ನೆತ್ತೋಡಿ ಶಾಲಾ ವಾರ್ಷಿಕೋತ್ಸವ, ಸನ್ಮಾನ

ಮೂಡುಬಿದಿರೆ, ಎ.9: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಶಾಲಾ ವಾರ್ಷಿಕೋತ್ಸವಗಳು ಪೂರಕವಾಗಿವೆ ಎಂದು ಯುವಜನ ಸೇವೆ ಮತ್ತು ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದ್ದಾರೆ. ನೆತ್ತೋಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಸಂದರ್ಭ ಶಾಲೆಯ ನಿವೃತ್ತ ಶಿಕ್ಷಕ ನಾಗರಾಜೇಂದ್ರ ಇಂದ್ರ, ನಿವೃತ್ತ ಶಿಕ್ಷಕಿ ಲಿಲ್ಲಿ ರೊಡ್ರಿಗಸ್, ಪುರಸಭಾ ಸದಸ್ಯೆ ಹರಿಣಾಕ್ಷಿ ಎಸ್.ಸುವರ್ಣ, ಎಸ್ಡಿಎಂಸಿ ಅಧ್ಯಕ್ಷ ಪದ್ಮನಾಭ ಕೋಟ್ಯಾನ್ ಹಾಗೂ ರ್ಯಾಂಕ್ ವಿಜೇತೆ, ಹಳೆ ವಿದ್ಯಾರ್ಥಿನಿ ಜ್ಯೋತಿ ಪ್ರಸಾದ್ರನ್ನು ಸನ್ಮಾನಿಸಲಾಯಿತು. ಪುರಸಭಾಧ್ಯಕ್ಷೆ ರೂಪಾ ಎಸ್. ಶೆಟ್ಟಿ, ಮೂಡಾ ಅಧ್ಯಕ್ಷ ಸುರೇಶ್ ಕೋಟ್ಯಾನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ನಾಗೇಶ್, ಮೂಡುಬಿದಿರೆ ಎಸ್.ಎನ್. ಪಾಲಿಟೆಕ್ನಿಕ್ನ ಉಪನ್ಯಾಸಕ ಚಂದ್ರ ಕೆ.ಎಚ್., ತಾಕೋಡೆ ಚರ್ಚ್ ಸಂತ ಫ್ರಾನ್ಸಿಸರ ವಾಳೆಯ ಗುರಿಕಾರ ಪೌಲ್ ಡಿಸೋಜ ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಅನಿತಾ ಎಂ.ಎ. ಸ್ವಾಗತಿಸಿದರು. ಸಹ ಶಿಕ್ಷಕಿ ವನಿತಾ ಡಿಸಿಲ್ವ ವಾರ್ಷಿಕ ವರದಿ ಮಂಡಿಸಿದರು. ಸದಾನಂದ ಎಸ್.ಸುವರ್ಣ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪುಟಾಣಿಗಳಿಂದ, ಶಾಲಾ ವಿದ್ಯಾರ್ಥಿಗಳಿಂದ ವಿವಿಧ ನೃತ್ಯಗಳು, ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತೆ ಕುಮಾರಿ ಪಂಚಮಿ ಮಾರೂರುರಿಂದ ನೃತ್ಯ ಕಾರ್ಯಕ್ರಮ ಹಾಗೂ ಹಳೆ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನಡೆದವು. ಕಾರ್ಕಳ: ಶಿಕ್ಷಕ ಸನ್ಮತ್ ಕುಮಾರ್ಗೆ ಬೀಳ್ಕೊಡುಗೆ
ಕಾರ್ಕಳ, ಎ.9: ಶಿಕ್ಷಣ ಇಲಾಖೆಯಲ್ಲಿ 36 ವರ್ಷಗಳ ಸೇವೆ ಸಲ್ಲಿಸಿ, ನಿವೃತ್ತರಾದ ಹೊಸ್ಮಾರು ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕ ಸನ್ಮತ್ ಕುಮಾರ್ ಜೈನ್ರನ್ನು ಇತ್ತೀಚೆಗೆ ಶಾಲೆಯಲ್ಲಿ ಬೀಳ್ಕೊಡಲಾಯಿತು.
ಶಿಕ್ಷಣ ಸಂಯೋಜಕ ಶಿವಾನಂದ ಕೆ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಶಿಕ್ಷಕ ಪ್ರಶಸ್ತಿ ಪಡೆದ ವೇದಾವತಿಯವರನ್ನು ಸನ್ಮಾ ನಿಸಲಾಯಿತು. ಸಿಆರ್ಪಿ ಕೃಷ್ಣಕುಮಾರ್ ಅಭಿನಂದನಾ ಭಾಷಣ ಮಾಡಿದರು.
ಉದ್ಯಮಿ ಪ್ರೇಮ್ ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ದಿವಾಕರ ಹೆಗ್ಡೆ, ಗ್ರಾಪಂ ಅಧ್ಯಕ್ಷ ಪುರುಷೋತ್ತಮ ಗೌಡ, ಎಸ್ಡಿಎಂಸಿ ಅಧ್ಯಕ್ಷ ಅಮಿತ್ ಜೈನ್, ಗೌರವಾಧ್ಯಕ್ಷ ವಿಜಯ ಕುಮಾರ್, ಅಧ್ಯಕ್ಷ ಸಂತೋಷ್ ಕುಮಾರ್, ಎಸ್ಡಿಎಂಸಿ ಉಪಾಧ್ಯಕ್ಷೆ ಸುಮಿತ್ರಾ ಉಪಸ್ಥಿತರಿದ್ದರು. ಸಹಶಿಕ್ಷಕಿ ರೇವತಿ ಸ್ವಾಗತಿಸಿದರು. ಕುಸುಮಾ ವಂದಿಸಿದರು. ಪ್ರಭಾರ ಮುಖ್ಯ ಶಿಕ್ಷಕಿ ಪ್ರಭಾವತಿ ಕಾರ್ಯಕ್ರಮ ನಿರೂಪಿಸಿದರು.







