Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು : ಅಧಿಕಾರ ಸ್ವೀಕರಿಸಿ ಮೂರು...

ಬೆಂಗಳೂರು : ಅಧಿಕಾರ ಸ್ವೀಕರಿಸಿ ಮೂರು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಸಾಧನಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ11 April 2016 6:07 PM IST
share
ಬೆಂಗಳೂರು : ಅಧಿಕಾರ ಸ್ವೀಕರಿಸಿ ಮೂರು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಸಾಧನಾ ಸಮಾವೇಶ

ಬೆಂಗಳೂರು.ಏ.11: ಮೇ 13 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಮೂರು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಅಂದು ಬೃಹತ್ ಸಾಧನಾ ಸಮಾವೇಶ ನಡೆಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ನಂತರ ಎರಡು ವರ್ಷಗಳ ಕಾಲ ಸರ್ಕಾರವನ್ನು ಮತ್ತಷ್ಟು ಪರಿಣಾಮಕಾರಿಯಾಗುವಂತೆ ಮಾಡಿ, ಮುಂದಿನ 2018ರ ವಿಧಾನಸಭೆಗೆ ಸಜ್ಜುಗೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಿದ್ದಾರೆ. ಬೆಂಗಳೂರು,ಮೈಸೂರು,ಚಿತ್ರದುರ್ಗ. ದಾವಣಗೆರೆ ಪೈಕಿ ಒಂದು ಕಡೆಯಲ್ಲಿ ಸಾದನಾ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಬಿಜೆಪಿಯ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ 

ೇಮಕಗೊಂಡಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ಸಿದ್ದರಾಮಯ್ಯ ಮುಂದಾಗಿದ್ದು, ಕಾಂಗ್ರೆಸ್‌ನ ಅತಿರಥ ಮಹಾರಥರನ್ನು ಕರೆಸಿ ಸಮಾವೇಶ ಆಯೋಜಿಸಲು ಮುಂದಾಗಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ನಾಯಕರಾಗಿರುವಮಲ್ಲಿಕಾರ್ಜುನ ಖರ್ಗೆ,ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ,ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ಸಿಂಗ್ ಸೇರಿದಂತೆ ಪ್ರಮುಖ ನಾಂ
ುಕರನ್ನು ಸಮಾವೇಶಕ್ಕೆ ಕರೆತರಲು ಉದ್ದೇಶಿಸಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ನೇಮಕಗೊಂಡನಂಗತರ ಪ್ರಬಲ ಲಿಂಗಾ
ಯತ ಸಮುದಾಯ ಬಿಜೆಪಿ ಪರ ವಾಲುವ ಸಾಧ್ಯತೆ ಹೆಚ್ಚಾಗಿದೆ. ಜತೆಗೆ ಅಸಮಾಧಾನಗೊಂಡಿರುವ ಇತರ ಜನ ಸಮುದಾಯಗಳು ಕೂಡ ಬಿಜೆಪಿ ಜತೆ ಕೈಜೋಡಿಸಿದರೆ ಕಷ್ಟವಾಗುತ್ತದೆ. ಹೀಗಾಗಿ ಬಲ ಪ್ರದರ್ಶನದ ಮೂಲಕ ಸರ್ಕಾರವನ್ನು ಗಟ್ಟಿಗೊಳಿಸಿ ಪಕ್ಷ ಸಂಘಟನೆಗೆ ಆದ್ಯತೆ ಕಲ್ಪಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಸರ್ಕಾರಕ್ಕೆ ಮೂರು ವರ್ಷ ತುಂಬುವ ಸಂದರ್ಭವನ್ನು ಸರಳವಾಗಿ ಆಚರಿಸಬೇಕು ಎಂದು ತೀರ್ಮಾನಿಸಲಾಗಿತ್ತಾದರೂ ಇವತ್ತಿನ ಸನ್ನಿವೇಶದಲ್ಲಿ ಪಕ್ಷದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸದಿದ್ದರೆ ಪರಿಸ್ಥಿತಿ ಕಷ್ಟಕರವಾಗಬಹುದು ಎಂದು ಮುಖ್ಯಮಂತ್ರಿಆಪ್ತ ವಲಯ ಸಲಹೆ ನೀಡಿದೆ ಎಂದು ಉನ್ನತ ಮೂಲಗಳು ವಿವರಿಸಿವೆ.
ಈ ಹಿಂದೆ ಜನತಾ ಪರಿವಾರ ಅನುಸರಿಸುತ್ತಿದ್ದ ತಂತ್ರಗಾರಿಕೆಯನ್ನೇ ನಾವು ಅನುಸರಿಸಬೇಕು.ಎಲ್ಲ ನಾಯಕರೂ ಪರಸ್ಪರ ಒಗ್ಗಟ್ಟಿನಿಂದಿದ್ದಾರೆ ಎಂಬ ಸಂದೇಶ ರವಾನೆಯಾಗುವಂತೆ ಮಾಡಬೇಕು ಎಂಬುದು ಸಿಎಂ ಆಪ್ತ ವಲಯದ ಸಲಹೆ.
ಹಿಂದೆ ಜನತಾ ಪರಿವಾರದ ನಾಯಕರಾದ ದೇವೇಗೌಡ,ರಾಮಕೃಷ್ಣ ಹೆಗಡೆ,ಜೆ.ಹೆಚ್.ಪಟೇಲ್,ಎಸ್.ಆರ್.ಬೊಮ್ಮಾಯಿ,ಡಿ.ಮಂಜುನಾಥ್,ಸಿ.ಎಂ.ಇಬ್ರಾಹಿಂ,ಸಿಂಧ್ಯಾ,ಸಿದ್ಧರಾಮಯ್ಯ,ರಮೇಶ್ ಜಿಗಜಿಣಗಿ ಹಾಗೂ ಆರ್.ಎಲ್.ಜಾಲಪ್ಪ ಸೇರಿದಂತೆ ಪ್ರಮುಖ ನಾಯಕರು ಒಂದೇ ವೇದಿಕೆಯ ಮೇಲೆ ಕಾಣಿಸಿಕೊಂಡು ರಾಜ್ಯದ ಜನರಲ್ಲಿ ಉತ್ಸಾಹ ತುಂಬುವ ಕೆಲಸ ಮಾಡುತ್ತಿದ್ದರು.
ಅಂತಹ ಕೆಲಸವನ್ನೇ ನಾವೀಗ ಮಾಡೋಣ.ಆ ಮೂಲಕ ಈಗಾಗಲೇ ಅಧಿಕಾರಕ್ಕೆ ಬಂದಂತೆ ಉತ್ಸಾಹ ಪ್ರದರ್ಶಿಸುತ್ತಿರುವ ಬಿಜೆಪಿಗೆ ತಕ್ಕ ಉತ್ತರ ನೀಡೋಣ ಎಂದು ಸಿಎಂ ಆಪ್ತ ವಲಯ ಸಲಹೆ ನೀಡಿದ್ದು.ಇದನ್ನು ಅನುಷ್ಟಾನಗೊಳಿಸಲು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.
ಪಕ್ಷದಲ್ಲಿರುವ ದಲಿತ ಸಿಎಂ ವಿವಾದ ಸೇರಿದಂತೆ ವಿವಾದಕ್ಕೆ ಕಾರಣವಾಗಿರುವ ಹಲವಾರು ಅಂಶಗಳಿಗೆ ಸರ್ಕಾರಕ್ಕೆ ಮೂರು ವರ್ಷ ಭರ್ತಿಯಾದ ಸಂದರ್ಭದಲ್ಲಿ ಉತ್ತರ ನೀಡುವ ಮೂಲಕ ಸರ್ಕಾರದ ವರ್ಚಸ್ಸನ್ನು ಮತ್ತೆ ಬಲಿಷ್ಟಗೊಳಿಸುವ ಯೋಚನೆ ಸಿದ್ಧರಾಮಯ್ಯ ಅವರದು ಎಂದು ಮೂಲಗಳು ವಿವರ ನೀಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X