Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಹಿಮಾಲಯದಲ್ಲಿ ಗಾಂಜಾ ಬೆಳೆಯ ರಹಸ್ಯ...

ಭಾರತದ ಹಿಮಾಲಯದಲ್ಲಿ ಗಾಂಜಾ ಬೆಳೆಯ ರಹಸ್ಯ ಕೃಷಿ

ವಾರ್ತಾಭಾರತಿವಾರ್ತಾಭಾರತಿ11 April 2016 7:31 PM IST
share
ಭಾರತದ ಹಿಮಾಲಯದಲ್ಲಿ ಗಾಂಜಾ ಬೆಳೆಯ ರಹಸ್ಯ ಕೃಷಿ

ಹೊಸದಿಲ್ಲಿ,ಎ.11: ವಿಶಿಷ್ಟ ಸಂಪ್ರದಾಯಗಳ ಆಗರವಾಗಿರುವ ಭಾರತದ ಹಿಮಾಲಯದಲ್ಲಿ ಹರಡಿಕೊಂಡಿರುವ ಸಾವಿರಾರು ಗ್ರಾಮಗಳು ಅಂತರರಾಷ್ಟ್ರೀಯ ನಿಷೇಧದ ನಡುವೆಯೂ ಗಾಂಜಾ ಮತ್ತು ಅಫೀಮು ಬೆಳೆಯನ್ನೇ ನಂಬಿಕೊಂಡು ಉಸಿರು ಹಿಡಿದುಕೊಂಡಿವೆ. ಭಾರತದಲ್ಲಿ ತಯಾರಾಗುವ ಚರಸ್ ಮತ್ತು ಹಶಿಷ್‌ಗಳಿಗೆ ಕಚ್ಚಾ ಸರಕು ಪೂರೈಕೆಯಾಗುತ್ತಿರುವುದೇ ಈ ಹಿಮಾಲಯದ ಮಡಿಲಿನಿಂದ!

ಭಾರತದಲ್ಲಿ ಗಾಂಜಾ ಅಥವಾ ಭಂಗಿಸೊಪ್ಪಿನ ಬಳಕೆ ವೇದಗಳ ಕಾಲದಿಂದಲೂ ನಡೆದುಕೊಂಡು ಬಂದಿದೆ. ಶತಶತಮಾನಗಳಿಂದಲೂ ಅದು ಧಾರ್ಮಿಕ ವಿಧಿಗಳು ಮತ್ತು ಉತ್ಸವಗಳ ಭಾಗವಾಗಿದೆ. ಚರಸ್ ತಯಾರಿಕೆಗೆ ಬಳಕೆಯಾಗುವ ‘ಕ್ಯಾನಬೀಸ್ ಇಂಡಿಕಾ’ ಎಂಬ ವೈಜ್ಞಾನಿಕ ಹೆಸರು ಹೊಂದಿರುವ ಗಾಂಜಾವನ್ನು ಹಿಮಾಲಯದ ಹಲವಾರು ಭಾಗಗಳಲ್ಲಿ ವ್ಯಾಪಕವಾಗಿ ಬೆಳೆಸಲಾಗುತ್ತಿದೆ. ಎಲ್ಲ ನಿಯಂತ್ರಣಗಳನ್ನೂ ಮೀರಿ ಹೆಚ್ಚೆಚ್ಚು ಎತ್ತರದ ಪ್ರದೇಶಗಳಲ್ಲಿ ಬೆಳೆಯಲಾಗುತ್ತಿರುವ ಗಾಂಜಾ ಬೆಳೆಯ ಹುಟ್ಟಡಗಿಸಲು ಅಧಿಕಾರಿಗಳಿಗೆ ಅಸಾಧ್ಯವಾಗಿದೆ. ವ್ಯಾಪಕವಾಗಿ ಬೆಳೆಯಲಾಗುತ್ತಿದ್ದರೂ ಈ ಬಗ್ಗೆ ಯಾವುದೇ ಸಮೀಕ್ಷೆ ಈವರೆಗೆ ನಡೆಯದ್ದರಿಂದ ಯಾವುದೇ ಅಧಿಕೃತ ಅಂಕಿಅಂಶಗಳು ಲಭ್ಯವಿಲ್ಲ.

