಗೂಡಿದೆ ಎಂದೂ ಹೇಳುತ್ತಿದ್ದಾರೆ. ಆದರೆ ಇದಕ್ಕಿಂತ ವಿಪರೀತ ವಾಸ್ತವವನ್ನು ಬ್ಯಾಂಕ್ ಅಧಿಕಾರಿಗಳು ತಿಳಿಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X