Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾಲಯಗಳು ಭವಿಷ್ಯ ರೂಪಿಸುವ ಶ್ರದ್ಧಾ...

ವಿದ್ಯಾಲಯಗಳು ಭವಿಷ್ಯ ರೂಪಿಸುವ ಶ್ರದ್ಧಾ ಕೇಂದ್ರಗಳು

ಸುವರ್ಣ ಮಹೋತ್ಸವ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ10 April 2016 11:02 PM IST
share
ವಿದ್ಯಾಲಯಗಳು ಭವಿಷ್ಯ ರೂಪಿಸುವ ಶ್ರದ್ಧಾ ಕೇಂದ್ರಗಳು

ಸಾಗರ,ಎ.10: ವಿದ್ಯಾಲಯಗಳು ಭವಿಷ್ಯವನ್ನು ರೂಪಿಸುವ ಶ್ರದ್ಧಾ ಕೇಂದ್ರಗಳಿದ್ದಂತೆ. ವಿದ್ಯಾಲಯಗಳ ಅಭಿವೃದ್ಧಿ ಸರಕಾರದ ಹೊಣೆ ಮಾತ್ರವಲ್ಲ. ಸ್ಥಳೀಯವಾಗಿರುವ ಪೋಷಕರು, ಸಾರ್ವಜನಿಕರದ್ದೂ ಆಗಿರುತ್ತದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಇಲ್ಲಿನ ಬೆಳಲಮಕ್ಕಿ ಶಾಸಕರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭವನ್ನು ರವಿವಾರ ಉದ್ಘಾಟಿಸಿ, ಸುವರ್ಣ ಮಹೋತ್ಸವದ ಅಂಗವಾಗಿ ಹೊರತರಲಾದ ಸುವರ್ಣ ಗರಿ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು.

ವ್ಯಕ್ತಿಯೊಬ್ಬನ ಭವಿಷ್ಯ ರೂಪಿಸುವ ಕೆಲಸವನ್ನು ಪ್ರಾಥಮಿಕ ಶಿಕ್ಷಣ ಸಂಸ್ಥೆಗಳು ಮಾಡುತ್ತವೆ. ಅಂತಹ ಶಾಲೆ ಐವತ್ತು ವರ್ಷಗಳ ಕಾಲ ನಿರಂತರತೆಯನ್ನು ಕಾಯ್ದುಕೊಂಡಿದೆ ಎಂದರೆ ಶಾಲೆಯಲ್ಲಿ ಓದಿದ ಹಳೆಯ ಹಾಗೂ ಹೊಸ ವಿದ್ಯಾರ್ಥಿಗಳಿಗೆ ಹೆಮ್ಮೆಯ ಸಂಗತಿ. ಶಾಲೆಯನ್ನು ನೂರು ವರ್ಷಗಳ ಕಾಲ ಇನ್ನಷ್ಟು ಉನ್ನತ ಸ್ಥಿತಿಯಲ್ಲಿ ಕೊಂಡೊಯ್ಯುವ ಸಂಕಲ್ಪವನ್ನು ಶಾಲೆಯ ಶಿಕ್ಷಕ ವೃಂದ, ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆ ಮಾಡಬೇಕು ಎಂದು ತಿಳಿಸಿದರು. ಬದಲಾದ ದಿನಮಾನಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಪೋಷಕರ ವ್ಯಾಮೋಹ ಹೆಚ್ಚುತ್ತಿದೆ. ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಗಳಲ್ಲಿ ಸಿಗುತ್ತಿದೆ. ಸರಕಾರ ಸಹ ಶೈಕ್ಷಣಿಕ ಚಟುವಟಿಕೆಯನ್ನು ಆಧುನೀಕರಣಗೊಳಿಸಲು ಹೆಚ್ಚು ಒತ್ತು ನೀಡಿದೆ. ಪೋಷಕರ ಮನಸ್ಥಿತಿ ಬದಲಾಯಿಸುವ ಕೆಲಸವಾಗಬೇಕು. ನಮ್ಮ ಮಕ್ಕಳನ್ನು ಸರಕಾರಿ ಶಾಲೆಯಲ್ಲಿಯೆ ಓದಿಸುತ್ತೇವೆ ಎನ್ನುವ ಸಂಕಲ್ಪ ಪೋಷಕವೃಂದ ಮಾಡಬೇಕು ಎಂದು ಸಲಹೆ ನೀಡಿದರು. ಪ್ರತಿಯೊಂದು ಮಗುವಿನಲ್ಲೂ ಅಂತರ್ಗತವಾಗಿ ಪ್ರತಿಭೆ ಇರುತ್ತದೆ. ಶಾಲಾ ಹಂತದಲ್ಲಿ ಅದನ್ನು ಅಭಿವ್ಯಕ್ತಗೊಳಿಸಲು ಸೂಕ್ತ ವೇದಿಕೆ ಕಲ್ಪಿಸಿಕೊಡಬೇಕು. ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಹೊರತರುವ ಸ್ಮರಣ ಸಂಚಿಕೆಗಳಲ್ಲಿ ಮಕ್ಕಳಲ್ಲಿರುವ ಸಾಹಿತ್ಯಾಸಕ್ತಿ ಬೆಳಕಿಗೆ ಬರಲು ಸಾಧ್ಯವಿದೆ. ಇಂತಹ ಉತ್ಸವಗಳಲ್ಲಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ತಮ್ಮ ಮಕ್ಕಳ ಕಲಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಗೌಡ, ಪೋಷಕರು ಶಾಲೆಗಳ ಜೊತೆ ನೇರ ಸಂಪರ್ಕವನ್ನು ಹೊಂದಿರಬೇಕು. ಮಕ್ಕಳನ್ನು ಶಾಲೆಗೆ ಕಳಿಸಿದ ತಕ್ಷಣ ತಮ್ಮ ಜವಾಬ್ದಾರಿ ಮುಗಿಯಿತು ಎನ್ನುವ ಮನೋಭಾವ ಸರಿಯಲ್ಲ. ಶಾಲೆಯೊಂದು 50 ವರ್ಷ ಕಳೆದಿದೆ ಎಂದರೆ ಶಾಲೆಯ ಬೆಳವಣಿಗೆ ಹಿಂದೆ ಇರುವ ಎಲ್ಲರ ಶ್ರಮವನ್ನು ಇಂತಹ ವೇದಿಕೆಗಳ ಮೂಲಕ ಚರ್ಚಿಸಿ, ಭವಿಷ್ಯದಲ್ಲಿ ಶಾಲೆಯನ್ನು ಇನ್ನಷ್ಟು ಉನ್ನತ ಸ್ಥಿತಿಗೆ ಕೊಂಡೊಯ್ಯುವ ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X