1980ರ ದಶಕದವರೆಗೂ ಗಾಂಜಾ ಮತ್ತು ಅಫೀಮು ಭಾರತದಲ್ಲಿ ಕಾನೂನು ಬದ್ಧವಾಗಿದ್ದು,ಸರಕಾರದ ಅನುಮತಿ ಪಡೆದುಕೊಂಡು ಖರೀದಿಸಬಹುದಾಗಿತ್ತು. ಹಿಂದೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯು ಗಾಂಜಾ ವ್ಯಾಪಾರದಲ್ಲಿ ತೊಡಗಿಕೊಂಡಿತ್ತು. 1985ರಲ್ಲಿ ಭಾರತವು ವಿವಾದಾತ್ಮಕ ಎನ್‌ಡಿಪಿಎಸ್ ಕಾಯ್ದೆಯನ್ನು ಅಂಗೀಕರಿಸಿದ್ದು, ಇದರ ಅನ್ವಯ ಗಾಂಜಾ ಕೃಷಿ ಮತ್ತು ಸೇವನೆ ಅಪರಾಧವಾಗಿದೆ. ಆದರೆ ಈ ಕಾಯ್ದೆಯು ಗಾಂಜಾವನ್ನು ನಿಯಂತ್ರಿಸುವಲ್ಲಿ ವಿಫಲಗೊಂಡಿದೆ. ಗಾಂಜಾ ಕಳ್ಳಸಾಗಣೆ ದಿನೇದಿನೇ ಹೆಚ್ಚುತ್ತಲೇ ಇದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾದಕ ದ್ರವ್ಯಗಳ ಬೆಲೆಗಳೂ ಹೆಚ್ಚುತ್ತಲೇ ಇವೆ.

ಚರಸ್‌ನ್ನು ವಿಶ್ವದಲ್ಲಿಯೇ ಅತ್ಯುತ್ತಮ ಹಶಿಷ್ ಎಂದು ಪರಿಗಣಿಸಲಾಗುತ್ತಿದ್ದು, ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಕೇವಲ ಒಂದು ಗ್ರಾಂ ಸುಮಾರು 20 ಅಮೆರಿಕನ್ ಡಾಲರ್‌ಗಳಿಗೆ ಮಾರಾಟವಾಗುತ್ತದೆ. ಆದರೆ ಚರಸ್ ಉತ್ಪಾದಕರಿಗೆ ಸಿಗುವುದು ಅಲ್ಪ ಲಾಭ ಮಾತ್ರ. ಅವರು ಇಂದಿಗೂ ಆಧುನಿಕತೆಯಿಂದ ದೂರವಾಗಿ ಪ್ರತಿಕೂಲ ಸ್ಥಿತಿಗಳಲ್ಲಿ ದೈನ್ಯದ ಬದುಕನ್ನು ಸಾಗಿಸುತ್ತಿದ್ದಾರೆ. ಅವರಿಗೆ ಬದಲಿ ಜೀವನೋಪಾಯಗಳೂ ಇಲ್ಲ. ಗಾಂಜಾ ಮತ್ತು ಅಫೀಮು ದೇವರ ಉಡುಗೊರೆ ಎಂದು ಅವರು ಭಾವಿಸಿದ್ದಾರೆ. ಜಗತ್ತು ಬದಲಾವಣೆಗಳಿಗೆ ತೆರೆದುಕೊಳ್ಳುತ್ತಿದ್ದರೂ ಗಾಂಜಾವನ್ನು ಭಾರತದಲ್ಲಿ ಕಾನೂನುಬದ್ಧಗೊಳಿಸುವ ಕುರಿತಂತೆ ಚರ್ಚೆಯು ಇನ್ನೂ ಭ್ರೂಣಾವಸ್ಥೆಯಲ್ಲಿಯೇ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X