Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೂರ್ಣಗೊಳ್ಳದ ಪೈಪ್‌ಲೈನ್ ಕಾಮಗಾರಿ:...

ಪೂರ್ಣಗೊಳ್ಳದ ಪೈಪ್‌ಲೈನ್ ಕಾಮಗಾರಿ: ಬರಿದಾದ ನೀರಿನ ಮೂಲ

ಸಮಸ್ಯೆಯ ಸುಳಿಯಲ್ಲಿ ಕುಡಿಯುವ ನೀರಿನ ಘಟಕಗಳು

ವಾರ್ತಾಭಾರತಿವಾರ್ತಾಭಾರತಿ10 April 2016 11:07 PM IST
share
ಪೂರ್ಣಗೊಳ್ಳದ ಪೈಪ್‌ಲೈನ್ ಕಾಮಗಾರಿ: ಬರಿದಾದ ನೀರಿನ ಮೂಲ

ಶ್ರೀನಿವಾಸ ಬಾಡಕರ 

ಕಾರವಾರ, ಎ.10: ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಿರುವ ಬಹುಹಳ್ಳಿ ಕುಡಿಯುವ ನೀರಿನ ಘಟಕಗಳು ಸಮಸ್ಯೆಗಳಿಂದ ನಿಷ್ಪ್ರಯೋಜಕವಾಗಿದ್ದು, ಸುತ್ತಮುತ್ತಲಿನ ಜನರಿಗೆ ಸರಕಾರದ ಯೋಜನೆಗಳಿದ್ದರೂ ದಾಹ ತೀರಿಸಿಕೊಳ್ಳಲಾಗದ ಸ್ಥಿತಿ ನಿರ್ಮಾಣವಾಗಿದೆ.

ಕೋಟ್ಯಂತರ ರೂ. ವ್ಯಯಿಸಿ ನಿರ್ಮಾಣಗೊಂಡ ಘಟಕಗಳು ಉಪ್ಪು ನೀರಿನ ಸಮಸ್ಯೆ, ವಿದ್ಯುತ್ ಕೊರತೆ, ಪೂರ್ಣಗೊಳ್ಳದ ಪೈಪ್‌ಲೈನ್ ಕಾಮಗಾರಿ, ಮಳೆ ಅಭಾವದ ಕಾರಣ ನೀರಿನ ಅಲಭ್ಯ, ಗುತ್ತಿಗೆದಾರರ ನಿರ್ಲಕ್ಷ್ಯ ಹೀಗೆ ನಾನಾ ಸಮಸ್ಯೆಗಳಿಂದ ಬಳಲುತ್ತಿದ್ದು, ಜನರಿಗೆ ಕುಡಿಯುವ ನೀರನ್ನು ಒದಗಿಸುವಲ್ಲಿ ವಿಫಲವಾಗಿವೆ. ಕಾರವಾರ ತಾಲೂಕಿನ ಗೋಟೆಗಾಳಿಯಲ್ಲಿ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ 10.66 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೀರು ಸರಬರಾಜು ಘಟಕವು ಕಳೆದ ನಾಲ್ಕೈದು ತಿಂಗಳಿಂದ ಸ್ಥಗಿತಗೊಂಡಿದೆ. ಘಟಕಕ್ಕೆ ಉಪ್ಪುನೀರು ಸೇರುವುದರಿಂದ ಗೋಟೆಗಾಳಿ ಸೇರಿದಂತೆ ಮಾಜಾಳಿವರೆಗಿನ ಹತ್ತು ಗ್ರಾಮಗಳಿಗೆ ನೀರು ಪೂರೈಕೆಯಾಗುತ್ತಿಲ್ಲ. ಇದರಿಂದ ಈ ಭಾಗದ ಜನರು ನೀರಿಗಾಗಿ ಪರದಾಡುವಂತಾಗಿದೆ.

ಕಾಳಿ ನದಿ ನೀರನ್ನು ಹತ್ತು ಗ್ರಾಮಗಳಿಗೆ ಪೂರೈಸುವ ಉದ್ದೇಶದಿಂದ ಆರಂಭಗೊಂಡ ಘಟಕಕ್ಕೆ ಈ ಬಾರಿ ಉಪ್ಪುನೀರು ನುಗ್ಗುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಸಮರ್ಪಕವಾಗಿ ಮಳೆಯಾಗದ ಪರಿಣಾಮ ಕಾಳಿ ನದಿಯಲ್ಲಿ ಸಿಹಿ ನೀರು ಹರಿಯುತ್ತಿಲ್ಲ. ಉಬ್ಬರ ಏರಿಳಿತದ ಪರಿಣಾಮ ಬಹುದೂರದವರೆಗೂ ನದಿ ನೀರಿಗೆ ಸಮುದ್ರದ ಉಪ್ಪುನೀರು ಸೇರುತ್ತಿದೆ. ಹೀಗಾಗಿ ನದಿಯಿಂದ ನೀರನ್ನು ಎತ್ತಿ ಪೂರೈಕೆ ಮಾಡಲಾಗುತ್ತಿಲ್ಲ.

ತಾಲೂಕಿನ ಕೆರವಡಿ ಸೇರಿದಂತೆ 14 ಹಳ್ಳಿಗಳಿಗೆ ನೀರು ಪೂರೈಸಲು ಆರಂಭಿಸಿರುವ ಕೆರವಡಿ ಯೋಜನೆ ಕಾಮಗಾರಿ ವರ್ಷಗಳು ಕಳೆದರೂ ಪೂರ್ಣಗೊಂಡಿಲ್ಲ. 8.85 ಕೋಟಿ ರೂ.ಗೆ ಟೆಂಡರ್ ಪಡೆದಿರುವ ಶಿರಸಿ ಮೂಲದ ಗುತ್ತಿಗೆದಾರರು ಆಮೆಗತಿಯಲ್ಲಿ ಕಾಮಗಾರಿ ನಡೆಸುತ್ತಿದ್ದು, ಯೋಜನೆಗೆ ಹಿನ್ನಡೆಯಾಗಿದೆ.

ಈಗಾಗಲೇ 2.13 ಕೋಟಿ ರೂ.ಯೋಜನೆಗೆ ಖರ್ಚು ಮಾಡಲಾಗಿದೆಯಾದರೂ ಕಾಮಗಾರಿ ವೇಗ ಪಡೆಯುತ್ತಿಲ್ಲ. ಟೆಂಡರ್ ಪ್ರಕಾರ ಈ ಕಾಮಗಾರಿ ಈಗಾಗಲೇ ಪೂರ್ಣಗೊಂಡು ಜನತೆ ಸೇವೆಗೆ ಮುಕ್ತವಾಗಬೇಕಿತ್ತು. ಆದರೆ, ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸಲು ಇಲಾಖೆಯಿಂದ ಅವಧಿ ವಿಸ್ತರಣೆಗೆ ಮನವಿ ಮಾಡುತ್ತಿದ್ದಾರೆ ಹೊರತು, ಕೆಲಸ ಮುಗಿಸುತ್ತಿಲ್ಲ.

ಕೆಲಸ ವೇಗಗೊಳಿಸುವಂತೆ ಗುತ್ತಿಗೆದಾರರಿಗೆ ಹೇಳಲಾಗಿದೆ. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ನಿಯಮಾವಳಿ ಪ್ರಕಾರ ದಂಡ ವಿಧಿಸಲಾಗುತ್ತದೆ. ಗುತ್ತಿಗೆದಾರರನ್ನು ಏಕಾಏಕಿ ಕಪ್ಪುಪಟ್ಟಿಗೆ ಸೇರಿಸಿದರೆ ಯೋಜನೆಗೆ ಮತ್ತಷ್ಟು ಹಿನ್ನಡೆಯಾಗುತ್ತದೆ. ಮತ್ತೆ ಮರು ಟೆಂಡರ್ ಕರೆದು, ಕಾಮಗಾರಿ ಆರಂಭಿಸುವುದರಲ್ಲಿ ಸಮಯ ಕಳೆದು ಹೋಗುತ್ತದೆ ಎಂದು ವಿವರಿಸುತ್ತಾರೆ ಇಲಾಖೆ ಅಧಿಕಾರಿಗಳು.

ಕುಮಟಾ ತಾಲೂಕಿನ ಗೋಕರ್ಣದಲ್ಲಿ 6.81 ಕೋಟಿ ರೂ. ವೆಚ್ಚದಲ್ಲಿ ಎಂಟು ಗ್ರಾಮಗಳಿಗೆ ನೀರು ಪೂರೈಸುವ ಘಟಕ ನಿರ್ಮಿಸಲಾಗಿದೆ. ಆದರೆ, ನೀರು ಪೂರೈಸಲು ಅಗತ್ಯವಿರುವ ಪೈಪ್‌ಲೈನ್ ಸೇರಿದಂತೆ ನೆಟ್‌ವರ್ಕಿಂಗ್ ಕಾಮಗಾರಿ ಬಾಕಿ ಉಳಿದಿದೆ.

ಹೀಗಾಗಿ ಗೋಕರ್ಣದ ಘಟಕದಿಂದ ಯೋಜನೆ ವ್ಯಾಪ್ತಿಯ ಸುತ್ತಲಿನ ಹಳ್ಳಿಗಳಿಗೆ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಯೋಜನೆಯಡಿ ಸಮರ್ಪಕವಾಗಿ ನೀರು ಪೂರೈಸಲು 12 ಕೋಟಿ ರೂ. ವೆಚ್ಚದಲ್ಲಿ ಪೂರಕ ಕಾಮಗಾರಿ ಕೈಗೊಳ್ಳುವ ಪ್ರಸ್ತಾವನೆ ಸರಕಾರದ ಮಟ್ಟದಲ್ಲಿದೆ ಎಂದು ಗ್ರಾಮೀಣ ನೀರು ಪೂರೈಕೆ ಹಾಗೂ ನೈರ್ಮಲ್ಯ ಇಲಾಖೆ ಅಧಿಕಾರಿ ಕೆ.ಸಿ. ಮೆಣಸಿ ತಿಳಿಸಿದ್ದಾರೆ.

                 

ಕೆಪಿಟಿಸಿಎಲ್ ಕದ್ರಾ ಡ್ಯಾಂನಿಂದ ವಿದ್ಯುತ್ ಉತ್ಪಾದನೆಗೆ ಬಳಸಿದ ನೀರು ಬಿಟ್ಟಾಗ ಮಾತ್ರ ನದಿ ಕೆಳ ಭಾಗದಲ್ಲಿ ಕುಡಿಯಲು ಯೋಗ್ಯ ನೀರು ಹರಿಯುತ್ತದೆ. ಅಂತಹ ಸಂದರ್ಭದಲ್ಲಿ ಮಾತ್ರ ಘಟಕದ ಪಂಪ್ ಹೌಸ್‌ನಿಂದ ನೀರನ್ನು ಎತ್ತಿ, ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. -ಕೆ.ಸಿ. ಮೆಣಸಿ, ಗ್ರಾಮೀಣ ನೀರು ಪೂರೈಕೆ ಹಾಗೂ ನೈರ್ಮಲ್ಯ ಇಲಾಖೆ ಅಧಿಕಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X